ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ನಡೆಯುವ ಸಿದ್ದರಾಮೋತ್ಸವದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭಾಗವಹಿಸುವುದು ಖಚಿತವಾಗಿದೆ. ಆದರೆ ಕೊನೆಗಳಿಗೆಯಲ್ಲಿ ಬದಲಾವಣೆ ಆಗಬಹುದು ಎಂದು ರಾಹುಲ್ ಗಾಂಧಿ ಕಚೇರಿಯಿಂದ ಮಾಹಿತಿ ರವಾನೆಯಾಗಿದೆ.
ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವದಲ್ಲಿ ಎಐಸಿಸಿ ನಾಯಕರ ರಾಹುಲ್ ಗಾಂಧಿ ಭಾಗವಹಿಸುವುದು ಖಚಿತವಾಗಿದೆ. ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ರಾಹುಲ್ ಗಾಂಧಿ ಭಾಗವಹಿಸುತ್ತಾರೆ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಮಾಹಿತಿ ತಲುಪಿಸಲಾಗಿದೆ. ಇದನ್ನೂ ಓದಿ: ಗುತ್ತಿಗೆ, ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸುಧಾಕರ್
ಸಿದ್ದರಾಮೋತ್ಸವ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಆದರೂ ಕೊನೆಗಳಿಗೆಯಲ್ಲಿ ಬದಲಾವಣೆ ಆಗಬಹುದು. ಸ್ವತಃ ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಬಂದಿರುವ ಸಂದೇಶ. ಜುಲೈ 31 ರಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಲಾಗಿದೆ. ವಿಚಾರಣೆ ಆಗಸ್ಟ್ 3 ಕ್ಕೂ ಮುಂದುವರಿದರೆ ರಾಹುಲ್ ಗಾಂಧಿ ಸಿದ್ದರಾಮೋತ್ಸವಕ್ಕೆ ಬರಲು ಆಗಲ್ಲ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಮಾಹಿತಿ ರವಾನಿಸಲಾಗಿದೆ.
ಆಗಸ್ಟ್ 3 ರಂದು ಸೋನಿಯಾ ಗಾಂಧಿಯವರ ವಿಚಾರಣೆ ಇದ್ದರೆ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರಲು ಸಾಧ್ಯವಿಲ್ಲ. ಆಗಸ್ಟ್ 3 ರಂದು ರಾಹುಲ್ ಗಾಂಧಿಯವರನ್ನೇ ವಿಚಾರಣೆಗೆ ಕರೆದರೆ ಸಿದ್ದರಾಮೋತ್ಸವಕ್ಕೆ ಬರಲ್ಲ. ಈ ಬೆಳವಣಿಗೆ ನಡೆಯದಿದ್ದರೆ ಖಂಡಿತ ಆಗಸ್ಟ್ 3 ರಂದು ರಾಹುಲ್ ಗಾಂಧಿ ಅಮೃತ ಮಹೋತ್ಸವದಲ್ಲಿ ಭಾಗವಹಿಸುತ್ತಾರೆ ಎಂದು ರಾಹುಲ್ ಗಾಂಧಿ ಕಚೇರಿಯಿಂದ ಸಿದ್ದರಾಮಯ್ಯಗೆ ಸಂದೇಶ ತಲುಪಿದೆ. ಇದನ್ನೂ ಓದಿ: ಭ್ರಷ್ಟಾಚಾರದ ಇನ್ನೊಂದು ಮುಖವೇ ಕಾಂಗ್ರೆಸ್: ರೇಣುಕಾಚಾರ್ಯ