-ಚೌಕಿದಾರ್ ಯುವಕರಿಗೆ ರಾಹುಲ್ ಗಾಂಧಿ ಪ್ರಶ್ನೆ
ಜೈಪುರ: ರಾಜಸ್ಥಾನದ ಚುರು ಜಿಲ್ಲೆಯ ಸರ್ದಾರಶಹರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಿದ್ದ ಸಮಾವೇಶಕ್ಕೆ ಕೆಲ ಯುವಕರು ‘ಮೈ ಭೀ ಚೌಕಿದಾರ್’ ಬರಹವುಳ್ಳ ಟೀ ಶರ್ಟ್ ಧರಿಸಿಕೊಂಡು ಬಂದಿದ್ದರು. ಸಮಾವೇಶದಲ್ಲಿ ಯುವಕರನ್ನು ಗಮನಿಸಿದ ರಾಹುಲ್ ಗಾಂಧಿ ಅವರಿಗೆ ಕೆಲ ಪ್ರಶ್ನೆಗಳನ್ನು ಕೇಳಿದರು.
‘ಮೈ ಭೀ ಚೌಕಿದಾರ್’ ಟೀ ಶರ್ಟ್ ಧರಿಸಿ ಕಾಂಗ್ರೆಸ್ ಸಮಾವೇಶಕ್ಕೆ ಬಂದಿರುವ ಯುವಕರನ್ನು ಸ್ವಾಗತ ಮಾಡಿಕೊಳ್ಳುತ್ತೇನೆ. ನಿಮ್ಮ ಚೌಕಿದಾರ್ ಜೀ, 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಅಂತ ಹೇಳಿದ್ದರು. ಆ ಎರಡು ಕೋಟಿ ಉದ್ಯೋಗ ಎಲ್ಲಿವೆ? ನಿಮ್ಮ ಖಾತೆಗೆ 15 ಲಕ್ಷ ರೂ. ಬಂದಿದೆಯಾ ಎಂದು ಪ್ರಶ್ನಿಸಿದರು.
ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿದ ಮಾತನಾಡಿದ ರಾಹುಲ್ ಗಾಂಧಿ, 2014ರ ಚುನಾವಣೆ ವೇಳೆ ಮೋದಿ ಜನತೆಗೆ 15 ಲಕ್ಷ ರೂ. ನೀಡುತ್ತೇನೆ ಎಂದು ಸುಳ್ಳು ಹೇಳಿದ್ದರು. ಸರ್ಕಾರ ರಚನೆಯ ಬಳಿಕ ಕಾಂಗ್ರೆಸ್ ‘ನ್ಯಾಯ’ ಯೋಜನೆಯಲ್ಲಿ ಬಡವರ ಖಾತೆಗೆ ಕನಿಷ್ಠ ಆದಾಯವನ್ನು ಹಾಕಲು ನಿರ್ಧರಿಸಿದೆ. ಈ ಯೋಜನೆಯಡಿ 5 ಕೋಟಿ ಬಡವರಿಗೆ ವಾರ್ಷಿಕ 72 ಸಾವಿರ ರೂ. ಸಿಗಲಿದೆ ಎಂದು ತಿಳಿಸಿದರು.