ಗಾಂಧಿನಗರ: ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ರಫೇಲ್ ಎಂಬ ಅಸ್ತ್ರವನ್ನು ಬಳಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ರಫೇಲ್ ವಿಮಾನಗಳ ಖರೀದಿಯಲ್ಲಿ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ಎಸಗಿದ್ದಾರೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅರೋಪಿಸುತ್ತಾ ಬಂದಿದ್ದಾರೆ. ಇದೀಗ ಮೋದಿ ಅಭಿಮಾನಿಯೊಬ್ಬರು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ರಫೇಲ್ ವಿಮಾನ ಖರೀದಿಗೆ ಸಂಬಂಧಿಸಿದ ಮಾಹಿತಿಗಳನ್ನು ಮುದ್ರಿಸಿದ್ದಾರೆ.
ಗುಜರಾತ್ ರಾಜ್ಯದ ಯುವರಾಜ್ ಪೋಖರನಾ ಅವರ ಮದುವೆ ಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದು ಯುವರಾಜ್ ಮತ್ತು ಸಾಕ್ಷಿ ಸತಿ-ಪತಿಗಳಾಗಿದ್ದಾರೆ. ನಮ್ಮ ಆಮಂತ್ರಣ ಪತ್ರಿಕೆಯನ್ನು ಪ್ರಧಾನಿಗಳು ಸಹ ನೋಡಿದ್ದು, ಮೆಚ್ಚುಗೆ ಸೂಚಿಸಿದ್ದಾರೆ ಎಂದು ಯುವರಾಜ್ ಹೇಳುತ್ತಾರೆ.
ಪ್ರಧಾನಿ ಬರೆದ ಪತ್ರದಲ್ಲೇನಿದೆ?
ಯುವರಾಜ್ ಮತ್ತು ಸಾಕ್ಷಿ ಮದುವೆಗೆ ಪೋಖರನಾ ಕುಟುಂಬಕ್ಕೆ ನನ್ನ ಶುಭಾಶಯಗಳು. ಅತಿಥಿಗಳು ಕಳುಹಿಸಿರುವ ಕರೆಯೋಲೆಯಲ್ಲಿ ಈ ವಿಭಿನ್ನ ಪತ್ರ ನನ್ನನ್ನು ಸೆಳೆಯಿತು. ಪತ್ರದಲ್ಲಿ ನಿಮ್ಮ ಸರಳತೆ, ರಾಷ್ಟ್ರದ ಬಗ್ಗೆ ನಿಮ್ಮ ಕಾಳಜಿ ಹಾಗು ನಿಮ್ಮ ದೇಶ ಭಕ್ತಿಯನ್ನು ತೋರಿಸುತ್ತಿತ್ತು. ಈ ಕರೆಯೋಲೆ ನನಗೆ ದೇಶಕ್ಕಾಗಿ ಕೆಲಸ ಮಾಡುವಂತೆ ಪ್ರೇರಣೆ ನೀಡುತ್ತಿದೆ. ಹೊಸ ಜೀವನಕ್ಕೆ ಕಾಲಿಡುತ್ತಿರುವ ಯುವರಾಜ್ ಮತ್ತು ಸಾಕ್ಷಿ ಅವರಿಗೆ ಮದುವೆ ಶುಭಾಶಯಗಳು ಎಂದು ಪ್ರಧಾನಿಗಳು ಕಳಹಿಸಿದ ಪತ್ರದಲ್ಲಿ ಬರೆಯಲಾಗಿದೆ ಎಂದು ಸ್ಥಳೀಯ ಪತ್ರಿಕೆಗಳು ಪ್ರಕಟಿಸಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv