Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರಂಭವಾಗದ ಖರೀದಿ ಕೇಂದ್ರ: ನಷ್ಟದ ಸುಳಿಯಲ್ಲಿ ಭತ್ತ, ತೊಗರಿ ಬೆಳೆಗಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆರಂಭವಾಗದ ಖರೀದಿ ಕೇಂದ್ರ: ನಷ್ಟದ ಸುಳಿಯಲ್ಲಿ ಭತ್ತ, ತೊಗರಿ ಬೆಳೆಗಾರರು

Districts

ಆರಂಭವಾಗದ ಖರೀದಿ ಕೇಂದ್ರ: ನಷ್ಟದ ಸುಳಿಯಲ್ಲಿ ಭತ್ತ, ತೊಗರಿ ಬೆಳೆಗಾರರು

Public TV
Last updated: January 15, 2020 12:49 am
Public TV
Share
2 Min Read
Toor whole
SHARE

ರಾಯಚೂರು: ಕಳೆದ ಮೂರು ವರ್ಷಗಳಿಂದ ಬರಗಾಲವನ್ನೇ ಅನುಭವಿಸಿದ್ದ ರಾಯಚೂರಿನ ರೈತರು ಈ ಬಾರಿ ತಡವಾದರೂ ಉತ್ತಮ ಮಳೆಯನ್ನು ಕಂಡಿದ್ದಾರೆ. ಮಳೆಯಿಂದಾಗಿ ಉತ್ತಮ ಫಸಲನ್ನೂ ಪಡೆದಿದ್ದಾರೆ. ಆದರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬೆಲೆಯಿಲ್ಲದೆ ಕಂಗಾಲಾಗಿದ್ದಾರೆ.

ಖರೀದಿ ಕೇಂದ್ರಗಳನ್ನು ತೆರೆದು ಬೆಲೆ ಕುಸಿತ ಕಂಡಿರುವ ಬೆಳೆಗಳನ್ನು ಖರೀದಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಇದುವರೆಗೂ ಖರೀದಿ ಕೇಂದ್ರ ಸ್ಥಾಪಿಸಿಲ್ಲ. ಇದು ರೈತರನ್ನು ಇನ್ನಷ್ಟು ಕಂಗೆಡುವಂತೆ ಮಾಡಿದೆ. ಈ ಬಾರಿ ಹೆಚ್ಚು ಪ್ರಮಾಣದಲ್ಲಿ ಬಿತ್ತನೆ ಮಾಡಿದ ರೈತರು ಬೆಲೆಯಿಲ್ಲದೆ ಸಿಕ್ಕ ಬೆಲೆಗೆ ಮಾರುವ ಸ್ಥಿತಿಯಲ್ಲಿದ್ದಾರೆ. ಕೆಲ ರೈತರು ಬೆಳೆಯನ್ನು ಮಾರುಕಟ್ಟೆಗೆ ತಂದಿದ್ದರೆ, ಇನ್ನೂ ಕೆಲವರ ಬೆಳೆ ಶೀಘ್ರದಲ್ಲೇ ಕೈಗೆ ಬರಲಿದೆ.

RCR Paddy C

ಜಿಲ್ಲೆಯಲ್ಲಿ 1.20 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಭತ್ತವನ್ನು ಬಿತ್ತನೆ ಮಾಡುವ ಗುರಿ ಇದ್ದು ಈಗಾಗಲೇ 1.08 ಲಕ್ಷ ಹೆಕ್ಟರ್ ಭತ್ತವನ್ನು ಬಿತ್ತನೆ ಮಾಡಿದ್ದಾರೆ. ಪ್ರತಿ ಹೆಕ್ಟರ್ ಗೆ ಸುಮಾರು 42.31 ಕ್ವಿಂಟಾಲ್ ಭತ್ತದ ಇಳುವರಿ ಬರುತ್ತಿದ್ದು, 76 ಲಕ್ಷ ಕ್ವಿಂಟಾಲ್ ಇಳುವರಿ ಬರುವ ನಿರೀಕ್ಷೆ ಇದೆ. ಇದೇ ರೀತಿ ಜಿಲ್ಲೆಯಲ್ಲಿ 47,581 ಹೆಕ್ಟರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಬೇಕಾಗಿದ್ದು, ಈ ವರ್ಷ ಉತ್ತಮ ಮಳೆಯಾಗಿದ್ದರಿಂದ 62,666 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದಾರೆ. ಪ್ರತಿ ಹೆಕ್ಟರ್ ಗೆ 3.72 ಕ್ವಿಂಟಾಲ್ ತೊಗರಿ ಇಳುವರಿ ಬರಲಿದೆ. ಇದರಿಂದಾಗಿ 2.33 ಲಕ್ಷ ಕ್ವಿಂಟಾಲ್ ತೊಗರಿ ಬರಲಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಭತ್ತವನ್ನು ಕಟಾವು ಮಾಡಿ 2 ತಿಂಗಳು, ತೊಗರಿಯನ್ನು ಕಟಾವು ಮಾಡಿ ಒಂದುವರೆ ತಿಂಗಳಾಗಿದೆ. ಆದರೆ ಈಗ ಮಾರಾಟ ಮಾಡಿದರೆ ರೈತ ಸಂಪೂರ್ಣವಾಗಿ ಹಾನಿಗೊಳಗಾಗುವ ಸಾಧ್ಯತೆ ಇದೆ. ಕಾರಣ ಮಾರುಕಟ್ಟೆಯಲ್ಲಿ ಭತ್ತ ಹಾಗು ತೊಗರಿ ದರ ಅತ್ಯಂತ ಕಡಿಮೆ ಇದೆ. ಉತ್ತಮ ದರಕ್ಕಾಗಿ ರೈತ ಕಾಯಿಯುತ್ತಿದ್ದಾನೆ.

Toor whole A

ಸರ್ಕಾರ ಸಕಾಲಕ್ಕೆ ಬೆಂಬಲ ಬೆಲೆ ನೀಡಿ ಖರೀದಿ ಕೇಂದ್ರ ಆರಂಭಿಸದೆ ಇರುವುದರಿಂದ ಕಡಿಮೆ ದರಕ್ಕೆ ಮಾರಾಟ ಮಾಡಬೇಕಾಗಿದೆ. ಕೆಲವು ರೈತರು ಮಾತ್ರ ಖರೀದಿ ಕೇಂದ್ರಕ್ಕಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ಬೆಂಬಲ ಬೆಲೆಯಲ್ಲಿ ಭತ್ತ ಹಾಗೂ ತೊಗರಿಯನ್ನು ಖರೀದಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ತೊಗರಿಗೆ ಕೇಂದ್ರ ಸರ್ಕಾರ 4,800 ರೂಪಾಯಿ ಅದಕ್ಕೆ ರಾಜ್ಯ ಸರ್ಕಾರ 300 ರೂಪಾಯಿ ಸಹಾಯಧನ ನೀಡಲು ನಿರ್ಧರಿಸಿ ರೈತರಿಂದ ನೊಂದಣಿ ಕಾರ್ಯ ಆರಂಭಿಸಬೇಕಾಗಿದೆ. ಸರ್ಕಾರವು ಕೃಷಿ ನೋಂದಣಿಗಾಗಿ ಸಾಫ್ಟವೇರ್ ಅಭಿವೃದ್ಧಿ ಮಾಡಿದ್ದು, ಇದುವರೆಗೂ ಸಾಫ್ಟವೇರ್ ರಾಯಚೂರಿಗೆ ಬಂದಿಲ್ಲ. ಇದರಿಂದ ನೋಂದಣಿಯಾಗಿಲ್ಲ. ಈ ತಿಂಗಳ ಅಂತ್ಯದವರೆಗೂ ನೋಂದಣಿ ಮಾಡಲು ಅವಕಾಶ ನೀಡಿದೆ. ಇನ್ನೂ ಭತ್ತವನ್ನು 1,835 ರೂಪಾಯಿಗೆ ಪ್ರತಿ ಕ್ವಿಂಟಾಲ್ ಖರೀದಿಸಲು ಭತ್ತದ ಖರೀದಿ ಕೇಂದ್ರ ಆರಂಭಿಸಿದೆ. ಆದರೆ ಮಾರುಕಟ್ಟೆಯಲ್ಲಿ ಇದೇ ದರವಿದೆ.

Paddy

ಭತ್ತವನ್ನು ಪ್ರತಿ ಕ್ವಿಂಟಾಲಿಗೆ 2,500 ರೂಪಾಯಿಯಂತೆ ಖರೀದಿಸಲು ಒತ್ತಾಯಿಸಿದ್ದು, ಅದಕ್ಕೆ ರಾಜ್ಯ ಸರ್ಕಾರ 2,000 ರೂಪಾಯಿಯಂತೆ ಖರೀದಿಸುವ ಭರವಸೆ ನೀಡಿದೆ. ಆದರೆ ಇನ್ನೂ ಆದೇಶ ಬಂದಿಲ್ಲ. ಈ ಗೊಂದಲದ ಮಧ್ಯೆ ರೈತರು ಎಪಿಎಂಸಿ ಗಳಲ್ಲಿ ಅನಿವಾರ್ಯವಾಗಿ ಮಾರಾಟ ಮಾಡುತ್ತಿದ್ದಾರೆ. ಮುಂದೆ ಖರೀದಿ ಕೇಂದ್ರಗಳು ಆರಂಭವಾದರೂ ಅವುಗಳು ರೈತರಿಗಿಂತ ವ್ಯಾಪಾರಿಗಳಿಗೆ ಅನುಕೂಲ ಎನ್ನುವ ಪರಸ್ಥಿತಿಯಿದೆ.

ರಾಯಚೂರು ಎಪಿಎಂಸಿಗೆ ನಿತ್ಯವೂ 10 ಸಾವಿರ ಕ್ವಿಂಟಾಲ್ ತೊಗರಿ ಮಾರಾಟಕ್ಕಾಗಿ ಬರುತ್ತಿದೆ. ಈಗ ಮಾರುಕಟ್ಟೆಯಲ್ಲಿ ತೊಗರಿಯ ದರ ಸರಾಸರಿ 5,220 ರೂಪಾಯಿ ಇದೆ. ಆದರೆ ಸರ್ಕಾರದ ಗೊಂದಲ ನೀತಿಯಿಂದಾಗಿ ಬೆಂಬಲ ಬೆಲೆ ಖರೀದಿ ಕೇಂದ್ರಗಳು ಆರಂಭವಾಗದೆ ರೈತ ಸಂಕಷ್ಟ ಅನುಭವಿಸುವಂತಾಗಿದೆ.

TAGGED:farmerspaddyPublic TVPurchasing centerraichurToor wholeಎಪಿಎಂಸಿತೊಗರಿಪಬ್ಲಿಕ್ ಟಿವಿರಾಯಚೂರುರೈತರು
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
7 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
11 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
28 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
35 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
53 minutes ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?