ರಾಯಚೂರು: ಲಾಕ್ಡೌನ್ ಮಧ್ಯೆಯೂ ದೇವಾಲಯಗಳಲ್ಲಿ ಜನ ಪೂಜೆ, ಸಾಮೂಹಿಕ ಪ್ರಾರ್ಥನೆ ಮಾಡುವುದನ್ನ ನಿಲ್ಲಿಸಿಲ್ಲ. ಜಿಲ್ಲೆಯ ಮಸ್ಕಿ ಪಟ್ಟಣದ ಬೆಟ್ಟದ ಮೇಲಿನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಕೊರೊನಾ ನಿಗ್ರಹಕ್ಕಾಗಿ ಮಹಾರುದ್ರಯಾಗ ಮಾಡಲಾಗಿದೆ.
ಗಚ್ಚಿನಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಯಾಗ ನಡೆದಿದೆ. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಹಾಗೂ ಅವರ ಬೆಂಬಲಿಗರು ಈ ಯಾಗದಲ್ಲಿ ಭಾಗವಹಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವಸ್ಥಾನದ ಮುಂಭಾಗದ ಆವರಣದಲ್ಲಿ ನಡೆದ ಮಹಾರುದ್ರಯಾಗದಲ್ಲಿ ಪ್ರತಾಪ್ ಗೌಡರು ಸೇರಿದಂತೆ 30ಕ್ಕೂ ಹೆಚ್ಚು ಜನ ಭಾಗವಹಿಸಿದ್ದಾರೆ.
ಅಷ್ಟೇ ಅಲ್ಲದೇ ಮಾಜಿ ಶಾಸಕರ ಬೆಂಬಲಿಗರು ಮಾಸ್ಕ್ ಹಾಕಿಕೊಳ್ಳದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ದೇವಾಲಯಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲು ಅವಕಾಶವಿಲ್ಲದಿದ್ದರೂ ಲಾಕ್ಡೌನ್ ನಿಯಮ ಮೀರಿ ಮಾಜಿ ಶಾಸಕ ಯಾಗದಲ್ಲಿ ಭಾಗಿಯಾಗಿದ್ದಾರೆ.