Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಟ್ ಬ್ಯಾನ್ ಮೂಲಕ ಕಪ್ಪು ಹಣವನ್ನು ವೈಟ್ ಮನಿ ಮಾಡಲು ಮೋದಿ ಅವಕಾಶ ನೀಡಿದ್ರು: ರಾಗಾ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ನೋಟ್ ಬ್ಯಾನ್ ಮೂಲಕ ಕಪ್ಪು ಹಣವನ್ನು ವೈಟ್ ಮನಿ ಮಾಡಲು ಮೋದಿ ಅವಕಾಶ ನೀಡಿದ್ರು: ರಾಗಾ ಆರೋಪ

Bagalkot

ನೋಟ್ ಬ್ಯಾನ್ ಮೂಲಕ ಕಪ್ಪು ಹಣವನ್ನು ವೈಟ್ ಮನಿ ಮಾಡಲು ಮೋದಿ ಅವಕಾಶ ನೀಡಿದ್ರು: ರಾಗಾ ಆರೋಪ

Public TV
Last updated: February 25, 2018 5:34 pm
Public TV
Share
2 Min Read
RAHUL GANDHI IN KARNATAKA 2 4
SHARE

ಬಾಗಲಕೋಟೆ: ಮುಂಬೈ ಕರ್ನಾಟಕದ ಜಿಲ್ಲೆಗಳಲ್ಲಿ ರಾಹುಲ್ ಗಾಂಧಿಯವರ ಜನಾಶೀರ್ವಾದ ಯಾತ್ರೆಯ ಎರಡನೇಯ ದಿನವು ಮುಂದುವರೆದಿದ್ದು ಇಂದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದರು.

ಜಿಲ್ಲೆಯ ಮುಳವಾಡದಲ್ಲಿ ಬೃಹತ್ ಜನಾಶೀರ್ವಾದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಮತ್ತೊಮ್ಮೆ ವಚನ ಹೇಳುವ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಎಲ್ಲರಿಗು ಶರಣು ಶರಣಾರ್ಥಿ ಎಂದ ಅವರು, ಸಾವಿರಾರು ವರ್ಷದ ಇತಿಹಾಸವಿರುವ ಭಾರತ ದೇಶದಲ್ಲಿ ಕಾಂಗ್ರೆಸ್‍ಗೆ ನೂರು ವರ್ಷ ಪೂರ್ಣಗೊಳಿಸಿದೆ. ಇಂತಹ ಪಕ್ಷ ಇದೀಗ ಹೊಸದಾಗಿ ಕಾಣಿಸುತ್ತಿದೆ. ಪಕ್ಷಕ್ಕೆ ಹೊಸ ಚೈತನ್ಯ ಮೂಡಿದೆ. ಬಸವಣ್ಣನ ತತ್ವಗಳನ್ನ ನಾವು ಪಾಲಿಸುತ್ತಿದ್ದೇವೆ ಎಂದರು.

RAHUL GANDHI IN KARNATAKA 2 3

ಮೋದಿ ವಿರುದ್ಧ ವಾಗ್ದಾಳಿ: ರಾಹುಲ್ ಗಾಂಧಿ ತಮ್ಮ ಭಾಷಣದ ಉದ್ದಕ್ಕೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಆರೋಪಗಳ ಸುರಿಮಳೆಗೈದರು. ಪ್ರಧಾನಿಗಳ ಬಳಿ ನಾನು ದೇಶದ ರೈತರ ಸಾಲಮನ್ನಾ ಮಾಡಿ ಎಂದು ಕೇಳಿದೆ. ಆದರೆ ಅವರು ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಯುಪಿಎ ಸರ್ಕಾರದ ಕಾಲದಲ್ಲಿ 70 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿತ್ತು. ಆದರೆ ಮೋದಿ ಸರ್ಕಾರ ಇದಕ್ಕಿಂತ ಎರಡು, ಮೂರು ಪಟ್ಟು ಹಣವನ್ನ ಕೇವಲ ಹತ್ತು ಉದ್ಯಮಿಗಳಿಗೆ ನೀಡಿದೆ. ಪ್ರಧಾನಿ ಮೋದಿ ಅವರೇ ಹೀಗೆ ಏಕೆ ಮಾಡಿದ್ದೀರಾ ಎಂದು ಪ್ರಶ್ನಿಸಿದರೆ ಮೌನವನ್ನು ಉತ್ತರವಾಗಿ ನೀಡಿದರು ಎಂದು ರಾಹುಲ್ 30 ಸೆಕೆಂಡ್ ಮೌನವಾಗಿ ನಿಂತರು.

