Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ

Latest

ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ

Public TV
Last updated: March 6, 2019 9:00 pm
Public TV
Share
3 Min Read
rafale jet
SHARE

ನವದೆಹಲಿ: ಪಾಕಿಸ್ತಾನದ ಎಫ್ 16 ವಿಮಾನಕ್ಕೆ ತಡೆ ಒಡ್ಡಬೇಕಾದರೆ ಭಾರತಕ್ಕೆ ರಫೇಲ್ ಯುದ್ಧ ವಿಮನ ಅಗತ್ಯವಿದೆ ಎಂದು ಹೇಳಿ, ರಫೇಲ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದ ರಹಸ್ಯ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳ್ಳತನವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.

ರಫೇಲ್ ತೀರ್ಪಿನ ಮರುಪರಿಶೀಲನಾ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಸಂಜೀವ್ ಕಿಶನ್ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ಅರ್ಜಿದಾರರಾದ ಪ್ರಶಾಂತ್ ಭೂಷಣ್ ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿಸಿದರು. ಈ ಸಂದರ್ಭದಲ್ಲಿ ಕೋರ್ಟ್ ಈ ಅರ್ಜಿಗೆ ಸಂಬಂಧಿಸಿದಂತೆ ನಾವು ಯಾವುದೇ ಹೊಸ ದಾಖಲೆಗಳನ್ನು ಪರಿಗಣಿಸುವುದಿಲ್ಲ ಎಂದು ಹೇಳಿತು.

07rafale1

ನ್ಯಾಯಾಲಯದಿಂದ ಈ ಅಭಿಪ್ರಾಯ ಬಂದ ಕೂಡಲೇ, ಈ ದಾಖಲೆಗಳು ಸೂಕ್ಷವಾಗಿದ್ದು, ರಕ್ಷಣಾ ಸಚಿವಾಲಯದ ಮೂಲಗಳಿಂದ ನಾನು ಪಡೆದಿದ್ದೇನೆ ಪ್ರಶಾಂತ್ ಭೂಷಣ್ ತಿಳಿಸಿದರು. ಈ ಸಂದರ್ಭದಲ್ಲಿ ಅಟಾರ್ನಿ ಜನರಲ್ ಕೆಸಿ ವೇಣುಗೋಪಾಲ್, ರಕ್ಷಣಾ ಸಚಿವಾಲಯದಿಂದ ಕಳ್ಳತನವಾಗಿರುವ ಮಾಹಿತಿಯನ್ನು ಆಧಾರವಾಗಿ ಇಟ್ಟುಕೊಂಡು ಉಲ್ಲೇಖಿಸಿ ವರದಿಯನ್ನು  ಪ್ರಶಾಂತ್ ಭೂಷಣ್ ಹೇಳುತ್ತಿದ್ದಾರೆ. ರಕ್ಷಣಾ ಇಲಾಖೆಯ ಮಾಜಿ ಅಥವಾ ಹಾಲಿ ಉದ್ಯೋಗಿಗಳು ದಾಖಲೆಗಳನ್ನು ಕದ್ದಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯ ನ್ಯಾ. ರಂಜನ್ ಗೊಗೋಯ್ ಈ ಸಂಬಂಧ ಸರ್ಕಾರ ಏನು ಕ್ರಮವನ್ನು ತೆಗೆದುಕೊಂಡಿದೆ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ತನಿಖೆ ನಡೆಯುತ್ತಿದೆ ಎಂದು ಎಜೆ ಉತ್ತರಿಸಿದರು.

rafale

ರಫೇಲ್ ಸುದ್ದಿ ಪ್ರಕಟಿಸಿ ವಿಚಾರಣೆ ವೇಳೆ ಪ್ರಭಾವ ಮೂಡಿಸುವ ಯತ್ನ ನಡೆಯುತ್ತಿದೆ. ಈ ಕಾರಣಕ್ಕಾಗಿ ಮಂಗಳವಾರ ಒಂದು ಸುದ್ದಿ ಪ್ರಕಟವಾಗಿದ್ದರೆ ಇಂದು ಇನ್ನೊಂದು ಸುದ್ದಿ ಪ್ರಕಟವಾಗಿದೆ. ಈ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಅರ್ಜಿದಾರರು ವಾದಿಸುತ್ತಿದ್ದಾರೆ. ಅರ್ಜಿದಾರರು ಉಲ್ಲೇಖಿಸಿದ ಮಾಹಿತಿ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಬರುತ್ತದೆ ಮತ್ತು ನ್ಯಾಯಾಂಗದ ಉಲ್ಲಂಘನೆಯಾಗಿದೆ. ಈ ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಾಗಬಾರದು. ಹೀಗಾಗಿ ಇದು ಅಧಿಕೃತ ರಹಸ್ಯ ಕಾಯ್ದೆಯ ಉಲ್ಲಂಘನೆ. ಈ ದಾಖಲೆಗಳನ್ನು ಯಾವುದೇ ಕಾರಣಕ್ಕೆ ಅರ್ಜಿಯ ಜೊತೆ ಪರಿಗಣಿಸಬಾರದು ಎಂದು ವಾದಿಸಿದರು.

