ಚಂಡೀಗಢ: ಪಂಜಾಬ್ನ (Punjab) ಕರಡು ಮತದಾರರ ಪಟ್ಟಿಯಿಂದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಘವ್ ಚಡ್ಡಾ (Raghav Chadha), ಇದು ಎಎಪಿಯ ರಾಜಕೀಯ ಸೇಡು ಎಂದು ಆರೋಪಿಸಿದ್ದಾರೆ.
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ಸಿದ್ಧಪಡಿಸಲಾದ ಪಂಜಾಬ್ ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಅವರ ಹೆಸರನ್ನು ಅಳಿಸಲಾಗಿದೆ. ಶಾಶ್ವತವಾಗಿ ಶಿಫ್ಟ್ ಆಗಿದ್ದಾರೆ ಎಂದು ಅವರ ಹೆಸರನ್ನು ಗುರುತಿಸಲಾಗಿದೆ. 2022 ರಲ್ಲಿ ಪಂಜಾಬ್ನಿಂದ ಎಎಪಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದ ಅವರು ಇತ್ತೀಚೆಗೆ ಬಿಜೆಪಿಗೆ ಸೇರಿದ್ದರು. ಇದರಿಂದ ಎಎಪಿ ರಾಜಕೀಯ ಸೇಡಿಗೆ ಹೆಸರು ಡಿಲೀಟ್ ಮಾಡಿಸಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ – ಭಾರತದಿಂದ ಖಂಡನೆ
ಆಗಸ್ಟ್ 13 ರಂದು ಪ್ರಕಟವಾದ ASDD (ಅನುಪಸ್ಥಿತಿ, ಶಿಫ್ಟ್, ಡಿಸೀಸ್ಡ್ ಮತ್ತು ಡೂಪ್ಲಿಕೇಟ್) ಪಟ್ಟಿಯಲ್ಲಿ ಚಡ್ಡಾ ಅವರ ಹೆಸರು ಪ್ರಕಟವಾಗಿದೆ. ಪಂಜಾಬ್ನಲ್ಲಿ ಸುಮಾರು 9.7% ಜನರು, ಅಂದರೆ 20.66 ಲಕ್ಷ ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಚಡ್ಡಾ, ತಮ್ಮ ಮತದಾರರ ಗುರುತಿನ ಚೀಟಿಯನ್ನು ಮೊಹಾಲಿಯಲ್ಲಿ ನೋಂದಾಯಿಸಲಾಗಿದೆ. ತಮ್ಮನ್ನು ‘ಸ್ಥಳಾಂತರಿಸಲಾಗಿದೆ’ ಎಂದು ಏಕೆ ವರ್ಗೀಕರಿಸಲಾಗಿದೆ? ಇದು ಕೇವಲ ಗುಮಾಸ್ತರ ತಪ್ಪಿನಂತೆ ಕಾಣುತ್ತಿಲ್ಲ. ಇದು ರಾಜಕೀಯ ಸೇಡಿನಿಂದ ಕೂಡಿದೆ. ಪಕ್ಷವನ್ನು ತೊರೆದವರ ವಿರುದ್ಧ AAP ಸರ್ಕಾರ ಅಧಿಕಾರಿಗಳನ್ನು ಬಳಸಿ ಹೆಸರು ಡಿಲೀಟ್ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
The AAP government in Punjab has now taken its politics of revenge to the Draft Electoral Rolls.
I am a sitting Rajya Sabha MP from Punjab, with my voter ID registered in Mohali, Punjab. Yet my name has been classified as “shifted” in the draft electoral rolls.
Thankfully,… pic.twitter.com/laAFAAWYiQ
— Raghav Chadha (@raghav_chadha) September 3, 2026
ಚಡ್ಡಾ ಹಾಗೂ ಇತರ 6 ರಾಜ್ಯಸಭಾ ಸಂಸದರು ಏಪ್ರಿಲ್ನಲ್ಲಿ AAP ತೊರೆದು BJP ಸೇರಿದ್ದರು. ಈ ವೇಳೆ ಎಎಪಿ ತನ್ನ ತತ್ವಗಳು, ಮೌಲ್ಯಗಳು ಮತ್ತು ನೈತಿಕತೆಗಳಿಂದ ಸಂಪೂರ್ಣವಾಗಿ ವಿಮುಖವಾಗಿದೆ. ಇದರಿಂದ ಪಕ್ಷ ತೊರೆದಿದ್ದಾಗಿ ಹೇಳಿದ್ದರು.
ನಾನು ಭ್ರಷ್ಟ ಆಮ್ ಆದ್ಮಿ ಪಕ್ಷವನ್ನು ತೊರೆದಾಗಿನಿಂದ, ಅದರ ನಾಯಕರು ಕೋಪದಿಂದ ಕುದಿಯುತ್ತಿದ್ದಾರೆ. ನಮ್ಮ ವಿರುದ್ಧ ಅದು ಪಂಜಾಬ್ ಪೊಲೀಸ್ ಮತ್ತು ಪಂಜಾಬ್ ಸರ್ಕಾರದ ಆಡಳಿತ ಯಂತ್ರದ ಬಲಪ್ರಯೋಗ ನಡೆಯುತ್ತಿದೆ. ಎಎಪಿ ತೊರೆದು ಬಿಜೆಪಿಗೆ ಸೇರಿದ ಇತರ ಸಂಸದರನ್ನು ಸಹ ಪಂಜಾಬ್ ಸರ್ಕಾರ ಗುರಿಯಾಗಿಸಿಕೊಂಡಿದೆ. ಈಗ ಅದು ಮತದಾರರ ಪಟ್ಟಿಯಲ್ಲಿ ಹೆಸರು ಅಳಿಸುವ ಮೂಲಕ ಸೇಡು ತೀರಿಸಿಕೊಂಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಾಲಾಕೋಟ್ ದಾಳಿ ಹೀರೋ ಅಭಿನಂದನ್ ವರ್ಧಮಾನ್ ಈಗ FLY91 ಪೈಲಟ್
