ಬೆಂಗಳೂರು: ಇಂದು ರಾತ್ರಿ ಬೆಂಗಳೂರಿಗೆ (Bengaluru) ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ವಾದ್ರಾ (Priyanka Vadra) ಆಗಮಿಸಲಿದ್ದಾರೆ.
ಇಂದು ರಾತ್ರಿ ಬೆಂಗಳೂರಲ್ಲೇ ಇಬ್ಬರು ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ತೆರಳಲಿದ್ದಾರೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಇದನ್ನೂ ಓದಿ: ಅನಗತ್ಯ ಹೇಳಿಕೆಗಳನ್ನು ನೀಡಬೇಡಿ, ಸರಿಯಾಗಿ ಸಮಯ ಪಾಲನೆ ಮಾಡಿ: ಸಚಿವರಿಗೆ ಮೋದಿ ಪಾಠ
- Advertisement
ರಾತ್ರಿ 9 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ರಾಹುಲ್ ಮತ್ತು ಪ್ರಿಯಾಂಕಾ ಅವರನ್ನು ಬರಮಾಡಿಕೊಳ್ಳಲಿದ್ದಾರೆ.
- Advertisement
ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ 7 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳಕ್ಕೆ ರಾಹುಲ್ ಮತ್ತು ಪ್ರಿಯಾಂಕಾ ಪ್ರಯಾಣಿಸಲಿದ್ದಾರೆ.