Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿಗೆ ಬಂದಾಗ ನಿಜವಾಗಿಯೂ ಆಗಿದ್ದೇನು?

Public TV
Last updated: April 26, 2018 11:50 pm
Public TV
Share
3 Min Read
hbl rahul gandhi
SHARE

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆಯ ಪ್ರಚಾರಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬವರು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

rahul gandhi 5 2

ಇಂದು ಬೆಳಗ್ಗೆ ಏನಾಯ್ತು?: ಕರಾವಳಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸುತ್ತಿದ್ದ ರಾಹುಲ್ ಗಾಂಧಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ ಹುಬ್ಬಳ್ಳಿಗೆ ಹೊರಟಿದ್ದರು. ಆದರೆ ವಿಮಾನದ ಲ್ಯಾಂಡಿಂಗ್ ವೇಳೆ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಕೌಶಲ್ ದೂರಿನಲ್ಲಿ ಹೇಳಿದ್ದಾರೆ.

ನಾನು ರಾಹುಲ್ ಗಾಂಧಿ ಸೇರಿ ನಾಲ್ವರ ಜೊತೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆ. ನಮ್ಮ ಜೊತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದ್ದರು. ಅಲ್ಲದೆ ರಾಮ್ ಪ್ರೀತ್, ರಾಹುಲ್ ರವಿ ಹಾಗೂ ಎಸ್‍ಪಿಜಿ ಅಧಿಕಾರಿಯಾಗಿದ್ದ ರಾಹುಲ್ ಗೌತಮ್ ಜೊತೆಗಿದ್ದರು. ದೆಹಲಿಯಿಂದ ಸುಮಾರು 9.20ಕ್ಕೆ ಹೊರಟ ವಿಮಾನ 11.45ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು.

ಆದರೆ ಈ ಪ್ರಯಾಣದ ವೇಳೆ ನಮಗೆ ಹಲವು ತಾಂತ್ರಿಕ ತೊಂದರೆಗಳು ಎದುರಾದವು. ಸುಮಾರು 10.45ರ ವೇಳೆಗೆ ವಿಮಾನ ದಿಢೀರನೇ ಎಡಭಾಗಕ್ಕೆ ವಾಲಿತು. ವೇಗವಾಗಿ ಆಗಸದಿಂದ ಕೆಳಗಿಳಿಯುತ್ತಿರುವಂತೆ ಭಾಸವಾಯಿತು. ಹೊರಗೆ ಬಿಸಿಲು ಹಾಗೂ ಸಾಮಾನ್ಯ ವಾತಾವರಣವಿತ್ತು. ಯಾವುದೇ ರೀತಿಯ ವೇಗದ ಗಾಳಿಯೂ ಬೀಸುತ್ತಿರಲಿಲ್ಲ.

vlcsnap 2018 04 26 23h34m15s159

ವಿಮಾನದ ಒಂದು ಭಾಗದಿಂದ ಸದ್ದು ಕೇಳುತ್ತಿತ್ತು. ಅಲ್ಲದೆ ನಾವು ಹೋಗಿ ಚೆಕ್ ಮಾಡಿದಾಗ ವಿಮಾನದ ಅಟೋ ಪೈಲಟ್ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿರಲಿಲ್ಲ. ಮೂರು ಬಾರಿ ವಿಮಾನವನ್ನು ಲ್ಯಾಂಡ್ ಮಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಮೂರನೇ ಯತ್ನದಲ್ಲಿ ವಿಮಾನ ಲ್ಯಾಂಡ್ ಆಯಿತು. ನಾವು ಪ್ರಯಾಣಿಸುತ್ತಿದ್ದ ವಿಮಾನ ಬೆಳಗ್ಗೆ 11.25ರ ವೇಳೆಗೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಯಿತು. ಈ ವೇಳೆ ವಿಮಾನ ಅಲುಗಾಡುತ್ತಿತ್ತು, ಜೊತೆಗೆ ನಮಗೆ ವಿಮಾನದಿಂದ ವಿಚಿತ್ರ ಶಬ್ದ ಕೇಳಿಸುತ್ತಿತ್ತು.

ವಿಮಾನದಲ್ಲಿದ್ದ ಪೈಲಟ್ ಸೇರಿದಂತೆ ಎಲ್ಲರಿಗೂ ಜೀವಭಯವಾಗಿತ್ತು. ಎಲ್ಲರ ಮುಖದಲ್ಲೂ ಆತಂಕ ಕಾಣಿಸುತ್ತಿತ್ತು. ಅಲ್ಲದೆ ವಿಮಾನದ ಸಿಬ್ಬಂದಿಯೂ ವಿಮಾನದ ವಿಚಿತ್ರ ಅನುಭವವನ್ನು ಖಚಿತಪಡಿಸಿದರು. ವಿಮಾನದಲ್ಲಿ ನಮಗಾದ ಅನುಭವ ಸಾಮಾನ್ಯವಾದುದಾಗಿರಲಿಲ್ಲ. ಹವಾಮಾನಕ್ಕೆ ಸಂಬಂಧಿಸಿದ್ದೂ ಆಗಿರಲಿಲ್ಲ. ವಿಮಾನದ ತಾಂತ್ರಿಕ ದೋಷದಿಂದಾಗಿಯೇ ಇಷ್ಟೆಲ್ಲಾ ಘಟನೆಗಳು ನಡೆಯಿತು. ಉದ್ದೇಶಪೂರ್ವಕವಾಗಿಯೇ ವಿಮಾನವನ್ನು ಈ ಸ್ಥಿತಿಗೆ ತಂದಿದ್ರಾ ಎಂಬುದನ್ನೂ ತಳ್ಳಿ ಹಾಕುವಂತಿಲ್ಲ. ಈ ಬಗ್ಗೆ ಸಮರ್ಪಕ ತನಿಖೆಯಾಗಬೇಕು.

ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ವಿಮಾನದ ಸೂಕ್ತ ತಪಾಸಣೆ ನಡೆಸಬೇಕು. ವಿಮಾನದ ನಿರ್ವಹಣೆಯನ್ನು ಮಾಡುತ್ತಿದ್ದ ವ್ಯಕ್ತಿಗಳನ್ನು ಕೂಡಾ ವಿಚಾರಣೆಗೊಳಪಡಿಸಬೇಕು. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಬೇಕು. ಈ ವಿಮಾನವನ್ನು ತನಿಖೆ ಮುಗಿಯುವವರೆಗೆ ಹುಬ್ಬಳ್ಳಿಯಲ್ಲೇ ಇಟ್ಟುಕೊಳ್ಳಬೇಕು. ತನಿಖೆ ಮುಗಿಯುವವರೆಗೆ ಈ ವಿಮಾನದ ಹಾರಾಟಕ್ಕೆ ಯಾವುದೇ ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಪೊಲೀಸರಿಗೆ ನೀಡಿದ ದೂರಿನ ಪ್ರತಿಯನ್ನು ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

Complaint to the DG&IG of Police, Karnataka, regarding the serious malfunction of the aircraft carrying Congress President @RahulGandhi pic.twitter.com/P3RJwkWOMR

— Congress (@INCIndia) April 26, 2018

ಘಟನೆ ಬಗ್ಗೆ ಟ್ವೀಟ್ ಮಾಡಿರುವ ನಟಿ ಹಾಗೂ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥೆ ರಮ್ಯಾ, ಆಟೋ ಪೈಲಟ್ ಮಾತ್ರವಲ್ಲ, ವಿಮಾನದ ರಾಡಾರ್ ಸಂಪರ್ಕದಲ್ಲೂ ತೊಂದರೆಯಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

Not just the autopilot, there was a rudder malfunction too- https://t.co/hN9ywV2atR

— Ramya/Divya Spandana (@divyaspandana) April 26, 2018

ಇನ್ನು ಘಟನೆ ವೇಳೆ ವಿಮಾನದಲ್ಲಿದ್ದ ಕೌಶಲ್ ಕೆ ವಿದ್ಯಾರ್ಥಿ ರಾತ್ರಿ 10.09ಕ್ಕೆ ಟ್ವೀಟ್ ಮಾಡಿದ್ದಾರೆ. ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ. ನಾನು ಜೀವಂತವಾಗಿರುವುದಕ್ಕೆ ಧನ್ಯವಾದ. ನನ್ನ ಜೀವನದಲ್ಲಿ ಇಂತಹ ಭಯಾನಕ ಸ್ಥಿತಿ ಎದುರಿಸಿರಲಿಲ್ಲ. ವಿಮಾನ ಬೀಳುತ್ತೆ ಎಂಬಂತೆ ಭಾಸವಾಗುತ್ತಿತ್ತು. ಆದರೆ ನಮ್ಮ ಅಧ್ಯಕ್ಷರು ಶಾಂತಚಿತ್ತರಾಗಿ ಪೈಲಟ್‍ಗಳ ಜೊತೆ ಮಾತನಾಡಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಮಾಡುವ ಬಗ್ಗೆ ಗಮನಹರಿಸಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

Glad to be in a room and getting some rest….thankful for being alive…never had such a frightening experience in my life…plane went into free fall…couldnt believe CP's composure and calmness as he stood beside pilots trying to save the situation.

— Kaushal K. Vidyarthee (@vidyarthee) April 26, 2018

ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿಶೇಷ ವಿಮಾನದ ಇಬ್ಬರು ಪೈಲಟ್‍ಗಳ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕಿರ್ ಸನದಿ ನೀಡಿದ ದೂರಿನ ಅನ್ವಯ ಏರ್ ಕ್ರಾಫ್ಟ್ ಕಾಯ್ದೆ 287, 336, ಐಪಿಸಿ ಸೆಕ್ಷನ್ 11 ಅನ್ವಯ ಹುಬ್ಬಳ್ಳಿಯ ಗೋಕುಲ ಠಾಣೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಘಟನೆ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮೋದಿ ದೂರವಾಣಿ ಕರೆ: ಸದ್ಯ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ರಾಹುಲ್ ಗಾಂಧಿ ಅವರ ವಿಮಾನ ಸಂಪರ್ಕ ಕಳೆದುಕೊಂಡ ಮಾಹಿತಿ ತಿಳಿದು ಚೀನಾದಿಂದ ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಗಳು ವರದಿ ಮಾಡಿವೆ. ಅಲ್ಲದೆ ಪ್ರಧಾನಮಂತ್ರಿ ಕಾರ್ಯಾಲಯವೂ ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದೆ ಎನ್ನಲಾಗಿದೆ.

rahul gandhi 3

TAGGED:complaintcongressHuballiHubli Airportpoliceprime minister modiPublic TVRahul GandhiSpecial flightಕಾಂಗ್ರೆಸ್ದೂರುಪಬ್ಲಿಕ್ ಟಿವಿಪೊಲೀಸ್ಪ್ರಧಾನಿ ಮೋದಿರಾಹುಲ್ ಗಾಂಧಿವಿಶೇಷ ವಿಮಾನಹುಬ್ಬಳ್ಳಿಹುಬ್ಬಳ್ಳಿ ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

big bulletin 24 July 2025 part 1
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-1

Public TV
By Public TV
5 hours ago
big bulletin 24 July 2025 part 2
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-2

Public TV
By Public TV
5 hours ago
Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
5 hours ago
big bulletin 24 July 2025 part 3
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-3

Public TV
By Public TV
5 hours ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
5 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?