Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಧಾರವಿಲ್ಲದೆ ಊಹಿಸಿದ ಮಾತ್ರಕ್ಕೆ ತನಿಖೆಗೆ ಆದೇಶಿಸಲ್ಲ – ಮೋದಿ ಸರ್ಕಾರಕ್ಕೆ ಬಿಗ್ ರಿಲೀಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಧಾರವಿಲ್ಲದೆ ಊಹಿಸಿದ ಮಾತ್ರಕ್ಕೆ ತನಿಖೆಗೆ ಆದೇಶಿಸಲ್ಲ – ಮೋದಿ ಸರ್ಕಾರಕ್ಕೆ ಬಿಗ್ ರಿಲೀಫ್

Latest

ಆಧಾರವಿಲ್ಲದೆ ಊಹಿಸಿದ ಮಾತ್ರಕ್ಕೆ ತನಿಖೆಗೆ ಆದೇಶಿಸಲ್ಲ – ಮೋದಿ ಸರ್ಕಾರಕ್ಕೆ ಬಿಗ್ ರಿಲೀಫ್

Public TV
Last updated: November 14, 2019 12:14 pm
Public TV
Share
4 Min Read
Rafale deal modi
SHARE

– ರಫೇಲ್ ತೀರ್ಪು ಮರು ಪರಿಶೀಲನಾ ಅರ್ಜಿ ವಜಾ
– ಮೋದಿ ಸರ್ಕಾರಕ್ಕೆ ಮತ್ತೆ ಸುಪ್ರೀಂನಿಂದ ಕ್ಲೀನ್ ಚಿಟ್

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಯ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ್ದ ತೀರ್ಪನ್ನು ಮರುಪರಿಶೀಲನೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಮೂಲಕ ರಫೇಲ್ ಒಪ್ಪಂದದಲ್ಲಿ ಹಗರಣ ನಡೆದಿದೆ ಎನ್ನುವ ಆರೋಪಕ್ಕೆ ಗುರಿಯಾಗಿದ್ದ ಮೋದಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.

ಯಾವುದೇ ಆಧಾರವಿಲ್ಲದೆ ಅಕ್ರಮ ನಡೆದಿದೆ ಎಂದು ವ್ಯಕ್ತಿಗಳು ಊಹಿಸಿದ ಮಾತ್ರಕ್ಕೆ ಎಫ್‍ಐಆರ್ ದಾಖಲಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ. ಈ ಅರ್ಜಿಗಳು ಮರುಪರಿಶೀಲನೆಗೆ ಯೋಗ್ಯವಲ್ಲ ಎಂದು ಹೇಳಿ ಮುಖ್ಯ.ನ್ಯಾ ರಂಜನ್ ಗೊಗೋಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಎಲ್ಲ  ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿದೆ.

rafale supreme court

ಏನಿದು ಪ್ರಕರಣ?
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್ ಶರ್ಮಾ, ವಿನೀತಾ ದಾಂಡ, ಆಪ್ ನಾಯಕ ಸಂಜಯ್ ಸಿಂಗ್ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ರಫೇಲ್ ಒಪ್ಪಂದವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ವಕೀಲರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು. ಈ ಅರ್ಜಿಗಳನ್ನು ಒಟ್ಟಾಗಿಸಿದ್ದ ಮುಖ್ಯ.ನ್ಯಾ ರಂಜನ್ ಗೊಗೋಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿತ್ತು. 2018ರ ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿದ್ದ ಸುಪ್ರೀಂಕೋರ್ಟ್ ಡಿಸೆಂಬರ್ 14ರಂದು ತೀರ್ಪು ಪ್ರಕಟಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು. ಇದನ್ನೂ ಓದಿ: ಬೆಂಗಳೂರಿಗೆ ಬಂದಿಳಿಯಿತು ರಫೇಲ್ ವಿಮಾನಗಳು – ವಿಶೇಷತೆ ಏನು? ವಿಡಿಯೋ ನೋಡಿ

ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಯಾಕೆ?
ನಿಯಮಗಳ ಪ್ರಕಾರ ಸಿಎಜಿ ವರದಿಯನ್ನು ಮೊದಲು ಸಂಸತ್‍ನಲ್ಲಿ ಮಂಡಿಸಿ ನಂತರ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪರಿಶೀಲನೆಗೆ ಕಳಿಸಬೇಕು. ಸಿಎಜಿ ವರದಿ ಸಂಸತ್ತಿಗೆ ಮಂಡನೆಯಾಗದೇ ಕೋರ್ಟ್ ತೀರ್ಪಿನಲ್ಲಿ ಉಲ್ಲೇಖವಾಗಿದ್ದು ಹೇಗೆ ಎನ್ನುವ ಪ್ರಶ್ನೆಯನ್ನು ಕಾಂಗ್ರೆಸ್ ಕೇಳಿತ್ತು. ಸುಪ್ರೀಂ ಕೋರ್ಟ್ ಈ ವಿಚಾರವನ್ನು ಉಲ್ಲೇಖಿಸಿದ ಬೆನ್ನಲ್ಲೇ ಪಿಐಎಲ್ ಸಲ್ಲಿಸಿದ್ದ ಪ್ರಮುಖ ವ್ಯಕ್ತಿಗಳಾದ ಪ್ರಶಾಂತ್ ಭೂಷಣ್, ಸಾರ್ವಜನಿಕ ಲೆಕ್ಕ ಸಮಿತಿಯ ಮುಂದೆ ಸಿಎಜಿ ವರದಿ ಸಲ್ಲಿಕೆಯಾಗಿಲ್ಲ. ಸಾರ್ವಜನಿಕವಾಗಿಯೂ ಈ ವರದಿ ಲಭ್ಯವಿಲ್ಲ. ಮೋದಿ ಸರ್ಕಾರ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿಯನ್ನು ನೀಡಿದೆ ಎಂದು ಹೇಳಿ ಕಿಡಿಕಾರಿದ್ದರು. ಇದನ್ನೂ ಓದಿ:ಒಂದೇ ಯುದ್ಧ ವಿಮಾನ ನಿರ್ಮಿಸದ ರಿಲಯನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿದ್ದು ಯಾಕೆ: ಪ್ರಶ್ನೆಗೆ ಡಸಾಲ್ಟ್ ಸಿಇಒ ಉತ್ತರ ನೀಡಿದ್ದು ಹೀಗೆ

07rafale1

ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರೆ, ಇದರ ಜೊತೆಗೆ ಆಮ್ ಆದ್ಮಿ ಪಕ್ಷದ ಮುಖಂ ಸಂಜಯ್ ಸಿಂಗ್ ಅವರು ಕೂಡ ತೀರ್ಪು ಮರುಪರಿಶೀಲನೆಯಾಗಬೇಕು ಎಂದು ಅರ್ಜಿ ಸಲ್ಲಿಸಿದ್ದರು.

2018 ಡಿಸೆಂಬರ್ 14ರಂದು ತೀರ್ಪು ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ, ತೀರ್ಪಿನ ಉಲ್ಲೇಖ ಇರುವ ವಾಕ್ಯದಲ್ಲಿ ಕೆಲವು ತಿದ್ದುಪಡಿಗಳಾಗಬೇಕಿದೆ ಎಂದು ಅಫಿಡವಿಟ್ ಮನವಿ ಸಲ್ಲಿಸಿತ್ತು. ಮಹಾಲೇಖಪಾಲರ ವರದಿ(ಸಿಎಜಿ) ಹಾಗೂ ಸಾರ್ವಜನಿಕ ಲೆಕ್ಕ ಸಮಿತಿಯ(ಪಿಎಸಿ) ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಈ ದಾಖಲೆಗಳ ವಿಷಯವನ್ನು ತಪ್ಪಾಗಿ ವ್ಯಾಖ್ಯಾನ ಮಾಡಲಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋರ್ಟ್ ಮೊರೆ ಹೊಗಿತ್ತು.  ಇದನ್ನೂ ಓದಿ:ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ

rafale

 

ಕೇಂದ್ರ ಅರ್ಜಿ ಸಲ್ಲಿಸಿದ್ದು ಯಾಕೆ?
ರಫೇಲ್ ಒಪ್ಪಂದ ಕುರಿತಂತೆ ಸಿಎಜಿ ವರದಿಯನ್ನು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಪರಿಶೀಲನೆಗೆ ಒಳಪಡಿಸಿದೆ ಎಂದು ಸುಪ್ರೀಂಕೋರ್ಟ್ ಡಿಸೆಂಬರ್ 14 ರಂದು ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ತೀರ್ಪಿನ 25 ಪ್ಯಾರಾದಲ್ಲಿ ಸಿಎಜಿ ವರದಿಯನ್ನು ಸಾರ್ವಜನಿಕ ಲೆಕ್ಕ ಸಮಿತಿಯ(ಪಿಎಸಿ) ಮುಂದೆ ಇಡಲಾಗಿದೆ. ಅಷ್ಟೇ ಅಲ್ಲದೇ ಇದು ಸಾರ್ವಜನಿಕವಾಗಿ ಲಭ್ಯವಿದೆ ಎಂದು ಉಲ್ಲೇಖಿಸಿತ್ತು. ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ನೀಡಿದ ಈ ವಿಚಾರಗಳನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು.

