Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕರ್ನಾಟಕ ವಿರುದ್ಧ ಕೇರಳ ಪ್ರತಿಭಟನೆ – ಸ್ಥಳಕ್ಕೆ ಭೇಟಿ ನೀಡಿ ರಾಹುಲ್ ಬೆಂಬಲ

Public TV
Last updated: October 4, 2019 3:09 pm
Public TV
Share
3 Min Read
collage rahul gandhi
SHARE

ತಿರುವನಂತಪುರಂ: ಕರ್ನಾಟಕದ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡಬೇಕೆಂಬ ಕೇರಳದ ವಯನಾಡಿನ ಜನತೆಯ ಹೋರಾಟಕ್ಕೆ ಸಂಸದ ರಾಹುಲ್ ಗಾಂಧಿ ಆಗಮಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾತ್ರಿ ವೇಳೆ ಅರಣ್ಯದಲ್ಲಿ ವಾಹನ ಸಂಚಾರ ಮಾಡುವುದರಿಂದ ಅಪಘಾತ ಸಂಭವಿಸಿ ಹೆಚ್ಚಿನ ಕಾಡು ಪ್ರಾಣಿಗಳು ಸಾವನ್ನಪ್ಪುತ್ತವೆ ಎಂದು ಕರ್ನಾಟಕ ಸರ್ಕಾರ  ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅರಣ್ಯದಲ್ಲಿ ವಾಹನ ಸಂಚಾರವನ್ನು ನಿಷೇಧ ಮಾಡಿತ್ತು. ಇದನ್ನು ತೆಗೆದು ಹಾಕುವಂತೆ ಕೇರಳ ಜನತೆ ಪ್ರತಿಭಟನೆ ಮಾಡುತ್ತಿದ್ದಾರೆ.

I am in Wayanad, Kerala to stand in solidarity with the youth who have been on hunger strike, protesting against the travel ban on National Highway 766. Earlier I visited those who have had to be hospitalised, as a result of the prolonged fast. pic.twitter.com/eVqbHWMZJG

— Rahul Gandhi (@RahulGandhi) October 4, 2019

ಇಂದು ಈ ವಿಚಾರವಾಗಿ ಕೇರಳದ ಪ್ರತಿಭಟನೆ ನಡೆಯುತ್ತಿರುವ ಸುಲ್ತಾನ್ ಬತ್ತೇರಿ ಪಟ್ಟಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು, ನಿಷೇಧ ವಿರೋಧಿಸಿ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‍ಐ), ಯೂತ್ ಕಾಂಗ್ರೆಸ್ ಮತ್ತು ಯೂತ್ ಲೀಗ್‍ನ ಕಾರ್ಯಕರ್ತರು ಕಳೆದ ಹತ್ತು ದಿನದಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿರುವವರನ್ನು ರಾಹುಲ್ ಗಾಂಧಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೇರಳ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ಸಂಚಾರ ನಿಷೇಧ ಮಾಡಿದ್ದನ್ನು ವಿರೋಧಿಸಿ ಕೇರಳ ಯುವಕರು ಮಾಡುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಲು ನಾನು ವಯನಾಡಿಗೆ ಬಂದಿದ್ದೇನೆ. ಇದಕ್ಕೂ ಮುಂಚೆ ಉಪವಾಸದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರನ್ನು ನೋಡಿ ಆರೋಗ್ಯವನ್ನು ವಿಚಾರಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

I stand in solidarity with the youth on an indefinite hunger strike since September 25th protesting against the daily 9 hour traffic ban on NH-766 that has caused immense hardship to lakhs of people in Kerala and Karnataka.

— Rahul Gandhi (@RahulGandhi) September 29, 2019

ಬಂಡೀಪುರ ಅರಣ್ಯದಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂಚಾರವನ್ನು 9 ಗಂಟೆಗಳ ಕಾಲ ನಿಷೇಧ ಮಾಡಿದರೆ ಕೇರಳ ಮತ್ತು ಕರ್ನಾಟಕ ಜನರಿಗೆ ತೊಂದರೆ ಉಂಟಾಗುತ್ತದೆ. ಇದನ್ನು ವಿರೋಧಿಸಿ ಕೆಲ ಯುವಕರು ಸೆಪ್ಟಂಬರ್ 25 ರಿಂದ ಮಾಡುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ನಾನು ಬೆಂಬಲ ನೀಡುತ್ತೇನೆ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ರಾಹುಲ್ ಗಾಂಧಿ ನಿಷೇಧ ಸಂಬಂಧ ಚರ್ಚೆ ಮಾಡಿದ್ದರು. ರಾಹುಲ್ ಗಾಂಧಿ ಬೆಂಬಲದಿಂದ ವಯನಾಡು ಕ್ಷೇತ್ರದ ಸ್ಥಳೀಯರು ಪ್ರತಿಭಟನೆ ಮಾಡಿದ್ದು, ಇದರಲ್ಲಿ ಒಂದು ಸಾವಿರಕ್ಕೂ ಅಧಿಕ ರೈತರು ಮತ್ತು ಸ್ಥಳೀಯರು ಭಾಗವಹಿಸಿದ್ದರು.

ಏನಿದು ಪ್ರಕರಣ?
ಹುಲಿ, ಆನೆ, ಕಾಡೆಮ್ಮೆ ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಾಣಿಗಳು ಅಪಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ 2009ರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212 ಮತ್ತು 69 ರಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಚಾಮಾರಾಜನಗರ ಜಿಲ್ಲಾ ಆಡಳಿತ ಆದೇಶ ಹೊರಡಿಸಿತ್ತು. ವಾಹನಗಳ ಸಂಚಾರ ನಿಷೇಧವನ್ನು ರದ್ದುಪಡಿಸದಂತೆ ಕರ್ನಾಟಕ ಹೈಕೋರ್ಟ್ 2010ರಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ. ಕೇರಳ ಸರ್ಕಾರ ಈ ಹಿಂದೆ ಸಾಕಷ್ಟು ಬಾರಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು. ಕೇರಳದ ಲಾಬಿಗೆ ರಾಜ್ಯ ಸರ್ಕಾರ ಮಣಿದಿರಲಿಲ್ಲ.

BANDIPUR

ಪರಿಸ್ಥಿತಿಯನ್ನು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್ ಕೇಂದ್ರ ಸಾರಿಗೆ ಸಚಿವಾಲಯದ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳ ಜೊತೆ ಕರ್ನಾಟಕ, ತಮಿಳುನಾಡು, ಕೇರಳದ ಸಾರಿಗೆ ಸಚಿವಾಲಯದ ಅಧಿಕಾರಿಗಳನ್ನು ಹೊಂದಿದ್ದ ಸಮಿತಿಯನ್ನು ರಚಿಸುವಂತೆ ಸೂಚಿಸಿತ್ತು. ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಹಿಂದಿದ್ದ ನಾಲ್ಕೂ ಸರ್ಕಾರಗಳು ಸಮ್ಮತಿ ಸೂಚಿಸಿರಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ. ಸಿಎಂ ಕುಮಾರಸ್ವಾಮಿ ಸರ್ಕಾರದ ಜೊತೆಗೂ ಕೇರಳ ಮಾತುಕತೆ ನಡೆಸಿತ್ತು.

ಬಲಿಯಾದ ಪ್ರಾಣಿಗಳ ಸಂಖ್ಯೆ ಎಷ್ಟು?
ರಾತ್ರಿ ಸಂಚಾರ ನಿಷೇಧಕ್ಕೂ ಮುನ್ನ ಅಂದ್ರೆ 2004-09ರ ಅವಧಿಯಲ್ಲಿ ಬಂಡಿಪುರ ಅರಣ್ಯ ಪ್ರದೇಶದಲ್ಲಿ 86 ಪ್ರಾಣಿಗಳು ಅಪಘಾತಕ್ಕೆ ಬಲಿಯಾಗಿವೆ. ರಾತ್ರಿ ಸಂಚಾರ ನಿಷೇಧ ಬಳಿಕ 2010-18ರ ಅವಧಿಯಲ್ಲಿ 17 ಪ್ರಾಣಿ ಮೃತಪಟ್ಟಿವೆ. ಒಟ್ಟಿನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದ ಬಳಿಕ ಅಪಘಾತದಲ್ಲಿ ಸತ್ತ ಪ್ರಾಣಿಗಳ ಸಂಖ್ಯೆ ಇಳಿಕೆಯಾಗಿತ್ತು. ಇದೀಗ ಮತ್ತೆ ಸಂಚಾರ ಮುಕ್ತ ಮಾಡಿದ್ರೆ ಮತ್ತೆ ಪ್ರಾಣಿಗಳು ಬಲಿಯಾಗುತ್ತವೆ ಅಂತ ಪ್ರಾಣಿಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.

BANDIPUR 2

ಯಾವ ವರ್ಷದಲ್ಲಿ ಎಷ್ಟು ಪ್ರಾಣಿಗಳು ಪ್ರಾಣ ಕಳೆದುಕೋಂಡಿವೆ ಎಂಬ ವಿವರ ಈ ಕೆಳಗಿನಂತಿದೆ:
2004-32, 200 -7, 2007-41, 2008-2, 2009-2, 2010-3, 2011-7, 2012-10, 2013-6, 2014-1, 2015-2, 2016-1, 2017-2, 2018- 2 ಪ್ರಾಣಿಗಳು ಮೃತಪಟ್ಟಿವೆ.

TAGGED:Bandipur ForestkarnatakakeralaProhibitionprotestRahul GandhiVehicle Trafficಕರ್ನಾಟಕಕೇರಳನಿಷೇಧಪ್ರತಿಭಟನೆಬಂಡೀಪುರ ಅರಣ್ಯರಾಹುಲ್ ಗಾಂಧಿವಾಹನ ಸಂಚಾರ
Share This Article
Facebook Whatsapp Whatsapp Telegram

You Might Also Like

Prathap Simha
Districts

ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ

Public TV
By Public TV
1 hour ago
Shubman Gill Akash Deep
Cricket

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

Public TV
By Public TV
2 hours ago
yathindra siddaramaiah
Districts

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ

Public TV
By Public TV
2 hours ago
Shubman Gill Team India
Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
By Public TV
3 hours ago
Ramya 1
Cinema

ನಾನು ಬಾಸ್ಕೆಟ್‌ಬಾಲ್ ಪ್ಲೇಯರ್, ಸ್ಪೋರ್ಟ್ಸ್‌ಗೆ ಹೈಟ್ ಮ್ಯಾಟರ್ ಆಗಲ್ಲ: ರಮ್ಯಾ

Public TV
By Public TV
3 hours ago
Akash Deep 1
Cricket

ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್- ಭಾರತಕ್ಕೆ 336 ರನ್‌ಗಳ ಭರ್ಜರಿ ಜಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?