ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಕಿರುತೆರೆ ನಟಿ ಪವಿತ್ರಾ ಜಯರಾಂ (Pavitra Jayaram) ಅಂತ್ಯಕ್ರಿಯೆ ಹುಟ್ಟುರಾದ ಮಂಡ್ಯದ ಉಮ್ಮಡಹಳ್ಳಿಯಲ್ಲಿ ಜರುಗಿದೆ. ಒಕ್ಕಲಿಗ ಸಂಪ್ರದಾಯದಂತೆ ಪವಿತ್ರಾ ಕಾರ್ಯ ನೆರವೇರಿದೆ. ಇದನ್ನೂ ಓದಿ:ಸೀರಿಯಲ್ ಚಿತ್ರೀಕರಣದ ವೇಳೆ ಮಾಡಿದ ತಪ್ಪು – ʻಸೀತಾರಾಮʼ ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಫೈನ್!
ಪವಿತ್ರಾರ ಅಂತ್ಯಕ್ರಿಯೆ ವೇಳೆ ಸಹನಟ ಚಂದ್ರಶೇಖರ್, ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಂದು ಗೌಡ ಕೂಡ ಭಾಗಿಯಾಗುವ ಮೂಲಕ ಅಂತಿಮ ದರ್ಶನ ಪಡೆದರು.
ಪವಿತ್ರಾ ಅವರು ಬೆಂಗಳೂರಿನಿಂದ ಹೈದರಾಬಾದ್ಗೆ ಪ್ರಯಾಣಿಸುತ್ತಿದ್ದ ಕಾರು ನಿನ್ನೆ (ಮೇ 12) ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿತ್ತು. ಇದೀಗ ನಟಿಯ ಸಾವು ಕುಟುಂಬಕ್ಕೆ, ಆಪ್ತರಿಗೆ ಶಾಕ್ ಕೊಟ್ಟಿದೆ.