ರಫೇಲ್ ಖರೀದಿ ಪ್ರಕ್ರಿಯೆ ನ್ಯಾಯಾಂಗದ ಪರಾಮರ್ಶೆಯ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ತೀರ್ಪು ಮರುಪರಿಶೀಲನೆ ನಡೆಸಬೇಕೆಂದು ಸಲ್ಲಿಕೆಯಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸಬೇಕೆಂದು ಎಜಿ ಮನವಿ ಮಾಡಿದರು.

rafale bengaluru 1 1

ಏರ್ ಸರ್ಜಿಕಲ್ ಸ್ಟ್ರೈಕ್ ನಡೆದ ಬಳಿಕ ಪಾಕ್ ಸೇನೆಯ ದಾಳಿಯನ್ನು ಪ್ರಸ್ತಾಪಿಸಿದ ಎಜೆ, ಒಂದು ವೇಳೆ ಎಫ್ 16 ವಿಮಾನಗಳಿಗೆ ತಡೆ ಒಡ್ಡಬೇಕಾದರೆ ರಫೇಲ್ ದೇಶಕ್ಕೆ ಅಗತ್ಯವಿದೆ. ಈಗಾಗಲೇ ತರಬೇತಿಗಾಗಿ ನಮ್ಮ ಪೈಲಟ್ ಗಳು ಪ್ಯಾರಿಸ್ ಗೆ ತೆರಳಿದ್ದಾರೆ. ಇದೇ ಸೆಪ್ಟೆಂಬರ್ ನಲ್ಲಿ ಹಾರಲು ಸಿದ್ಧವಾಗಿರುವ ಸ್ಥಿತಿಯಲ್ಲಿರುವ ರಫೇಲ್ ವಿಮಾನ ವಾಯುಸೇನೆಗೆ ಸೇರ್ಪಡೆಯಾಗಲಿದೆ ಎಂದು ಹೇಳಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ವಿಚಾರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತಾ ವಿಚಾರವನ್ನು ಉಲ್ಲಂಘಿಸಿ ಸರ್ಕಾರಿ ದಾಖಲೆಯನ್ನು ಪ್ರಕಟಿಸಿದ್ದಕ್ಕಾಗಿ ಎರಡು ಮಾಧ್ಯಮಗಳ ವಿರುದ್ಧ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಎಜೆ ನ್ಯಾಯಾಲಯಕ್ಕೆ ತಿಳಿಸಿದರು.

ದೀರ್ಘವಾಗಿ ವಾದ, ಪ್ರತಿವಾದವನ್ನು ಆಲಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಮಾರ್ಚ್ 14ರ ಮಧ್ಯಾಹ್ನ 3 ಗಂಟೆಗೆ ಮುಂದೂಡಿತು.

ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ಕೇಂದ್ರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಯಲ್ಲೇ ಕೇಂದ್ರ ಸರ್ಕಾರ ತೀರ್ಪಿನ ಉಲ್ಲೇಖ ಇರುವ ವಾಕ್ಯದಲ್ಲಿ ಕೆಲವು ತಿದ್ದುಪಡಿಗಳಾಗಬೇಕಿದೆ ಎಂದು ಅಫಿಡವಿಟ್ ಮನವಿ ಸಲ್ಲಿಸಿತ್ತು. ಮಹಾಲೇಖಪಾಲರ ವರದಿ(ಸಿಎಜಿ) ಹಾಗೂ ಪಿಎಸಿಗೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಈ ದಾಖಲೆಗಳ ವಿಷಯವನ್ನು ತಪ್ಪಾಗಿ ವ್ಯಾಖ್ಯಾನ ಮಾಡಲಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋರ್ಟ್ ಮೊರೆ ಹೋಗಿತ್ತು.

supreme Court 1521081735

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Defencedefence ministryPrashanth BhushanRafaleSupreme Courtಎಫ್ 16ನ್ಯಾಯಾಂಗ ಉಲ್ಲಂಘನೆಪ್ರಶಾಂತ್ ಭೂಷಣ್ರಫೇಲ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
16 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
17 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
31 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
51 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
54 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?