ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ (Odisha Train Tragedy) ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ (H.D.Deve Gowda) ಹೇಳಿದ್ದಾರೆ.
ಮಂಗಳವಾರ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ರೈಲು ದುರಂತದಿಂದ ಸಂಭವಿಸಿದ ಬಳಿಕ ಅಲ್ಲಿನ ಪರಿಸ್ಥತಿಯನ್ನು ಸಹಜಸ್ಥಿತಿಗೆ ತರಲು ಅಶ್ವಿನಿ ವೈಷ್ಣವ್ ಅವರು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ
2024ರ ಚುನಾವಣೆಗೆ ವಿರೋಧ ಪಕ್ಷಗಳು ಒಗ್ಗೂಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಯಾವುದೇ ಚರ್ಚೆಯನ್ನು ಮಾಡಿಲ್ಲ. ಮೊದಲನೆಯದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ನಾವು ಬಯಸುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಜಾರ್ಖಂಡ್ನಲ್ಲಿ ತಪ್ಪಿತ್ತು ರೈಲು ದುರಂತ!
ಜೂನ್ 2ರಂದು ಒಡಿಶಾದ ಬಾಲಸೋರ್ನಲ್ಲಿ (Balasore) ತ್ರಿವಳಿ ರೈಲುಗಳು ಏಕಕಾಲಕ್ಕೆ ಡಿಕ್ಕಿಯಾದ ಪರಿಣಾಮ ಭಾರೀ ಪ್ರಮಾಣದ ನಷ್ಟವುಂಟಾಗಿದೆ. ಈ ಘಟನೆಯಲ್ಲಿ 278 ಮಂದಿ ಸಾವನ್ನಪ್ಪಿದ್ದು, 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲು ದುರಂತದ ತನಿಖೆಯನ್ನು ಸಿಬಿಐಗೆ (CBI) ಒಪ್ಪಿಸಿದ್ದು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎರಡು ದಿನಗಳ ಕಾಲ ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮತ್ತು ಪುನಃಸ್ಥಾಪನೆ ಕಾರ್ಯವನ್ನು ಮೇಲ್ವಿಚಾರಣೆ ಮಾಡಿದ್ದಾರೆ. ಇದನ್ನೂ ಓದಿ: ಕೇವಲ ಎರಡೂವರೆ ನಿಮಿಷದಲ್ಲಿ ಬ್ರೈನ್ ಆಪರೇಷನ್- ನಾರಾಯಣ ಹೆಲ್ತ್ ಸಿಟಿ ವೈದ್ಯರಿಂದ ಮಹತ್ತರ ಸಾಧನೆ