ಮೀಸಲಾತಿ ಸ್ಥಗಿತ ಬಗ್ಗೆ ರಾಹುಲ್ ಹೇಳಿಕೆ – ದಲಿತರ ಹಣ ನುಂಗಿ ಹೀಗೆ ಮಾತಾಡುವ ಕಾಂಗ್ರೆಸಿಗರು ಪಾಪಿಗಳು: ಛಲವಾದಿ

Public TV
3 Min Read
Chalavadi Narayanaswamy

ಬೆಂಗಳೂರು: ರಾಹುಲ್ ಗಾಂಧಿಯವರ (Rahul Gandhi) ಹೇಳಿಕೆಯಿಂದ ಕಾಂಗ್ರೆಸ್ (Congress) ಪಕ್ಷವು ದಲಿತ (Dalit) ವಿರೋಧಿ ಮತ್ತು ಮೀಸಲಾತಿ ವಿರೋಧಿ ಎಂಬುದು ಸಾಬೀತಾಗಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ವಿಶ್ಲೇಷಿಸಿದರು.

ಸ್ವಾತಂತ್ರ್ಯ ಉದ್ಯಾನವನದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದೇಶದ ಪ್ರಥಮ ಪ್ರಧಾನಿ ನೆಹರೂ ಅವರು ತಾವು ಮೀಸಲಾತಿ (Reservation) ವಿರೋಧಿ ಎಂದಿದ್ದರು. ಇಂದಿರಾಗಾಂಧಿ, ರಾಜೀವ್ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು. ನೆಹರೂ- ಇಂದಿರಾ ಗಾಂಧಿ ಕುಟುಂಬವು ಮೀಸಲಾತಿ ವಿರೋಧಿ ಪರಂಪರೆಯನ್ನು ಹೊಂದಿದೆ ಎಂದು ಆಕ್ಷೇಪಿಸಿದರು.

Rahul Gandhi Calls Prajwal Revanna a mass rapist

1961ರಲ್ಲಿ ನೆಹರೂ ಅವರು ಈ ದೇಶದಲ್ಲಿ ಯಾವುದೇ ರೀತಿಯ ಮೀಸಲಾತಿಗಳಿಗೆ (Reservation) ತಾವು ವಿರುದ್ಧ ಇರುವುದಾಗಿ ತಿಳಿಸಿದ್ದರು. ಮೀಸಲಾತಿಯಿಂದ ಅಧಿಕಾರ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಕುಂಠಿತ ಆಗಲಿದೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿಯವರು, ನೆಹರೂ ಅವರು ಆ ಕಾಲದಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೀಸಲಾತಿ ವಿರೋಧಿಸಿ ಬರೆದ ಪತ್ರವನ್ನು ಸದನದಲ್ಲಿ ಪ್ರಸ್ತಾಪಿಸಿ ಪತ್ರವನ್ನು ಪ್ರದರ್ಶನ ಮಾಡಿದ್ದಾರೆ ಎಂದು ಛಲವಾದಿ ವಿವರಿಸಿದರು. ಇದನ್ನೂ ಓದಿ: ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಸಿದ್ದರಾಮಯ್ಯ ಮನೆ: ಹೆಚ್‌ಡಿಕೆ ಬಾಂಬ್‌

ನಂತರ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅದೇರೀತಿ ನಡೆದುಕೊಂಡಿದ್ದರು. ಈಗ ರಾಹುಲ್ ಗಾಂಧಿಯವರು ಅದೇ ಮನೋಭಾವವನ್ನು ಪ್ರದರ್ಶನ ಮಾಡಿದ್ದಾರೆ. 2014ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50 ಸೀಟನ್ನೂ ಗೆದ್ದಿರಲಿಲ್ಲ. ಆಗ ಕೇವಲ ಸದನದ ನಾಯಕರಾಗಲು ಖರ್ಗೇಜೀ ಅವರಿಗೆ ಆ ಸ್ಥಾನ ಕೊಟ್ಟಿದ್ದರು. 2019ರಲ್ಲೂ ಕಾಂಗ್ರೆಸ್ ಅಧಿಕೃತ ವಿಪಕ್ಷ ಆಗಲಿಲ್ಲ. ಆಗ ಪಶ್ಚಿಮ ಬಂಗಾಳದ ಚೌಧರಿಯನ್ನು ಸದನದ ನಾಯಕರನ್ನಾಗಿ ಮಾಡಿದ್ದರು. ಈಗ ಅಧಿಕೃತ ವಿಪಕ್ಷ ಸ್ಥಾನ ಲಭಿಸಿದಾಗ ಅವರನ್ನೆಲ್ಲ ದೂರ ಮಾಡಿ ತಾವೇ ಆ ಸ್ಥಾನ ಪಡೆದಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಬಿಜೆಪಿ ದಲಿತ ವಿರೋಧಿ ಎನ್ನುವ ಕಾಂಗ್ರೆಸ್ಸಿನ ಸಚಿವರು ಈಗ ಯಾರು ದಲಿತ ವಿರೋಧಿ ಎಂಬ ಪ್ರಶ್ನೆಗೆ ಉತ್ತರ ಕೊಡಬೇಕಿದೆ ಎಂದು ಸವಾಲು ಹಾಕಿದರು. ಮೀಸಲಾತಿ ಹೆಚ್ಚಿಸಿದವರು ನಾವು, ನೀವು ದಲಿತ ವಿರೋಧಿಗಳು ಮತ್ತು ಮೀಸಲಾತಿ ವಿರೋಧಿಗಳು. ಕಾಂಗ್ರೆಸ್ಸಿನವರು ಪಾಪಿಗಳಲ್ಲವೇ ಎಂದು ಪ್ರಶ್ನಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಲಿತರಿಗೆ ಮೀಸಲಿಟ್ಟ, ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಗಂಗಾ ಕಲ್ಯಾಣ ಯೋಜನೆಯಿಂದ ಆರಂಭಿಸಿ, ಅವರ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಚುನಾವಣೆಗೆ ನೇರವಾಗಿ ಬಳಸಿದ್ದೀರಲ್ಲವೇ? ದಲಿತರ ಹಣ ತಿನ್ನಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಪಾಪದವರ ಹಣ ತಿಂದ ಎಂಥ ಪಾಪಿಗಳು ನೀವು ಕಾಂಗ್ರೆಸ್‍ನವರು. ನೀವು ಪಾಪಿಗಳಲ್ಲವೇ? ಉತ್ತರ ಕೊಡಿ ಎಂದು ಛಲವಾದಿ ಆಗ್ರಹಿಸಿದರು.

ರಾಹುಲ್‌ ಗಾಂಧಿ ಹೇಳಿದ್ದೇನು?
ಅಮೆರಿಕ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಜಾರ್ಜ್‌ಟೌನ್‌ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದ ನಡೆಸಿದರು. ಮೀಸಲಾತಿಯು ಎಷ್ಟು ಕಾಲ ಮುಂದುವರಿಯಲಿದೆ ಎಂಬ ಪ್ರಶ್ನೆಗೆ ರಾಹುಲ್‌ ಗಾಂಧಿ, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದಾಗ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಕಾಂಗ್ರೆಸ್ ಪಕ್ಷವು ಆಲೋಚನೆ ಮಾಡಲಿದೆ. ಈಗ ಸಮಾನತೆಯ ಪರಿಸ್ಥಿತಿ ಇಲ್ಲ ಎಂದು ಅವರು ಉತ್ತರಿಸಿದ್ದರು.

Share This Article