ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ಕೊಪ್ಪಳಕ್ಕೆ ಬಂದರೆ ರೆಡ್ ಕಾರ್ಪೆಟ್ ಸ್ವಾಗತ: ರಾಘವೇಂದ್ರ ಹಿಟ್ನಾಳ್

Public TV
1 Min Read
koppala raghavendra hitnal

ಬೆಂಗಳೂರು: ಕೊಪ್ಪಳ (Koppal) ಲೋಕಸಭಾ ಕ್ಷೇತ್ರದಿಂದ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರು (Priyanka Gandhi) ಸ್ಪರ್ಧೆ ಮಾಡಲು ಮುಂದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ (Raghavendra Hitnal) ಹೇಳಿದ್ದಾರೆ.

Priyanka Gandhi 1

ಪ್ರಿಯಾಂಕಾ ಗಾಂಧಿಯವರು ಕೊಪ್ಪಳದಿಂದ ಸ್ಪರ್ಧೆ ಮಾಡುವ ಸುದ್ದಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯವರು ಕೊಪ್ಪಳಕ್ಕೆ ಬರುವುದಾದರೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತೇವೆ. ಇಲ್ಲಿಂದ ಅವರು ಸ್ಪರ್ಧಿಸಿದರೆ ಹೆಚ್ಚು ಅಂತರದಿಂದ ಗೆಲ್ಲಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಅಶ್ವಥ್ ನಾರಾಯಣ್

ಸಹೋದರ ಹಾಗೂ ಕಳೆದ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ರಾಜಶೇಖರ್ ಹಿಟ್ನಾಳ್ ಜೊತೆ ಬಂದು ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಬಾರಿಯೂ ಸಹೋದರ ರಾಜಶೇಖರ್ ಹಿಟ್ನಾಳ್‍ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ನನ್ನ ಸಹೋದರನಿಗೂ ಟಿಕೆಟ್ ಕೇಳಿದ್ದೇನೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

ಕೊಪ್ಪಳದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಂಬಂಧ ಎಐಸಿಸಿ ಸರ್ವೆ ನಡೆಸಿದೆ ಎಂಬ ಎಕ್ಸ್‌ಕ್ಲೂಸಿವ್‌ ಸುದ್ದಿಯನ್ನು ʻಪಬ್ಲಿಕ್ ಟಿವಿʼ ಈ ಹಿಂದೆ ಪ್ರಸಾರ ಮಾಡಿತ್ತು. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ, ಸರ್ವೆ ವಿಚಾರ ಗೊತ್ತಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರಾಮನ ಪ್ರಾಣಪ್ರತಿಷ್ಠೆಗೆ ದಿನಗಣನೆ- ಸೀತಾ ಮಾತೆಯ ರಕ್ಷಣೆಗೆ ಜಟಾಯು ಹೋರಾಡಿದ್ದ ಸ್ಥಳಕ್ಕೆ ಮೋದಿ ಭೇಟಿ

Share This Article