ರಾಹುಲ್ ಗಾಂಧಿ ಈ ದೇಶದ ಪ್ರಧಾನಿ ಆಗಬೇಕು: ಸಿದ್ದರಾಮಯ್ಯ

Public TV
1 Min Read
rahul gandhi siddaramaiah

-ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ

ಬೆಂಗಳೂರು: ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಅದಕ್ಕೆ ರಾಹುಲ್ ಗಾಂಧಿ (Rahul Gandhi) ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ನಗರದಲ್ಲಿ ನಡೆದ ಕಾಂಗ್ರೆಸ್ (Congress) ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಇದೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದರು. ಇದನ್ನೂ ಓದಿ: ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ- ಯೋಗಿ ಸರ್ಕಾರದ ಮಹತ್ವದ ನಿರ್ಧಾರ

Rahul Gandhi Bharat Jodo Yatra 2

ಯಾರು ಕೂಡ ಈ ದೇಶದಲ್ಲಿ ಭಾರತ್ ಜೋಡೋ (Bharat Jodo) ಮಾಡಿರಲಿಲ್ಲ. ಈಗ ಭಾರತ್ ಜೋಡೋ.2 ಪ್ರಾರಂಭ ಮಾಡ್ತಿದ್ದಾರೆ. ಭಾರತ ನ್ಯಾಯ ಯಾತ್ರೆ ಮಾಡ್ತಿದ್ದಾರೆ. ಯಾಕಂದ್ರೆ ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ. ಇಂತವರ ಕೈಗೆ ಅಧಿಕಾರ ಸಿಗಬೇಕೋ ನರೇಂದ್ರ ಮೋದಿಗೆ ಅಧಿಕಾರ ಸಿಗಬೇಕೋ..?. ಹಾಗಾಗಿ ನಾವು ಎಲ್ಲರೂ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಒತ್ತಿ ಹೇಳಿದರು.

Share This Article