RAHUL GANDHI IN KARNATAKA 2 2

ರಾಹುಲ್ ಅವರು ತಮ್ಮ ಭಾಷಣ ವೇಳೆ ಬಸವಣ್ಣನವರ ವಚನವನ್ನು ಹೇಳಿ ಕೇಂದ್ರ ಸರ್ಕಾರದ ಕಾರ್ಯವನ್ನು ಟೀಕಿಸಿದರು. ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದಾರೆ. ಬಸವಣ್ಣ ನವರು ಕೆಲಸದಲ್ಲಿ ದೇವರನ್ನು ಕಾಣಿ ಎಂದು ಹೇಳಿದ್ದರು. ಆದರೆ ನೀವು ನುಡಿದಂತೆ ನಡೆದುಕೊಂಡಿದ್ದಿರಾ ಎಂದರು. ಪದೇ ಪದೇ ಬಸವಣ್ಣನವರ ವಚನವನ್ನು ಪ್ರಸ್ತಾಪಿಸಿ ಮೋದಿ ಜೀ ನೀವು ನುಡಿದಂತೆ ನಡೆದುಕೊಳ್ಳಿ ಎಂದರು.

ಪ್ರಧಾನಿ ಮೋದಿ ಅವರು ನೋಟ್ ಬ್ಯಾನ್ ಮಾಡಿದರು. ನೋಟ್ ಬ್ಯಾನ್ ಮಾಡುವ ಮೂಲಕ ಕಪ್ಪು ಹಣ ಹೊಂದಿದ್ದ ಕುಳಗಳು ವೈಟ್ ಮನಿ ಮಾಡಲು ಅವಕಾಶ ನೀಡಿದರು. ನೀರವ್ ಮೋದಿ 11,000 ಸಾವಿರ ಕೋಟಿ ರೂ. ತೆಗದುಕೊಂಡು ದೇಶ ಬಿಟ್ಟು ಓಡಿ ಹೋಗಿದ್ದಾನೆ. ಈ ಬಗ್ಗೆ ಇದುವರೆಗೂ ಮೋದಿ ನೀರವ್ ಮೋದಿ ಬಗ್ಗೆ ಮಾತನಾಡಿಲ್ಲ. ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದ ಅವರು ನಾಲ್ಕು ವರ್ಷದಲ್ಲಿ ಎಷ್ಟು ಉದ್ಯೋಗ ಸೃಷ್ಟಿ ಮಾಡಿದ್ದಾರೆ. ನುಡಿದಂತೆ ನಡೆಯಿರಿ ಎಂದು ಟಾಂಗ್ ನೀಡಿದರು.

RAHUL GANDHI IN KARNATAKA 2 7

ಇದಕ್ಕೂ ಮುನ್ನ ವಿಜಯಪುರದಲ್ಲಿ ಆಯೋಜಿಸಿರುವ “ವೃಕ್ಷಥಾನ್ 2018” ಹಾಫ್ ಮ್ಯಾರಥಾನ್‍ಗೆ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಬಳಿಕ ಬಾಗಲಕೋಟೆಯಲ್ಲಿ ಜಮಖಂಡಿ ಸಮೀಪದ ಚಿಕ್ಕಪಡಸಲಗಿ ಬ್ಯಾರೇಜ್ ವೀಕ್ಷಣೆ ಮಾಡಿ ಸಂವಾದ ನಡೆಸಿದರು. ನಮ್ಮ ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ದೇಶದಲ್ಲಿ ಕರ್ನಾಟಕ ನೀರಾವರಿಗೆ ಮೀಸಲಿಟ್ಟ ಹಣದಲ್ಲಿ ಮೂರನೇ ಸ್ಥಾನ ಪಡೆದಿದೆ. ಬಿಜೆಪಿ ಸರ್ಕಾರ ನೀಡಿದ ಹಣಕ್ಕಿಂತಲೂ ನಮ್ಮ ಸರ್ಕಾರ ಮೂರು ಪಟ್ಟು ಹೆಚ್ಚು ನೀಡಿದೆ ಎಂದರು. ನಂತರ ಬೀಳಗಿಯಲ್ಲಿ ಎಸ್.ಆರ್. ಪಾಟೀಲ್ ಒಡೆತನದ ಗಾಂಧಿ ವಸತಿ ಶಾಲೆಯನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಗಿಡಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

https://www.youtube.com/watch?v=OeeSu__11Gc

https://www.youtube.com/watch?v=Q8Mo5OsxkrA

https://www.youtube.com/watch?v=6eY7dObOLSk

RAHUL GANDHI IN KARNATAKA 2 8

RAHUL GANDHI IN KARNATAKA 2 5

RAHUL GANDHI IN KARNATAKA 2 6

 

RAHUL GANDHI IN KARNATAKA 2 9

TAGGED:bagalakotecm siddaramaiahcongresscorruptionprime minister modiPublic TVRahul Gandhiಕಾಂಗ್ರೆಸ್ಪಬ್ಲಿಕ್ ಟಿವಿಪ್ರಧಾನಿ ಮೋದಿಬಾಗಲಕೋಟೆಭ್ರಷ್ಟಾಚಾರರಾಹುಲ್ ಗಾಂಧಿಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
18 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
58 minutes ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
2 hours ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?