ಕಾಲುವೆ ನೀರಿನ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

Public TV
1 Min Read
collage rcr murder

ರಾಯಚೂರು: ಕಾಲುವೆ ನೀರಿನ ವಿಚಾರದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ರಂಗಾಪೂರು ಗ್ರಾಮದಲ್ಲಿ ನಡೆದಿದೆ.

ಗಲಾಟೆಯ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶಿವರುದ್ರಪ್ಪ (65) ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಈ ಗಲಾಟೆಯಲ್ಲಿ ಮೃತನ ಮಗ ಶರಣಬಸಪ್ಪಗೆ ಗಂಭೀರ ಗಾಯವಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

rcr murder

ಅಕ್ಕಪಕ್ಕದಲ್ಲಿ ಜಮೀನಿದ್ದ ದಾಯಾದಿಗಳ ನಡುವೆ ಹಳೆಯ ವೈಷ್ಯಮ್ಯವಿತ್ತು ಎಂದು ಹೇಳಲಾಗಿದೆ. ಈ ವಿಚಾರಕ್ಕೆ ಕಾಲುವೆ ನೀರಿನ ನೆಪದಲ್ಲಿ ಜಗಳ ಮಾಡಿಕೊಂಡು ಅಮರೇಶ್ ಹಾಗೂ ಇತರೆ 8 ಜನ ಸೇರಿಕೊಂಡು ದೊಣ್ಣೆ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಈ ಸಂಬಂಧ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಮರೇಶ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *