Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿಗೆ ಬಂದಾಗ ನಿಜವಾಗಿಯೂ ಆಗಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿಗೆ ಬಂದಾಗ ನಿಜವಾಗಿಯೂ ಆಗಿದ್ದೇನು?

Dharwad

ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿಗೆ ಬಂದಾಗ ನಿಜವಾಗಿಯೂ ಆಗಿದ್ದೇನು?

Public TV
Last updated: April 26, 2018 11:50 pm
Public TV
Share
3 Min Read
hbl rahul gandhi
SHARE

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆಯ ಪ್ರಚಾರಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬವರು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

rahul gandhi 5 2

ಇಂದು ಬೆಳಗ್ಗೆ ಏನಾಯ್ತು?: ಕರಾವಳಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸುತ್ತಿದ್ದ ರಾಹುಲ್ ಗಾಂಧಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ ಹುಬ್ಬಳ್ಳಿಗೆ ಹೊರಟಿದ್ದರು. ಆದರೆ ವಿಮಾನದ ಲ್ಯಾಂಡಿಂಗ್ ವೇಳೆ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಕೌಶಲ್ ದೂರಿನಲ್ಲಿ ಹೇಳಿದ್ದಾರೆ.

ನಾನು ರಾಹುಲ್ ಗಾಂಧಿ ಸೇರಿ ನಾಲ್ವರ ಜೊತೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆ. ನಮ್ಮ ಜೊತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದ್ದರು. ಅಲ್ಲದೆ ರಾಮ್ ಪ್ರೀತ್, ರಾಹುಲ್ ರವಿ ಹಾಗೂ ಎಸ್‍ಪಿಜಿ ಅಧಿಕಾರಿಯಾಗಿದ್ದ ರಾಹುಲ್ ಗೌತಮ್ ಜೊತೆಗಿದ್ದರು. ದೆಹಲಿಯಿಂದ ಸುಮಾರು 9.20ಕ್ಕೆ ಹೊರಟ ವಿಮಾನ 11.45ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು.

ಆದರೆ ಈ ಪ್ರಯಾಣದ ವೇಳೆ ನಮಗೆ ಹಲವು ತಾಂತ್ರಿಕ ತೊಂದರೆಗಳು ಎದುರಾದವು. ಸುಮಾರು 10.45ರ ವೇಳೆಗೆ ವಿಮಾನ ದಿಢೀರನೇ ಎಡಭಾಗಕ್ಕೆ ವಾಲಿತು. ವೇಗವಾಗಿ ಆಗಸದಿಂದ ಕೆಳಗಿಳಿಯುತ್ತಿರುವಂತೆ ಭಾಸವಾಯಿತು. ಹೊರಗೆ ಬಿಸಿಲು ಹಾಗೂ ಸಾಮಾನ್ಯ ವಾತಾವರಣವಿತ್ತು. ಯಾವುದೇ ರೀತಿಯ ವೇಗದ ಗಾಳಿಯೂ ಬೀಸುತ್ತಿರಲಿಲ್ಲ.

vlcsnap 2018 04 26 23h34m15s159

ವಿಮಾನದ ಒಂದು ಭಾಗದಿಂದ ಸದ್ದು ಕೇಳುತ್ತಿತ್ತು. ಅಲ್ಲದೆ ನಾವು ಹೋಗಿ ಚೆಕ್ ಮಾಡಿದಾಗ ವಿಮಾನದ ಅಟೋ ಪೈಲಟ್ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿರಲಿಲ್ಲ. ಮೂರು ಬಾರಿ ವಿಮಾನವನ್ನು ಲ್ಯಾಂಡ್ ಮಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಮೂರನೇ ಯತ್ನದಲ್ಲಿ ವಿಮಾನ ಲ್ಯಾಂಡ್ ಆಯಿತು. ನಾವು ಪ್ರಯಾಣಿಸುತ್ತಿದ್ದ ವಿಮಾನ ಬೆಳಗ್ಗೆ 11.25ರ ವೇಳೆಗೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಯಿತು. ಈ ವೇಳೆ ವಿಮಾನ ಅಲುಗಾಡುತ್ತಿತ್ತು, ಜೊತೆಗೆ ನಮಗೆ ವಿಮಾನದಿಂದ ವಿಚಿತ್ರ ಶಬ್ದ ಕೇಳಿಸುತ್ತಿತ್ತು.

ವಿಮಾನದಲ್ಲಿದ್ದ ಪೈಲಟ್ ಸೇರಿದಂತೆ ಎಲ್ಲರಿಗೂ ಜೀವಭಯವಾಗಿತ್ತು. ಎಲ್ಲರ ಮುಖದಲ್ಲೂ ಆತಂಕ ಕಾಣಿಸುತ್ತಿತ್ತು. ಅಲ್ಲದೆ ವಿಮಾನದ ಸಿಬ್ಬಂದಿಯೂ ವಿಮಾನದ ವಿಚಿತ್ರ ಅನುಭವವನ್ನು ಖಚಿತಪಡಿಸಿದರು. ವಿಮಾನದಲ್ಲಿ ನಮಗಾದ ಅನುಭವ ಸಾಮಾನ್ಯವಾದುದಾಗಿರಲಿಲ್ಲ. ಹವಾಮಾನಕ್ಕೆ ಸಂಬಂಧಿಸಿದ್ದೂ ಆಗಿರಲಿಲ್ಲ. ವಿಮಾನದ ತಾಂತ್ರಿಕ ದೋಷದಿಂದಾಗಿಯೇ ಇಷ್ಟೆಲ್ಲಾ ಘಟನೆಗಳು ನಡೆಯಿತು. ಉದ್ದೇಶಪೂರ್ವಕವಾಗಿಯೇ ವಿಮಾನವನ್ನು ಈ ಸ್ಥಿತಿಗೆ ತಂದಿದ್ರಾ ಎಂಬುದನ್ನೂ ತಳ್ಳಿ ಹಾಕುವಂತಿಲ್ಲ. ಈ ಬಗ್ಗೆ ಸಮರ್ಪಕ ತನಿಖೆಯಾಗಬೇಕು.

ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ವಿಮಾನದ ಸೂಕ್ತ ತಪಾಸಣೆ ನಡೆಸಬೇಕು. ವಿಮಾನದ ನಿರ್ವಹಣೆಯನ್ನು ಮಾಡುತ್ತಿದ್ದ ವ್ಯಕ್ತಿಗಳನ್ನು ಕೂಡಾ ವಿಚಾರಣೆಗೊಳಪಡಿಸಬೇಕು. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಬೇಕು. ಈ ವಿಮಾನವನ್ನು ತನಿಖೆ ಮುಗಿಯುವವರೆಗೆ ಹುಬ್ಬಳ್ಳಿಯಲ್ಲೇ ಇಟ್ಟುಕೊಳ್ಳಬೇಕು. ತನಿಖೆ ಮುಗಿಯುವವರೆಗೆ ಈ ವಿಮಾನದ ಹಾರಾಟಕ್ಕೆ ಯಾವುದೇ ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಪೊಲೀಸರಿಗೆ ನೀಡಿದ ದೂರಿನ ಪ್ರತಿಯನ್ನು ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

Complaint to the DG&IG of Police, Karnataka, regarding the serious malfunction of the aircraft carrying Congress President @RahulGandhi pic.twitter.com/P3RJwkWOMR

— Congress (@INCIndia) April 26, 2018

ಘಟನೆ ಬಗ್ಗೆ ಟ್ವೀಟ್ ಮಾಡಿರುವ ನಟಿ ಹಾಗೂ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥೆ ರಮ್ಯಾ, ಆಟೋ ಪೈಲಟ್ ಮಾತ್ರವಲ್ಲ, ವಿಮಾನದ ರಾಡಾರ್ ಸಂಪರ್ಕದಲ್ಲೂ ತೊಂದರೆಯಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

Not just the autopilot, there was a rudder malfunction too- https://t.co/hN9ywV2atR

— Ramya/Divya Spandana (@divyaspandana) April 26, 2018

ಇನ್ನು ಘಟನೆ ವೇಳೆ ವಿಮಾನದಲ್ಲಿದ್ದ ಕೌಶಲ್ ಕೆ ವಿದ್ಯಾರ್ಥಿ ರಾತ್ರಿ 10.09ಕ್ಕೆ ಟ್ವೀಟ್ ಮಾಡಿದ್ದಾರೆ. ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ. ನಾನು ಜೀವಂತವಾಗಿರುವುದಕ್ಕೆ ಧನ್ಯವಾದ. ನನ್ನ ಜೀವನದಲ್ಲಿ ಇಂತಹ ಭಯಾನಕ ಸ್ಥಿತಿ ಎದುರಿಸಿರಲಿಲ್ಲ. ವಿಮಾನ ಬೀಳುತ್ತೆ ಎಂಬಂತೆ ಭಾಸವಾಗುತ್ತಿತ್ತು. ಆದರೆ ನಮ್ಮ ಅಧ್ಯಕ್ಷರು ಶಾಂತಚಿತ್ತರಾಗಿ ಪೈಲಟ್‍ಗಳ ಜೊತೆ ಮಾತನಾಡಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಮಾಡುವ ಬಗ್ಗೆ ಗಮನಹರಿಸಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

Glad to be in a room and getting some rest….thankful for being alive…never had such a frightening experience in my life…plane went into free fall…couldnt believe CP's composure and calmness as he stood beside pilots trying to save the situation.

— Kaushal K. Vidyarthee (@vidyarthee) April 26, 2018

ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿಶೇಷ ವಿಮಾನದ ಇಬ್ಬರು ಪೈಲಟ್‍ಗಳ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕಿರ್ ಸನದಿ ನೀಡಿದ ದೂರಿನ ಅನ್ವಯ ಏರ್ ಕ್ರಾಫ್ಟ್ ಕಾಯ್ದೆ 287, 336, ಐಪಿಸಿ ಸೆಕ್ಷನ್ 11 ಅನ್ವಯ ಹುಬ್ಬಳ್ಳಿಯ ಗೋಕುಲ ಠಾಣೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಘಟನೆ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮೋದಿ ದೂರವಾಣಿ ಕರೆ: ಸದ್ಯ ಚೀನಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ರಾಹುಲ್ ಗಾಂಧಿ ಅವರ ವಿಮಾನ ಸಂಪರ್ಕ ಕಳೆದುಕೊಂಡ ಮಾಹಿತಿ ತಿಳಿದು ಚೀನಾದಿಂದ ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಗಳು ವರದಿ ಮಾಡಿವೆ. ಅಲ್ಲದೆ ಪ್ರಧಾನಮಂತ್ರಿ ಕಾರ್ಯಾಲಯವೂ ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದೆ ಎನ್ನಲಾಗಿದೆ.

rahul gandhi 3

TAGGED:complaintcongressHuballiHubli Airportpoliceprime minister modiPublic TVRahul GandhiSpecial flightಕಾಂಗ್ರೆಸ್ದೂರುಪಬ್ಲಿಕ್ ಟಿವಿಪೊಲೀಸ್ಪ್ರಧಾನಿ ಮೋದಿರಾಹುಲ್ ಗಾಂಧಿವಿಶೇಷ ವಿಮಾನಹುಬ್ಬಳ್ಳಿಹುಬ್ಬಳ್ಳಿ ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Hardik Pandya
Cricket

IPL 2026 | DC vs MI ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡ್ತಿಲ್ಲ ಯಾಕೆ?

Public TV
By Public TV
3 minutes ago
Vatal Nagaraj Tamate Protest
Districts

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

Public TV
By Public TV
15 minutes ago
US Israeli strikes on Irans Bushehr nuclear plant
Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
By Public TV
37 minutes ago
Auto Gas Problem
Bengaluru City

ರಾಜ್ಯದಲ್ಲಿ ತಪ್ಪದ ಗ್ಯಾಸ್ ಪ್ರಾಬ್ಲಂ – ಬಂಕ್‌ಗಳ ಎದುರು ಆಟೋಗಳ ಸರತಿಸಾಲು

Public TV
By Public TV
43 minutes ago
PSI Mangalamma
Districts

ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

Public TV
By Public TV
1 hour ago
Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?