RSS ಇರೋದ್ರಿಂದ ಸಿದ್ದರಾಮಯ್ಯನ ಬೇಳೆ ಬೇಯುತ್ತಿಲ್ಲ: ರಘುಪತಿ ಭಟ್

Public TV
1 Min Read
raghupti

ಉಡುಪಿ: ಆರ್‌ಎಸ್‌ಎಸ್‌ ಇರುವುದರಿಂದ ಸಿದ್ದರಾಮಯ್ಯ ಬೇಳೆ ಬೇಯುತ್ತಿಲ್ಲ ಎಂದು ಶಾಸಕ ರಘುಪತಿ ಭಟ್ ಟಾಂಗ್ ನೀಡಿದ್ದಾರೆ.

ಉಡುಪಿಯಲ್ಲಿ ಆರ್‌ಎಸ್‌ಎಸ್‌ ಚಡ್ಡಿ ಸುಡಿ ಅಭಿಯಾನಕ್ಕೆ ಕರೆ ಕೊಟ್ಟಿರುವ ಸಿದ್ದರಾಮಯ್ಯಗೆ ಆರ್‌ಎಸ್‌ಎಸ್‌ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆರ್‌ಎಸ್‌ಎಸ್‌ ಚಡ್ಡಿ ಸಂಸ್ಕೃತಿ ಬಿಟ್ಟು ಪ್ಯಾಂಟಿಗೆ ಬಂದು ಬಹಳ ಸಮಯವಾಯಿತು. ಈಗ ನಮ್ಮ ಗಣವೇಶ ಅಂಗಿ ಪ್ಯಾಂಟ್ ಆಗಿದೆ. ಸಿದ್ದರಾಮಯ್ಯ ರಾಜಕೀಯ ಕಾರಣಕ್ಕೆ ಹೀಗೆ ಮಾತನಾಡುತ್ತಾರೆ. ಆ ಚಡ್ಡಿ ಇದ್ದಿದರಿಂದ ದೇಶದಲ್ಲಿ ಒಳ್ಳೆಯ ವಾತಾವರಣ ಇದೆ. ಆರ್‌ಎಸ್‌ಎಸ್‌ ಇಲ್ಲದೇ ಇದ್ದರೆ ದೇಶದ ಪರಿಸ್ಥಿತಿ ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ

Siddaramaiah

ಆರ್‌ಎಸ್‌ಎಸ್‌ ಸಿದ್ದರಾಮಯ್ಯಗೆ ಏನು ಮಾಡಿದೆಯೋ ಗೊತ್ತಿಲ್ಲ. ದೇಶಭಕ್ತರ ತಯಾರು ಮಾಡುವ ಸಂಸ್ಥೆ ಆರ್‌ಎಸ್‌ಎಸ್‌. ರಾಷ್ಟ್ರೀಯತೆ ಮತ್ತು ಒಳ್ಳೆಯ ಶಿಕ್ಷಣ ಕೊಡುತ್ತಿರುವುದೇ ಆರ್‌ಎಸ್‌ಎಸ್‌. ಆರ್‌ಎಸ್‌ಎಸ್‌ ಇರುವುದರಿಂದ ಸಿದ್ದರಾಮಯ್ಯನ ಬೇಳೆ ಬೇಯುತ್ತಿಲ್ಲ. ಆರ್‌ಎಸ್‌ಎಸ್‌ ಏನು ಎಂಬುದು ಇಡೀ ವಿಶ್ವಕ್ಕೆ ಗೊತ್ತಿದೆ ಎಂದು ತಿರುಗೇಟಿ ನೀಡಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು -ನವವಿವಾಹಿತೆಯ ಬಲ ಕಿವಿಯೇ ಕಟ್

Share This Article
Leave a Comment

Leave a Reply

Your email address will not be published. Required fields are marked *