ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಸರ್ಕಾರಿ ಶಾಲೆಗೆ ದಿಢೀರ್ ಭೇಟಿನೀಡಿ ಪರಿಶೀಲನೆ ನಡೆಸಿ ಶಾಲಾ ಸಿಬ್ಬಂದಿಗೆ ಶಾಕ್ ನೀಡಿದ್ದಾರೆ.
ರಾಯಚೂರು ನಗರದ ಪೊಲೀಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನ ಪರಿಶೀಲಿಸಿದರು. ಪೊಲೀಸ್ ಸಿಬ್ಬಂದಿ ಮಕ್ಕಳು ಹೆಚ್ಚಾಗಿ ಓದುವ ಶಾಲೆಯಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು.
ಶಾಲೆಯಲ್ಲಿ ತಯಾರಾದ ಬಿಸಿಯೂಟದ ಗುಣಮಟ್ಟವನ್ನು ಪರೀಕ್ಷಿಸಿ ಬಳಿಕ ಮಕ್ಕಳೊಂದಿಗೆ ಸರತಿ ಸಾಲಿನಲ್ಲಿ ಕುಳಿತು ಬಿಸಿಯೂಟ ಸೇವಿಸಿದರು. ಶಾಲೆಯ ಮಕ್ಕಳೊಂದಿಗೆ ಮಾತನಾಡಿ ಶಾಲೆಯ ಬಗ್ಗೆ ಮತ್ತು ಸಮಸ್ಯೆ ಬಗ್ಗೆ ಮಾಹಿತಿ ಪಡೆದರು. ಕಷ್ಟಪಟ್ಟು ಚೆನ್ನಾಗಿ ಓದಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಮಕ್ಕಳಿಗೆ ಕರೆ ನೀಡಿದರು.