ನವದೆಹಲಿ: ಮೋದಿ ಸರ್ಕಾರದ ಚುನಾವಣಾ ಆಫರ್ ಶೀಘ್ರ ಮುಗಿಯಲಿದೆ, ಬೇಗ ಪೆಟ್ರೋಲ್ ಟ್ಯಾಂಕ್ ಭರ್ತಿ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
- Advertisement 2
ಟ್ವಿಟ್ಟರ್ನಲ್ಲಿ ಏನಿದೆ?: ನರೇಂದ್ರ ಮೋದಿ ಸರ್ಕಾರ ನೀಡಿದ್ದ ಎಲೆಕ್ಷನ್ ಆಫರ್ ಸದ್ಯದಲ್ಲೇ ಕೊನೆಯಾಗಲಿದೆ. ಆದಷ್ಟು ಶೀಘ್ರವಾಗಿ ಪೆಟ್ರೋಲ್ ಟ್ಯಾಂಕ್ಗಳನ್ನು ಭರ್ತಿ ಮಾಡಿಸಿಕೊಳ್ಳಿ ಎಂದು ಬರೆದಿದ್ದಾರೆ. ಇದರೊಂದಿಗೆ ಹೈಕ್- ಕೆಲವೇ ದಿನಗಳಲ್ಲಿ ನಿಮ್ಮ ಸಮೀಪದ ಪೆಟ್ರೋಲ್ ಬಂಕ್ಗಳಲ್ಲಿ ಎಂದು ಬರೆದಿರುವ ಚಿತ್ರವೊಂದನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಆಂಬ್ಯುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!
- Advertisement 3
- Advertisement 4
ಈ ಹಿಂದೆ ವಾರಣಾಸಿಯ ಪಿಂದ್ರಾದಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ, ಮೋದಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದರು. ನಾನು ಸತ್ತರೂ ನಿಮ್ಮ ಬ್ಯಾಂಕ್ ಅಕೌಂಟ್ಗಳಿಗೆ 15 ಲಕ್ಷ ರೂ ಬರುತ್ತದೆ ಎಂಬ ಸುಳ್ಳು ಭರವಸೆಯನ್ನು ಕೊಡುವುದಿಲ್ಲ. ಇದು ನಿಮಗೆ ಒಳ್ಳೆಯದಾಗುತ್ತದೋ ಅಥವಾ ಕೆಟ್ಟದಾಗುತ್ತದೋ ಎಂದು ಯೋಚಿಸುವುದಿಲ್ಲ. ನಿಮ್ಮನ್ನೆಲ್ಲರನ್ನೂ ನಾನು ಗೌರವಿಸುತ್ತೇನೆ. ನಿಮ್ಮ ಮುಂದೆ ನಾನು ಸುಳ್ಳು ಹೇಳುವುದಿಲ್ಲ ಎಂದಿದ್ದರು. ಇದನ್ನೂ ಓದಿ: ಬಿಎಸ್ ಯಡಿಯೂರಪ್ಪಗೆ ಗುರುಬಸವಶ್ರೀ ಪ್ರಶಸ್ತಿ ಪ್ರದಾನ
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ತೈಲ ದರ ಏರಿಕೆಯಾಗುತ್ತಿದೆ. ಇಂಧನ ಕಂಪನಿಗಳು ಬೆಲೆ ಏರಿಕೆಯಿಂದ ನಷ್ಟ ಹೊಂದುತ್ತಿವೆ.