Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ

Latest

ಪಾಕ್ ಎಫ್ 16 ವಿರುದ್ಧ ಹೋರಾಡಲು ಬೇಕೇಬೇಕು – ರಕ್ಷಣಾ ಸಚಿವಾಲಯದಿಂದ ರಫೇಲ್ ರಹಸ್ಯ ದಾಖಲೆ ಕಳ್ಳತನ: ಕೇಂದ್ರ

Public TV
Last updated: March 6, 2019 9:00 pm
Public TV
Share
3 Min Read
rafale jet
SHARE

ನವದೆಹಲಿ: ಪಾಕಿಸ್ತಾನದ ಎಫ್ 16 ವಿಮಾನಕ್ಕೆ ತಡೆ ಒಡ್ಡಬೇಕಾದರೆ ಭಾರತಕ್ಕೆ ರಫೇಲ್ ಯುದ್ಧ ವಿಮನ ಅಗತ್ಯವಿದೆ ಎಂದು ಹೇಳಿ, ರಫೇಲ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದ ರಹಸ್ಯ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳ್ಳತನವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.

ರಫೇಲ್ ತೀರ್ಪಿನ ಮರುಪರಿಶೀಲನಾ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಸಂಜೀವ್ ಕಿಶನ್ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ಅರ್ಜಿದಾರರಾದ ಪ್ರಶಾಂತ್ ಭೂಷಣ್ ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿಸಿದರು. ಈ ಸಂದರ್ಭದಲ್ಲಿ ಕೋರ್ಟ್ ಈ ಅರ್ಜಿಗೆ ಸಂಬಂಧಿಸಿದಂತೆ ನಾವು ಯಾವುದೇ ಹೊಸ ದಾಖಲೆಗಳನ್ನು ಪರಿಗಣಿಸುವುದಿಲ್ಲ ಎಂದು ಹೇಳಿತು.

07rafale1

ನ್ಯಾಯಾಲಯದಿಂದ ಈ ಅಭಿಪ್ರಾಯ ಬಂದ ಕೂಡಲೇ, ಈ ದಾಖಲೆಗಳು ಸೂಕ್ಷವಾಗಿದ್ದು, ರಕ್ಷಣಾ ಸಚಿವಾಲಯದ ಮೂಲಗಳಿಂದ ನಾನು ಪಡೆದಿದ್ದೇನೆ ಪ್ರಶಾಂತ್ ಭೂಷಣ್ ತಿಳಿಸಿದರು. ಈ ಸಂದರ್ಭದಲ್ಲಿ ಅಟಾರ್ನಿ ಜನರಲ್ ಕೆಸಿ ವೇಣುಗೋಪಾಲ್, ರಕ್ಷಣಾ ಸಚಿವಾಲಯದಿಂದ ಕಳ್ಳತನವಾಗಿರುವ ಮಾಹಿತಿಯನ್ನು ಆಧಾರವಾಗಿ ಇಟ್ಟುಕೊಂಡು ಉಲ್ಲೇಖಿಸಿ ವರದಿಯನ್ನು  ಪ್ರಶಾಂತ್ ಭೂಷಣ್ ಹೇಳುತ್ತಿದ್ದಾರೆ. ರಕ್ಷಣಾ ಇಲಾಖೆಯ ಮಾಜಿ ಅಥವಾ ಹಾಲಿ ಉದ್ಯೋಗಿಗಳು ದಾಖಲೆಗಳನ್ನು ಕದ್ದಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯ ನ್ಯಾ. ರಂಜನ್ ಗೊಗೋಯ್ ಈ ಸಂಬಂಧ ಸರ್ಕಾರ ಏನು ಕ್ರಮವನ್ನು ತೆಗೆದುಕೊಂಡಿದೆ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ತನಿಖೆ ನಡೆಯುತ್ತಿದೆ ಎಂದು ಎಜೆ ಉತ್ತರಿಸಿದರು.

rafale

ರಫೇಲ್ ಸುದ್ದಿ ಪ್ರಕಟಿಸಿ ವಿಚಾರಣೆ ವೇಳೆ ಪ್ರಭಾವ ಮೂಡಿಸುವ ಯತ್ನ ನಡೆಯುತ್ತಿದೆ. ಈ ಕಾರಣಕ್ಕಾಗಿ ಮಂಗಳವಾರ ಒಂದು ಸುದ್ದಿ ಪ್ರಕಟವಾಗಿದ್ದರೆ ಇಂದು ಇನ್ನೊಂದು ಸುದ್ದಿ ಪ್ರಕಟವಾಗಿದೆ. ಈ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಅರ್ಜಿದಾರರು ವಾದಿಸುತ್ತಿದ್ದಾರೆ. ಅರ್ಜಿದಾರರು ಉಲ್ಲೇಖಿಸಿದ ಮಾಹಿತಿ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಬರುತ್ತದೆ ಮತ್ತು ನ್ಯಾಯಾಂಗದ ಉಲ್ಲಂಘನೆಯಾಗಿದೆ. ಈ ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಾಗಬಾರದು. ಹೀಗಾಗಿ ಇದು ಅಧಿಕೃತ ರಹಸ್ಯ ಕಾಯ್ದೆಯ ಉಲ್ಲಂಘನೆ. ಈ ದಾಖಲೆಗಳನ್ನು ಯಾವುದೇ ಕಾರಣಕ್ಕೆ ಅರ್ಜಿಯ ಜೊತೆ ಪರಿಗಣಿಸಬಾರದು ಎಂದು ವಾದಿಸಿದರು.

