Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದು-ಡಿಕೆಶಿಯನ್ನ ಪದೇ ಪದೇ ಜೋಡಿಸಿ ನಿಲ್ಲಿಸುವ ರಾಹುಲ್ – ಜೋಡಣೆ ಅಸಲಿ ಆಟ ಏನ್ ಗೊತ್ತಾ?

Public TV
Last updated: October 15, 2022 7:44 am
Public TV
Share
3 Min Read
siddaramaiah dk shivakumar
SHARE

ಬೆಂಗಳೂರು: ಜೋಡ್ಸಿ ನಿಲ್ಲಿಸೋದು.. ಇಬ್ಬರ‌ ಮುಖದಲ್ಲಿ ನಗು ಮೂಡಿಸೋದು… ನನ್ನ ಸಂದೇಶ ಅರ್ಥ ಆಗ್ತಿದೆ ಅಂತಾ ಅಂದುಕೊಳ್ಳೋದು. ಇದು ರಾಹುಲ್ ಗಾಂಧಿಯ (Rahul Gandhi) ಜೋಡೋ ತಂತ್ರ. ಅಂದಹಾಗೆ ಇದು ಭಾರತ್ ಜೋಡೋ ಯಾತ್ರೆಯಲ್ಲೇ (Bharat Jodo Yatra) ನಡೆದ ಇನ್ನೊಂದು ಭಾಗ ಸಿದ್ದು-ಡಿಕೆಶಿ ಜೋಡೋ. ಕರ್ನಾಟಕದ ಭಿನ್ನರಾಗಗಳನ್ನ ಸರಿಪಡಿಸಿ ಲಯಬದ್ಧ ರಾಗವಾಗಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದ್ರು ಅಂದರೂ ತಪ್ಪಾಗಲಾರದು. ಯಾತ್ರೆಯಲ್ಲಿ ಒಳಸುಳಿಯೊಳಗೆ ಕರ್ನಾಟಕದ ನಾಯಕತ್ವದ ಭಿನ್ನ ಧ್ವನಿಗಳನ್ನ ಹತ್ತಿಕ್ಕಲು ಸಿದ್ದು-ಡಿಕೆ (Siddaramaiah – D.K.Shivakumar) ಜೋಡೋ ಅಂತಾ ಸಂದೇಶ ರವಾನಿಸಿದ್ದು ಸ್ಪಷ್ಟವಾಗಿದೆ.

ಕರ್ನಾಟಕ ಕಾಂಗ್ರೆಸ್ (Congress) ಪಾಲಿಗೆ ಕಲ್ಪವೃಕ್ಷ. ದೇಶದಲ್ಲಿ ಏನಾದ್ರೂ ಕಾಂಗ್ರೆಸ್ ಫಿಟ್ & ಫೈನ್ ಆಗಿದೆ ಅಂದ್ರೆ ಅದು ಕರ್ನಾಟಕದಲ್ಲಿ (Karnataka) ಅನ್ನೋದು ಗೊತ್ತು. ಆದರಲ್ಲೂ ಲೀಡರ್‌ಶಿಪ್ ವಿಚಾರದಲ್ಲಿ ಒಂಟೆತ್ತಿನ ಗಾಡಿಗಿಂತ ಜೋಡೆತ್ತಿನ ಗಾಡಿ ಅತ್ಯಾವಶ್ಯಕ ಅನ್ನುವ ಸತ್ಯವೂ ಕಾಂಗ್ರೆಸ್ ಹೈಕಮಾಂಡ್‌ಗೆ ಸ್ಪಷ್ಟವಾಗಿದೆ. ಆ ಕಾರಣಕ್ಕಾಗಿಯೇ ಸಿದ್ದು-ಡಿಕೆಶಿಯನ್ನ ಸಮನಾಗಿ ಎತ್ತಿ ಮುದ್ದಾಡಿಸುವ ಕೆಲಸಕ್ಕೆ ರಾಹುಲ್ ಗಾಂಧಿ ಕೈ ಹಾಕಿದ್ದಾರೆ ಅನ್ನುವ ಸತ್ಯ ಎಲ್ಲರಿಗೂ ಗೊತ್ತಿದೆ. ಇದನ್ನೂ ಓದಿ: ಬಚ್ಚಾ ಲಡಾಯಿ ನಡುವೆ ರಾಮ ರಾಜಕೀಯ- ಕಾಂಗ್ರೆಸ್ ರಾಮಜಪಕ್ಕೆ ಕೇಸರಿಪಡೆ ವ್ಯಂಗ್ಯ

rahul gandhi siddaramaiah

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿಯೇ ಆ ಜೋಡಣೆಯ ಕೆಲಸ ಮಾಡಿದ್ರು ರಾಹುಲ್. ಸಿದ್ದರಾಮಯ್ಯ ಬಲ‌ಪ್ರದರ್ಶನದ ವೇದಿಕೆಯಲ್ಲೇ ಸಿದ್ದರಾಮಯ್ಯ ಆಲಂಗಿಸುವಂತೆ ಡಿಕೆಶಿಗೆ ರಾಹುಲ್ ಸನ್ನೆ ಮಾಡಿದಾಗಲೇ ಎಲ್ಲರಿಗೂ ಅರ್ಥವಾಗಿತ್ತು. ಜೋಡಣೆ ಕಾರ್ಯ ಪ್ರಗತಿಯಲ್ಲಿದೆ ಎಂಬ ಸಂದೇಶ ಹೊರಬಿತ್ತು. ಆದಾದ ಬಳಿಕ ಇದೊಂದು ತಾತ್ಕಾಲಿಕ ಆಲಿಂಗನ ಮುಂದೆ ಯಾವಾಗ ಡೈವೈರ್ಸ್ ಆಗುತ್ತೋ ಅಂತಾ ಬಿಜೆಪಿ ನಾಯಕರು ವ್ಯಂಗ್ಯ ಮಾಡಿದ್ದು ಉಂಟು.

ಇನ್ನು ಬಿಜೆಪಿ ವ್ಯಂಗ್ಯಕ್ಕೆ ಇಂಬು ನೀಡುವಂತೆ ರಾಹುಲ್ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಾಗಲೇ ಮತ್ತೆ ಜೋಡೆತ್ತುಗಳು ದಿಕ್ಕಪಾಲಾಗುವ ಮುನ್ಸೂಚನೆ ಕೊಟ್ಟವು. ಎಡಕ್ಕೆ ಒಂದೆತ್ತು, ಬಲಕ್ಕೆ ಇನ್ನೊಂದೆತ್ತು ಎಳೆದಿದ್ದು ಸ್ಪಷ್ಟವಾಗಿತ್ತು. ರಾಹುಲ್ ಸ್ವಾಗತಕ್ಕೆ ಕಾಡಿನ ಮಧ್ಯೆಯೇ ಹೋಗಿ ಸಿದ್ದರಾಮಯ್ಯ ಟೀಂ ನಾವೇ ಫಸ್ಟ್ ಅಂತಾ ಬೆನ್ನು ತಟ್ಟಿಕೊಂಡ್ರೆ, ನಮಗೆ ಜವಾಬ್ದಾರಿ ಕೆಲಸ ಇವೆ, ಅಲ್ಲಿ ಹೋಗುವ ಪ್ಲ್ಯಾನ್ ಇರಲಿಲ್ಲ ಅಂತಾ ಡಿಕೆಶಿ ಗುರ್ ಅಂದಿದ್ದು ಪಕ್ಷದೊಳಗೆ ನಾನಾ ಚರ್ಚೆ ಶುರುವಾಗಿಬಿಡ್ತು. ಈ ಮೇಲ್ನೋಟದ ಆಟ ಗೊತ್ತಿರದಷ್ಟೂ ದಡ್ಡರಲ್ಲ ರಾಹುಲ್. ಕರ್ನಾಟಕದ ವಸ್ತುಸ್ಥಿತಿ ರಾಹುಲ್‌ಗೆ ಸ್ಪಷ್ಟವಾಗಿ ತಿಳಿದಿದೆ ಅನ್ನೋದನ್ನ ನನ್ನ ಗಮನಕ್ಕೆ ಬಂದಿದ್ದೇ ಅವರ ಬಳಿ ಅನೌಪಚಾರಿಕವಾಗಿ ಮಾತನಾಡಿದಾಗ. ಆ ಕಾರಣಕ್ಕೇನೋ ರಾಹುಲ್ ಅವರು ಸಿದ್ದರಾಮಯ್ಯ, ಡಿಕೆಶಿಗೆ ಸಮಾನ ಸ್ಥಾನ, ಸಮಾನ ಓಟ, ಸಮಾನ ಅವಕಾಶ ಎಂಬ ಗೇಮ್ ಪ್ಲ್ಯಾನ್ ಮಾಡಿದ್ದು. ಇದನ್ನೂ ಓದಿ: ಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಸಚಿವ ನಿರಾಣಿ ಕರೆ

