– ಬಸ್ ಸಂಚಾರ, ವ್ಯಾಪಾರ ವಹಿವಾಟು, ಶಾಲಾ-ಕಾಲೇಜು ಬಂದ್
ರಾಯಚೂರು: ಜೋಳ ಖರೀದಿ ಕೇಂದ್ರ ಪುನರಾರಂಭಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಸಿಂಧನೂರು (Sindhanuru) ಬಂದ್ಗೆ ಕರೆ ನೀಡಿದ್ದು, ಬಸ್ ಸಂಚಾರ, ವ್ಯಾಪಾರ ವಹಿವಾಟು, ಶಾಲಾ-ಕಾಲೇಜು ಸ್ಥಗಿತಗೊಂಡಿವೆ.
ವ್ಯಾಪಾರಸ್ಥರು, ಹೋಟೆಲ್ ಮಾಲೀಕರು, ತರಕಾರಿ ವ್ಯಾಪಾರಿಗಳು ಬಂದ್ಗೆ ಸಾಥ್ ನೀಡಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ರೈತರ ಮನವಿಗೆ ಸ್ಪಂದಿಸಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಗೆ ರಜೆ ನೀಡಿವೆ. ಬಸ್ ಸಂಚಾರ ಸ್ಥಗಿತಗೊಂಡಿದ್ದು, ಆಟೋ ಚಾಲಕರು ಸಹ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.ಇದನ್ನೂ ಓದಿ: ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್
ಸಿಂಧನೂರು ತಹಶೀಲ್ದಾರ್ ಕಚೇರಿ ಮುಂದೆ ನಡೆದಿರುವ ಅನಿರ್ದಿಷ್ಟಾವಧಿ ಹೋರಾಟದ ಭಾಗವಾಗಿ ರೈತರು ಸಿಂಧನೂರು ಬಂದ್ಗೆ ಕರೆ ನೀಡಿದ್ದಾರೆ. ರೈತರ ಜೋಳ ಹಾಳಾಗುತ್ತಿದ್ದು, ಜೋಳ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯಡಿ ಖರೀದಿಸಲು ಒತ್ತಾಯಿಸಿದ್ದಾರೆ.
ಇದಕ್ಕೂ ಮುನ್ನ ರಸ್ತೆಯಲ್ಲಿ ಅನ್ನ ಊಟ ಮಾಡಿ ಪ್ರತಿಭಟಿಸಿದ್ದ ರೈತರು, ಜೋಳ ಖರೀದಿಗೆ ಆಗ್ರಹಿಸಿ ಅರೆ ಬೆತ್ತಲೆ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲದ ಹಿನ್ನೆಲೆ ಸಿಂಧನೂರು ಬಂದ್ಗೆ ಕರೆ ನೀಡಿದ್ದಾರೆ. ರೈತ ಸಂಘಟನೆಗಳು ನೀಡಿದ ಬಂದ್ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಇದನ್ನೂ ಓದಿ: ಬೆಳಗಾವಿಯಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್| ಐವರನ್ನು ಬಂಧಿಸಿದ್ದೇವೆ: ಪರಮೇಶ್ವರ್