Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ – ವಯನಾಡ್‌ನಿಂದಲೇ ಸ್ಪರ್ಧೆ ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ – ವಯನಾಡ್‌ನಿಂದಲೇ ಸ್ಪರ್ಧೆ ಯಾಕೆ?

Election News

ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ – ವಯನಾಡ್‌ನಿಂದಲೇ ಸ್ಪರ್ಧೆ ಯಾಕೆ?

Public TV
Last updated: April 3, 2024 4:39 pm
Public TV
Share
3 Min Read
rahul gandhi nomination wayanad
SHARE

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ನ ಯುವರಾಜ ರಾಹುಲ್ ಗಾಂಧಿ (Rahul Gandhi) ಕೇರಳದ ವಯನಾಡ್‌ನಿಂದ ಎರಡನೇ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ. ಕಳೆದ ಬಾರಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದ ಅವರು ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದು ಇಂದು ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರು, ಬೆಂಬಲಿಗರ ಸಮೂಹದಲ್ಲಿ ವಯನಾಡಿನ ಕಲ್ಪೆಟ್ಟಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಎಂಎಂ ಹಾಸನ್, ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಇತರ ರಾಜ್ಯ ನಾಯಕರು ಸಾಥ್ ನೀಡಿದರು. ಇದನ್ನೂ ಓದಿ: ಇವಿಎಂ ಜೊತೆಗೆ ವಿವಿಪ್ಯಾಟ್ ಮತ ಎಣಿಕೆಗೆ ಆಗ್ರಹ – ವಿಚಾರಣೆಗೆ ಒಪ್ಪಿದ ಸುಪ್ರೀಂ

rahul gandhi wayanad

ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಅವರು ಸಂಸತ್‌ನಲ್ಲಿ ವಯನಾಡ್ ಪ್ರತಿನಿಧಿಸುವುದು ಗೌರವ ತಂದಿದೆ. ನಾನು ಚುನಾಯಿತ ಪ್ರತಿನಿಧಿಯಲ್ಲ. ನಾನು ನಿಮ್ಮ ಕುಟುಂಬ ಸದಸ್ಯನಂತೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಹೇಗೆ ನೋಡುತ್ತೇನೆ ಹಾಗೇಯೇ ನಾನು ನಿಮ್ಮನ್ನು ನೋಡುತ್ತೇನೆ. ಹೀಗಾಗೀ ಕ್ಷೇತ್ರದಲ್ಲಿ ತಂದೆ-ತಾಯಿ ಸಹೋದರಿಯರಿದ್ದಾರೆ ಎಂದರು.

ಮುಂದುವರಿದು, ಕ್ಷೇತ್ರದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ರಾಷ್ಟ್ರ ಹಾಗೂ ವಿಶ್ವದ ಗಮನಕ್ಕೆ ತರಲು ನಾನು ಸದಾ ಸಿದ್ಧ. ಮನುಷ್ಯ-ಪ್ರಾಣಿ ಸಂಘರ್ಷ, ವೈದ್ಯಕೀಯ ಕಾಲೇಜು ಸಮಸ್ಯೆಗಳು ಈ ಹೋರಾಟದಲ್ಲಿ ನಾನು ವಯನಾಡು ಜನರೊಂದಿಗೆ ನಿಲ್ಲುತ್ತೇನೆ. ನಾವು ವೈದ್ಯಕೀಯ ಕಾಲೇಜಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದೇವೆ. ನಾನು ಸಿಎಂಗೆ ಪತ್ರ ಬರೆದಿದ್ದೇನೆ. ಆದರೆ, ದುರದೃಷ್ಟವಶಾತ್ ಅವರು ಮುಂದೆ ಹೋಗಲಿಲ್ಲ. ಇದನ್ನೂ ಓದಿ: ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

