ರಾಗಾ ವಿಮಾನವನ್ನು ವಾರಣಾಸಿಯಲ್ಲಿ ಬೇಕೆಂದೇ ಇಳಿಸಲು ನಿರಾಕರಿಸಲಾಗಿದೆ: ಕಾಂಗ್ರೆಸ್ ಆರೋಪ

Public TV
1 Min Read
rahul gandhi

ನವದೆಹಲಿ: ಸೋಮವಾರ ವಾರಣಾಸಿಯ (Varanasi) ಲಾಲ್ ಬಹದ್ದೂರ್ ಶಾಸ್ತ್ರಿ ವಿಮಾನ ನಿಲ್ದಾಣದಲ್ಲಿ (Airport) ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರ ವಿಮಾನ (Plane) ಇಳಿಯಬೇಕಿತ್ತು. ಆದರೆ ಅವರ ವಿಮಾನವನ್ನು ಇಳಿಸಲು ನಿಲ್ದಾಣದಲ್ಲಿ ಅನುಮತಿ ಸಿಗದೇ ಹೋಗಿದ್ದರಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.

ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ರಾಹುಲ್ ಗಾಂಧಿ ಅವರ ವಿಮಾನ ಇಳಿಯಬೇಕಿತ್ತು. ಆದರೆ ಉದ್ದೇಶಪೂರ್ವಕವಾಗಿ ಅದರ ಅನುಮತಿಯನ್ನು ನಿರಾಕರಿಸಲಾಯಿತು. ವಿಮಾನ ನಿಲ್ದಾಣದ ಅಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಕಾರಣವನ್ನು ಹೇಳಿ ವಿಮಾನವನ್ನು ಇಳಿಸದಂತೆ ತಡೆದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಜಯ್ ರೈ ಹೇಳಿದ್ದಾರೆ.

RAHUL GANDHI.

ವರದಿಗಳ ಪ್ರಕಾರ, ರಾಹುಲ್ ಗಾಂಧಿ ಸೋಮವಾರ ರಾತ್ರಿ ವಾರಣಾಸಿಯ ವಿಮಾನ ನಿಲ್ದಾಣದಲ್ಲಿ ಇಳಿದು, ಪ್ರಯಾಗ್‌ರಾಜ್‌ಗೆ ತೆರಳಬೇಕಿತ್ತು. ಆದರೆ ಸರ್ಕಾರದ ಒತ್ತಡದಿಂದಾಗಿ ವಿಮಾನ ನಿಲ್ದಾಣದ ಪ್ರಾಧಿಕಾರ ವಿಮಾನವನ್ನು ಇಳಿಸಲು ಅವಕಾಶ ನೀಡಲಿಲ್ಲ. ಮುರ್ಮು ಅವರ ಭೇಟಿ ಹಾಗೂ ಭಾರೀ ವಿಮಾನ ಸಂಚಾರವಿದೆ ಎಂದು ಕಾರಣ ಹೇಳಿ ವಿಮಾನ ಇಳಿಸುವುದನ್ನು ನಿರಾಕರಿಸಿದ್ದಾರೆ ಎಂದು ರೈ ಆರೋಪಿಸಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

rahul gandhi 1

ಬಿಜೆಪಿ ಸರ್ಕಾರ ರಾಹುಲ್ ಗಾಂಧಿ ಅವರಿಗೆ ಹೆದರಿದೆ. ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿದ್ದ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗುತ್ತಾರೆ ಎಂಬ ಆತಂಕದಲ್ಲಿದೆ. ಇದಕ್ಕಾಗಿ ಅವರು ಈಗ ರಾಹುಲ್‌ಗೆ ತೊಂದರೆ ಕೊಡುತ್ತಿದ್ದಾರೆ. ಈ ಹಿನ್ನೆಲೆ ಅವರು ವಾರಣಾಸಿಯಲ್ಲಿ ಇಳಿಯದಂತೆ ವಿಮಾನಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *