ಸ್ಯಾಂಡಲ್ವುಡ್ (Sandalwood) ನಟಿ ರಚಿತಾ ರಾಮ್ (Rachitha Ram) ಅವರು ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೈವ ಕೊರಗಜ್ಜಗೆ ಪೂಜೆ ಸಲ್ಲಿಸಿ ರಚಿತಾ ರಾಮ್ ಪ್ರಾರ್ಥನೆ ಮಾಡಿದ್ದಾರೆ.
‘ಬುಲ್ ಬುಲ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಚಿತಾ ರಾಮ್, ಕನ್ನಡದ ಟಾಪ್ ನಟರ ಜೊತೆ ನಟಿಸಿದ್ದಾರೆ. ತೆಲುಗಿನ ಸಿನಿಮಾದಲ್ಲೂ ನಟಿಸಿ ಬಂದಿದ್ದಾರೆ. ‘ಮ್ಯಾಟ್ನಿ’, ‘ಬ್ಯಾಡ್ ಮ್ಯಾನರ್ಸ್’ (Bad Manners) ಸಿನಿಮಾ ರಿಲೀಸ್ಗೆ ರೆಡಿಯಾಗಿರುವ ಬೆನ್ನಲ್ಲೇ ನಟಿ ರಚಿತಾ ಕೊರಗಜ್ಜ ಕ್ಷೇತ್ರಕ್ಕೆ (Koragajja) ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ಟರೆ ತಪ್ಪಲ್ಲ – ನಟ ಡಾಲಿ
ಮಂಗಳೂರು ಹೊರವಲಯದ ಕುತ್ತಾರಿನಲ್ಲಿರುವ ಕೊರಗಜ್ಜ ಕ್ಷೇತ್ರ ಕ್ಷೇತ್ರದಲ್ಲಿ ಮುಂಬರುವ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗೆ ಪ್ರಾರ್ಥಸಿ, ರಚಿತಾ ರಾಮ್ ಪೂಜೆ ಸಲ್ಲಿಸಿದ್ದಾರೆ. ಬಳಿಕ ರಚಿತಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ದರು. ಹಾಗಾಗಿ ನನಗೂ ಕೊರಗಜ್ಜ ದೈವದಲ್ಲಿ ಭಕ್ತಿಯಿಂದ ಪ್ರಾರ್ಥಿಸಬೇಕು ಅನ್ನಿಸಿತು. ಈ ಕ್ಷೇತ್ರ ಪ್ರಾಕೃತಿಕ ಸೌಂದರ್ಯವನ್ನು ಒಳಗೊಂಡು ತುಂಬಾ ಚೆನ್ನಾಗಿದೆ. ನನ್ನ ಮುಂಬರುವ ಚಿತ್ರಗಳ ಬಗ್ಗೆ ಪ್ರಾರ್ಥಿಸಿದ್ದೇನೆ.