ರಫೇಲ್ ಖರೀದಿ ಪ್ರಕ್ರಿಯೆ ನ್ಯಾಯಾಂಗದ ಪರಾಮರ್ಶೆಯ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ತೀರ್ಪು ಮರುಪರಿಶೀಲನೆ ನಡೆಸಬೇಕೆಂದು ಸಲ್ಲಿಕೆಯಾದ ಎಲ್ಲ ಅರ್ಜಿಗಳನ್ನು ವಜಾಗೊಳಿಸಬೇಕೆಂದು ಎಜಿ ಮನವಿ ಮಾಡಿದರು.

rafale bengaluru 1 1

ಏರ್ ಸರ್ಜಿಕಲ್ ಸ್ಟ್ರೈಕ್ ನಡೆದ ಬಳಿಕ ಪಾಕ್ ಸೇನೆಯ ದಾಳಿಯನ್ನು ಪ್ರಸ್ತಾಪಿಸಿದ ಎಜೆ, ಒಂದು ವೇಳೆ ಎಫ್ 16 ವಿಮಾನಗಳಿಗೆ ತಡೆ ಒಡ್ಡಬೇಕಾದರೆ ರಫೇಲ್ ದೇಶಕ್ಕೆ ಅಗತ್ಯವಿದೆ. ಈಗಾಗಲೇ ತರಬೇತಿಗಾಗಿ ನಮ್ಮ ಪೈಲಟ್ ಗಳು ಪ್ಯಾರಿಸ್ ಗೆ ತೆರಳಿದ್ದಾರೆ. ಇದೇ ಸೆಪ್ಟೆಂಬರ್ ನಲ್ಲಿ ಹಾರಲು ಸಿದ್ಧವಾಗಿರುವ ಸ್ಥಿತಿಯಲ್ಲಿರುವ ರಫೇಲ್ ವಿಮಾನ ವಾಯುಸೇನೆಗೆ ಸೇರ್ಪಡೆಯಾಗಲಿದೆ ಎಂದು ಹೇಳಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ವಿಚಾರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತಾ ವಿಚಾರವನ್ನು ಉಲ್ಲಂಘಿಸಿ ಸರ್ಕಾರಿ ದಾಖಲೆಯನ್ನು ಪ್ರಕಟಿಸಿದ್ದಕ್ಕಾಗಿ ಎರಡು ಮಾಧ್ಯಮಗಳ ವಿರುದ್ಧ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಎಜೆ ನ್ಯಾಯಾಲಯಕ್ಕೆ ತಿಳಿಸಿದರು.

ದೀರ್ಘವಾಗಿ ವಾದ, ಪ್ರತಿವಾದವನ್ನು ಆಲಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಮಾರ್ಚ್ 14ರ ಮಧ್ಯಾಹ್ನ 3 ಗಂಟೆಗೆ ಮುಂದೂಡಿತು.

ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ಕೇಂದ್ರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದಾರೆ. ಇದರ ಜೊತೆಯಲ್ಲೇ ಕೇಂದ್ರ ಸರ್ಕಾರ ತೀರ್ಪಿನ ಉಲ್ಲೇಖ ಇರುವ ವಾಕ್ಯದಲ್ಲಿ ಕೆಲವು ತಿದ್ದುಪಡಿಗಳಾಗಬೇಕಿದೆ ಎಂದು ಅಫಿಡವಿಟ್ ಮನವಿ ಸಲ್ಲಿಸಿತ್ತು. ಮಹಾಲೇಖಪಾಲರ ವರದಿ(ಸಿಎಜಿ) ಹಾಗೂ ಪಿಎಸಿಗೆ ಸಂಬಂಧಿಸಿದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಈ ದಾಖಲೆಗಳ ವಿಷಯವನ್ನು ತಪ್ಪಾಗಿ ವ್ಯಾಖ್ಯಾನ ಮಾಡಲಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋರ್ಟ್ ಮೊರೆ ಹೋಗಿತ್ತು.

supreme Court 1521081735

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Defencedefence ministryPrashanth BhushanRafaleSupreme Courtಎಫ್ 16ನ್ಯಾಯಾಂಗ ಉಲ್ಲಂಘನೆಪ್ರಶಾಂತ್ ಭೂಷಣ್ರಫೇಲ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

indian navy
Latest

ಇರಾನ್‌ ದಾಳಿಗೆ ಭಾರತೀಯ ನೌಕಾನೆಲೆ ಬಳಕೆ- ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

Public TV
By Public TV
6 minutes ago
Rahul Gandhi
Latest

ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಏಕೆ ಮೌನ? – ರಾಗಾ ಪ್ರಶ್ನೆ

Public TV
By Public TV
6 minutes ago
Telangana Student 16 Gives Birth In Toilet Hours After Appearing For Exam
Crime

ತೆಲಂಗಾಣ | ಪರೀಕ್ಷೆಗೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿಗೆ ಶೌಚಾಲಯದಲ್ಲೇ ಹೆರಿಗೆ

Public TV
By Public TV
30 minutes ago
israel iran war 50 kannadigas return to bengaluru airport from dubai safely
Bellary

ದುಬೈನಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸ್‌

Public TV
By Public TV
1 hour ago
Operation Epic Fury
Latest

`ಆಪರೇಷನ್ ಎಪಿಕ್ ಫ್ಯೂರಿ’ – ಇರಾನ್ ವಿರುದ್ಧದ ಯುದ್ಧಕ್ಕೆ 100 ಗಂಟೆ; ವೀಡಿಯೋ ಹಂಚಿಕೊಂಡ ಯುಎಸ್‌

Public TV
By Public TV
2 hours ago
crude oil
Latest

ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?