ರಾಯಚೂರು | ನಾರಾಯಣಪುರಿಂದ ಕೃಷ್ಣಾ ನದಿಗೆ 1.03 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

Public TV
1 Min Read
Narayanpur Dam 2

ರಾಯಚೂರು: ನಿರಂತರ ಮಳೆಯಿಂದಾಗಿ ಜಿಲ್ಲೆಯ ನಾರಾಯಣಪುರ ಜಲಾಶಯಕ್ಕೆ (Narayanpur Dam) ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿಗೆ (Krishna River) 1,03,440 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.ಇದನ್ನೂ ಓದಿ: ನಿರ್ಮಾಣಕ್ಕೆ ಮುಂದಾದ ನಟಿ ಸೀತಾ ಹರ್ಷವರ್ಧನ್

Narayanpur Dam

ಜಿಲ್ಲೆಯಲ್ಲಿ 3-4 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ನಾರಾಯಣಪುರ ಜಲಾಶಯಕ್ಕೆ 1 ಲಕ್ಷ ಕ್ಯುಸೆಕ್ ಒಳಹರಿವು ಹೆಚ್ಚಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಜಲಾಶಯದಲ್ಲಿ 33.313 ಟಿಎಂಸಿ ಸಂಗ್ರಹ ಸಾಮರ್ಥ್ಯವಿದ್ದು, ಸದ್ಯ 32.51 ಟಿಎಂಸಿ ನೀರು ಸಂಗ್ರಹವಾಗಿದೆ.

ಜಲಾಶಯದ 24 ಗೇಟ್‌ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಿಂದ ಕೃಷ್ಣಾ ನದಿಗೆ 1,03,440 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮೈದುಂಬಿ ಹರಿಯುತ್ತಿದೆ. ಸಾರ್ವಜನಿಕರಿಗೆ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಸಿಎಂ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

Narayanpur Dam 1

Share This Article