bharat jodo yatra 1

ಅಂದಹಾಗೆ ಭಾರತ್ ಜೋಡೋ ಪಾದಯಾತ್ರೆ ವೇಳೆ ಮೊದಲು ಸಿದ್ದರಾಮಯ್ಯ ಅವರನ್ನ ಓಡಿಸ್ತಾರೆ.‌ ಡಿಕೆಶಿ ಇಡಿ ವಿಚಾರಣೆಗೆ ಹೋದಾಗ ಸಿದ್ದರಾಮಯ್ಯ ಓಡಿದ್ದೇ ದೊಡ್ಡ ಸುದ್ದಿಯಾಗಿತ್ತು. ಆ ಸುದ್ದಿ ಬೇರೆ ರೂಪ ಪಡೆಯುವ ಮೊದಲೇ ಮಾರನೇ ದಿನವೇ ಡಿಕೆಶಿಯನ್ನ ರಾಹುಲ್ ಓಡಿಸ್ತಾರೆ.‌ ಒಬ್ಬರು‌ ಮಾರ್ನಿಂಗ್ ಶಿಫ್ಟ್ ಬಂದು ಜಾಸ್ತಿ ಕಾಣಿಸಿಕೊಂಡ್ರೆ, ಸೆಕೆಂಡ್ ಶಿಫ್ಟ್‌ನಲ್ಲಿ ಇನ್ನೊಬ್ಬರು ಬಂದು ಜಾಸ್ತಿ ‌ಕಾಣಿಸಿಕೊಳ್ತಾರೆ.‌ ಸಿದ್ದು-ಡಿಕೆಶಿ ಇಬ್ಬರ ವಿಚಾರದಲ್ಲಿ ಯಾರೂ ಹೆಚ್ಚಿಲ್ಲ, ಯಾರೂ ಕಮ್ಮಿ ಇಲ್ಲ ಎಂಬ ಸಂದೇಶವನ್ನು ಕೊಡಲು ರಾಹುಲ್‌ ಕೂಡ ಬಹಳ ಸಲ ಪ್ರಯತ್ನಿಸಿದ್ದಾರೆ.

ಅದರಂತೆ ಬಳ್ಳಾರಿ ಪ್ರವೇಶ ಮಾಡುವ ಮುನ್ನ ಸಿದ್ದು-ಡಿಕೆಶಿ ಇಬ್ಬರನ್ನೂ ಒಟ್ಟಿಗೆ ಕೈ ಕೈ ಹಿಡಿಸಿ ಅವರ ಭುಜದ ಮೇಲೆ ರಾಹುಲ್ ಕೈ ಹಾಕಿ ಹೆಜ್ಜೆ ಹಾಕಿಸಿದ್ರು‌. ಇದೆಲ್ಲ ರಾಹುಲ್ ಹುಡುಗಾಟಿಕೆಗೆ ಮಾಡಿದ್ದಲ್ಲ. ರಾಹುಲ್ ಬಹಳ ಮೆಚ್ಯುರ್ಡ್ ಆಗಿ ಪೊಲಿಟಿಕಲ್ ಥಿಂಕ್ ಮಾಡುವುದನ್ನ ಬಹಳ ಚೆನ್ನಾಗಿ ಕಲಿತಿದ್ದಾರೆ ಅಂತಾ ನನಗಿನಿಸಿದೆ. ಪಂಜಾಬ್ ಪೆಟ್ಟು ತಿಂದ ಹಸ್ತಕ್ಕೀಗ ಕರ್ನಾಟಕದ ಭವಿಷ್ಯ ಚೆನ್ನಾಗಿ ಗೊತ್ತಾಗಿರಬೇಕು. ಹಾಗಾಗಿಯೇ ರಾಹುಲ್ ಭಾರತ್ ಜೋಡೋ ಯಾತ್ರೆಯ ಜೊತೆ ಜೊತೆಯಲ್ಲಿ ಕರ್ನಾಟಕದಲ್ಲಿ ಸಿದ್ದು-ಡಿಕೆಶಿ ಜೋಡೋ ಸಂದೇಶವನ್ನು ಅಚ್ಚುಕಟ್ಟಾಗಿ ಮಾಡಿ‌ ಮುಗಿಸಿದ್ದಾರೆ. ಇನ್ನೇನಿದ್ದರೂ ಜೋಡಣೆ ಆಗಬೇಕಿರುವುದು ಸಿದ್ದರಾಮಯ್ಯ, ಶಿವಕುಮಾರ್ ಮನಸ್ಸುಗಳು. ಅಷ್ಟೇ ಅಲ್ಲ ಇಬ್ಬರು ನಾಯಕರ ಬೆನ್ನ ಹಿಂದಿನ ಶಕ್ತಿಗಳು, ಅಕ್ಕಪಕ್ಕದ ಕಾಣದ ಕೈಗಳು ಜೋಡಣೆ ಆಗಬೇಕು. ಆಗ ಮಾತ್ರ ರಾಹುಲ್ ಗಾಂಧಿಯ ಜೋಡಣೆ ಪ್ರಯತ್ನ ಯಶಸ್ವಿಯಾಗಲು ಸಾಧ್ಯ. ಅದಕ್ಕಾಗಿ ವರ್ಷಗಟ್ಟಲೇ ಕಾಯಬೇಕಾಗಿಲ್ಲ. ಇನ್ನು ಐದಾರು ತಿಂಗಳಲ್ಲಿ ಆ ರಿಸಲ್ಟ್ ಕೂಡ ಸಿಗುತ್ತೆ. ಅಲ್ಲಿ ತನಕ ಕಾದುನೋಡೋಣ.

-ರವೀಶ್ ‌.ಹೆಚ್‌.ಎಸ್. ಪೊಲಿಟಿಕಲ್ ಬ್ಯೂರೋ ಚೀಫ್, ಪಬ್ಲಿಕ್ ಟಿವಿ

Live Tv
[brid partner=56869869 player=32851 video=960834 autoplay=true]

TAGGED:bharat jodo yatracongressd k shivakumarRahul Gandhisiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಭಾರತ್ ಜೋಡೋ ಯಾತ್ರೆರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood

You Might Also Like

Maharashtra Murder
Crime

ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

Public TV
By Public TV
30 minutes ago
Siddaramaiah 9
Bengaluru City

ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ

Public TV
By Public TV
38 minutes ago
Parliament in brijesh chowta
Karnataka

ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ

Public TV
By Public TV
42 minutes ago
Darshan Pavithra
Bengaluru City

ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

Public TV
By Public TV
1 hour ago
Govt Schools copy
Dakshina Kannada

ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

Public TV
By Public TV
1 hour ago
Dharmasthala 1
Bengaluru City

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ SIT ಹೆಗಲಿಗೆ – ನಿಷ್ಪಕ್ಷಪಾತ ತನಿಖೆ ಬಗ್ಗೆ ಗೃಹ ಸಚಿವ ಪರಂ ಭರವಸೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?