CAG Supreme Court

ಫೆಬ್ರವರಿ 13 ರಂದು ಸಿಎಜಿ ವರದಿ ಸಂಸತ್ತಿನಲ್ಲಿ ಮಂಡನೆಯಾಗಿದ್ದು, ಯುಪಿಎ ಮಾಡಿಕೊಂಡಿದ್ದ ರಫೇಲ್ ಖರೀದಿ ಒಪ್ಪಂದಕ್ಕೆ ಹೋಲಿಕೆ ಮಾಡಿದರೆ ಎನ್‍ಡಿಎ ಮಾಡಿಕೊಂಡಿರುವ ಒಪ್ಪಂದ ಶೇ.2.8 ಎಷ್ಟು ಅಗ್ಗ ಎಂದು ಹೇಳಿತ್ತು. ಇದನ್ನೂ ಓದಿ: ರಫೇಲ್ ಡೀಲ್ ? ಯಾವುದು ಅಗ್ಗ? ಯಾವುದು ದುಬಾರಿ?

ಡಿ.14ರ ಸುಪ್ರೀಂ ತೀರ್ಪಿನಲ್ಲಿ ಏನಿತ್ತು?:
ರಫೇಲ್ ಖರೀದಿ ಒಪ್ಪಂದದಲ್ಲಿ ಸಂದೇಹ ಪಡುವ ಅಗತ್ಯವಿಲ್ಲ. ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವುದಕ್ಕೆ ಯಾವುದಕ್ಕೆ ಸಾಕ್ಷ್ಯಗಳು ಸಿಕ್ಕಿಲ್ಲ. ಗುಣಮಟ್ಟದ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದಿರುವ ಖರೀದಿ ಒಪ್ಪಂದ ಬೆಲೆಯ ಪರಾಮರ್ಶೆ ಮಾಡುವುದು ಕೋರ್ಟ್ ಕೆಲಸವಲ್ಲ. ದೇಶಕ್ಕೆ ನಾಲ್ಕು ಮತ್ತು ಐದನೇಯ ತಲೆಮಾರಿನ ಫೈಟರ್ ಜೆಟ್ ಭಾರತೀಯ ವಾಯುಸೇನೆಗೆ ನಿಯೋಜಿಸುವ ಅಗತ್ಯವಿದೆ. ಖರೀದಿ, ಬೆಲೆ ನಿರ್ಣಯ, ದೇಶಿ ಪಾಲುದಾರ ಆಯ್ಕೆ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಕಂಡು ಬರುವುದಿಲ್ಲ. ಒಪ್ಪಂದದಲ್ಲಿ ಭಾಗಿಯಾದ ಎಲ್ಲರೂ ಖರೀದಿ ಹೇಗೆ ನಡೆಯಿತು ಎನ್ನುವ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ತುಲಾತ್ಮಕ ಬೆಲೆ ವಿವರವನ್ನು ನೀಡಿ ವಿಮಾನಗಳನ್ನು ಖರೀದಿಸಿ ಎಂದು ಹೇಳುವುದು ಕೋರ್ಟ್ ಕೆಲಸವಲ್ಲ. ನಾವು ಕೇಳಿದ ಪ್ರಶ್ನೆಗಳಿಗೆ ಸಿಕ್ಕಿದ ಉತ್ತರಿಂದ ನಮ್ಮ ಸಂಶಯ ಪರಿಹಾರವಾಗಿದ್ದು ತೃಪ್ತಿಯಾಗಿದೆ. ರಕ್ಷಣೆಯಂತಹ ಸೂಕ್ಷ್ಮ ವಿಚಾರದಲ್ಲಿ ತನಿಖೆಗೆ ಆದೇಶ ನೀಡುವುದು ಸರಿಯಲ್ಲ. ದೇಶಿ ಪಾಲುದಾರನ ಆಯ್ಕೆ ಮಾಡುವುದು ಕಂಪನಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿತ್ತು.

rafale jet 2

TAGGED:kannada newsnarendra modiRafaleRafale dealSupreme Courtಕಾಂಗ್ರೆಸ್ನವದೆಹಲಿಪಬ್ಲಿಕ್ ಟಿವಿರಫೇಲ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Rain 1
Belgaum

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ – ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಸೆರೆ

Public TV
By Public TV
17 minutes ago
Cucumber Industry
Districts

ಹಾಸನದ ಮಿಡಿ ಸೌತೆ ಉದ್ಯಮಕ್ಕೆ ತಟ್ಟಿದ ಇರಾನ್‌ – ಇಸ್ರೇಲ್ ಯುದ್ಧದ ಬಿಸಿ

Public TV
By Public TV
47 minutes ago
Accident between two Thar cars on the highway Chikkaballapura
Chikkaballapur

ಹೈವೇಯಲ್ಲಿ ಎರಡು ಥಾರ್ ಕಾರುಗಳ ಮಧ್ಯೆ ಅಪಘಾತ

Public TV
By Public TV
1 hour ago
Srirama pattabhisheka
Latest

ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ

Public TV
By Public TV
1 hour ago
Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
2 hours ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?