rahul gandhi wayanad 1

ದೆಹಲಿಯಲ್ಲಿ ನಮ್ಮ ಸರ್ಕಾರವಿದ್ದರೆ ಮತ್ತು ಕೇರಳದಲ್ಲಿ ನಮ್ಮ ಸರ್ಕಾರ ಬಂದಾಗ, ಇವೆರಡನ್ನೂ ನಾವು ಮಾಡುತ್ತೇವೆ. ನಾವು ಈ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ನನಗೆ ಸಂಪೂರ್ಣವಾಗಿ ಭರವಸೆ ಇದೆ. ನಾನು ಕೇವಲ ರಾಜಕೀಯ ಭಾಷಣ ಮಾಡುತ್ತಿಲ್ಲ. ಪಕ್ಷಗಳು, ಸಮುದಾಯಗಳು, ವಯಸ್ಸಿನ ಹೊರತಾಗಿಯೂ, ವಯನಾಡಿನ ಪ್ರತಿಯೊಬ್ಬ ವ್ಯಕ್ತಿಯೂ ನನಗೆ ಪ್ರೀತಿ, ಮಮತೆ, ಗೌರವವನ್ನು ನೀಡಿದ್ದಾರೆ. ನನ್ನನ್ನು ಅವರವರಂತೆ ನೋಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಅಭ್ಯರ್ಥಿ ಅನ್ನಿ ರಾಜಾ ಅವರು ಇಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಯನಾಡ್‌ಗೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರನ್ನು ವಯನಾಡಿನಿಂದ ಕಣಕ್ಕಿಳಿಸಿದೆ. ಇದನ್ನೂ ಓದಿ: ಜೈಲು ಸೇರಿದ ಕೇಜ್ರಿವಾಲ್‌ 4.5 ಕೆಜಿ ಕಳೆದುಕೊಂಡಿದ್ದಾರೆ: ಆಪ್‌ ಗಂಭೀರ ಆರೋಪ

ರಾಹುಲ್ ಗಾಂಧಿಗೆ ವಯನಾಡು ಯಾಕೆ ಭದ್ರ
ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸುತ್ತಿದ್ದ ರಾಹುಲ್ ಗಾಂಧಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಿಂದಲೂ ಸ್ಪರ್ಧಿಸಲು ನಿರ್ಧರಿಸಿದರು. ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ತೀವ್ರ ಪೈಪೋಟಿ ಹಿನ್ನಲೆ ಕೇರಳದ ವಯನಾಡಿನಿಂತಹ ಭದ್ರ ಕ್ಷೇತ್ರವನ್ನು ರಾಹುಲ್ ಗಾಂಧಿ ಹುಡುಕಿಕೊಂಡರು.

ವಯನಾಡಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಾಬಲ್ಯ ಹೊಂದಿದೆ. ವಯನಾಡಿನ ಜನಸಂಖ್ಯೆಯಲ್ಲಿ ಮುಸ್ಲಿಮರು 32% ಮತ್ತು ಕ್ರಿಶ್ಚಿಯನ್ನರು 13% ರಷ್ಟಿದ್ದಾರೆ. ಈ ಕಾರಣಕ್ಕೆ ಕಳೆದ ಬಾರಿ ನಾಲ್ಕು ಲಕ್ಷ ಅಧಿಕ ಮತಗಳ ಅಂತರದಲ್ಲಿ ರಾಹುಲ್ ಗಾಂಧಿ ಗೆದ್ದು ಬೀಗಿದ್ದರು. ಇದನ್ನೂ ಓದಿ: ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಆದರೆ ಈ ಬಾರಿ ಪರಿಸ್ಥಿತಿ ಕಳೆದ ಬಾರಿಯಂತಿಲ್ಲ. ಸಿಪಿಐ ನಿಂದ ಸ್ಪರ್ಧಿಸಿರುವ ಅನ್ನಿ ರಾಜಾ ಜನಪ್ರಿಯ ನಾಯಕಿಯಾಗಿದ್ದು ತೀವ್ರ ಪೈಪೊಟಿ ಕೊಡಲಿದ್ದಾರೆ. 6%-9% ಗೆ ಮತ ಪ್ರಮಾನ ಏರಿಸಿಕೊಂಡಿರುವ ಬಿಜೆಪಿ ಕೂಡಾ ಒಂದಷ್ಟು ಸೆಳೆಯುವ ಪ್ರಯತ್ನ ನಡೆಸಿದೆ. ಈ ನಡುವೆ ರಾಹುಲ್ ಗಾಂಧಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಚಾರ ಮಾಡಿದ್ದಾರೆ.

TAGGED:2024 lok sabha electionkeralaRahul GandhiRahul Gandhi NominationWayanad
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
7 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
23 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
26 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
44 minutes ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
45 minutes ago
Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?