ರಾಯಚೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಕಾಲುವೆಗೆ ಬಿದ್ದ ಪರಿಣಾಮ ಮೂರು ಜನ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ನಡೆದಿದೆ.
ಟ್ರ್ಯಾಕ್ಟರ್ ಚಾಲಕರಾದ 30 ವರ್ಷದ ಹುಸೇನ್ ಭಾಷಾ, 28 ವರ್ಷದ ಕೂಲಿ ಕಾರ್ಮಿಕ ಮಹಿಳೆ ಮುತ್ತಮ್ಮ ಮೃತ ದುರ್ದೈವಿಗಳು. ಇನ್ನೋರ್ವ ಮೃತರ ಗುರುತು ಪತ್ತೆಯಾಗಿಲ್ಲ.
ಉದ್ಯೋಗ ಖಾತ್ರಿ ಯೋಜನೆ ಅಡಿ ಕೂಲಿ ಕೆಲಸಕ್ಕೆ ಜವಳಗೇರಾ ಸೆಂಟ್ರಲ್ ಫಾರ್ಮಗೆ ಸುಮಾರು 54ಕ್ಕೂ ಅಧಿಕ ಮಂದಿ ಕೂಲಿಕಾರರನ್ನ ಕರೆದ್ಯೂಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದ್ದು, ಟಿಎಲ್ಬಿಸಿ ಕಾಲುವೆ ಸಂಖ್ಯೆ 54ಕ್ಕೆ ಬಿದ್ದಿದೆ.
ಘಟನೆಯಿಂದ 20 ಜನರಿಗೆ ಗಾಯಗಳಾಗಿದ್ದು, ಇದರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ. ಮೃತರು ಹಾಗೂ ಗಾಯಾಳುಗಳು ಜವಳಗೇರಾ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಸದ್ಯ ಗಾಯಾಳುಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆ, ರಾಯಚೂರಿನ ರಿಮ್ಸ್ ಹಾಗೂ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.