ಬೀದರ್: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಒಬ್ಬ ಚೈಲ್ಡ್. ಮೊದಲನೆಯದಾಗಿ ಅವರಿಗೆ ಪ್ರಬುದ್ಧತೆ ಇಲ್ಲ ಎಂದು ಬೀದರ್ನ (Bidar) ಪಶು ವಿವಿಯಲ್ಲಿ (Veterinary, Animal and Fisheries Sciences University) ಕೇಂದ್ರ ಸಚಿವ ಭಗವಂತ್ ಖೂಬಾ (Bhagawanth Khuba) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಹುಲ್ ಗಾಂಧಿಯವರಿಗೆ ದೇಶದ ಮೇಲೆ ಅಭಿಮಾನ ಹಾಗೂ ದೇಶದ ವ್ಯವಸ್ಥೆ ಬಗ್ಗೆ ತಿಳುವಳಿಕೆ ಇಲ್ಲ ಎಂದು ಕುಟುಕಿದರು. ಇದನ್ನೂ ಓದಿ: ಶಾಸಕ ಅಭಯ್ ಪಾಟೀಲ್ರಿಂದ ಶಾಲಾ ಮಕ್ಕಳಿಗೆ ಐಸ್ಕ್ರೀಂ ವಿತರಣೆ
ದೇಶದ ಹೊರಗಡೆ ಹೋಗಿ ಪ್ರಚಾರವನ್ನು ಅನೇಕ ರೀತಿ ಪಡೆಯುತ್ತಾರೆ. ಇನ್ನೂ ಕೆಲವರು ಬಟ್ಟೆ ಬಿಚ್ಚಿ ಪ್ರಚಾರ ಪಡೆಯುತ್ತಾರೆ. ನಮ್ಮ ದೇಶವನ್ನು ನಿಂದಿಸಿ, ಸಂವಿಧಾನ (Constitution) ಹಾಗೂ ಪ್ರಜಾಪ್ರಭುತ್ವಕ್ಕೆ (Democrosy) ಪ್ರಶ್ನೆ ಮಾಡುತ್ತಾರೆ. ಒಬ್ಬ ನಾಗರಿಕನ ಜವಾಬ್ದಾರಿಯನ್ನೂ ರಾಹುಲ್ ನಿರ್ವಹಣೆ ಮಾಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಯುವತಿಯ ಹತ್ಯೆ – ದಲಿತಳು ಎಂದು ಕೊಲೆ ಆರೋಪ