ಶಿವಮೊಗ್ಗ: ರೈಲ್ವೆ ಯೋಜನೆಗೆ ತನ್ನ 3 ಎಕರೆ ಜಮೀನು ಕಳೆದುಕೊಂಡ ರೈತ, ಸರ್ಕಾರದಿಂದ ಜಮೀನಿಗೆ ಅಲ್ಪ ಪರಿಹಾರ ಬಂದಿದೆ ಎಂದು ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅರುಣ್ ನಾಯ್ಕ (28) ಮೃತಪಟ್ಟ ರೈತ. ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಯೋಜನೆಗೆ ಸರ್ಕಾರ ರೈತರ ಭೂಮಿ ವಶಪಡಿಸಿಕೊಳ್ಳುತ್ತಿದೆ. ಆದರೆ ತನ್ನ ಬೆಲೆ ಬಾಳುವ ಫಲವತ್ತಾದ ಜಮೀನಿಗೆ ಸರ್ಕಾರ ಕಡಿಮೆ ಪರಿಹಾರ ನಿಗದಿಪಡಿಸಿದೆ. ಹೀಗೆ ಈ ವಿಚಾರವಾಗಿ ಮನನೊಂದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ಅರುಣ್ ನಾಯ್ಕ ಅವರ ತಂದೆ ತಿಮ್ಮನಾಯ್ಕ ಹೆಸರಿನಲ್ಲಿ ಶಿಕಾರಿಪುರ ತಾಲೂಕಿನ ಎಳೆನೀರು ಕೊಪ್ಪ ಗ್ರಾಮದಲ್ಲಿ ಸರ್ವೇ ನಂಬರ್ 13/13, 14/13ರಲ್ಲಿ ಫಸಲಿಗೆ ಬಂದಿರುವ 3 ಎಕರೆ ಅಡಕೆ ತೋಟ ರೈಲ್ವೆ ಯೋಜನೆಗೆ ಸರ್ಕಾರ ವಶಪಡಿಸಿಕೊಂಡಿದೆ. ಇವರ ಜಮೀನಿಗೆ ಎಕರೆಗೆ 5 ಲಕ್ಷ ಪರಿಹಾರ ಹಣ ನಿಗದಿಪಡಿಸಿ ನೋಟಿಸ್ ಜಾರಿ ಮಾಡಲಾಗಿತ್ತು. ಇದನ್ನೂ ಓದಿ: ಅನ್ಯ ಜಾತಿಯವನನ್ನು ಮದುವೆಯಾದ ಮಗಳು- ರುಬ್ಬುವ ಕಲ್ಲಿನಿಂದ ಚಚ್ಚಿ ಪತ್ನಿ, ಮಕ್ಕಳನ್ನು ಕೊಂದು ಪ್ರಾಣ ಬಿಟ್ಟ ತಂದೆ
ಆದರೆ ಮೃತ ರೈತ ಕಾಮಗಾರಿ ನಡೆಸುತ್ತಿರುವ ವೇಳೆ ವಿರೋಧ ವ್ಯಕ್ತಪಡಿಸಿದ್ದರು. ಎಕರೆಗೆ 5 ಲಕ್ಷ ರೂ ಪರಿಹಾರ ಎಂದರೆ ಅನ್ಯಾಯವಾಗುತ್ತದೆ. ಪ್ರಸ್ತುತ ಪ್ರತಿ ಎಕರೆ ಜಮೀನಿಗೆ 30 ರಿಂದ 40 ಲಕ್ಷ ರೂ ಇದೆ. ಹೀಗಿರುವಾಗ ಎಕರೆಗೆ ಅಡಕೆ ತೋಟಕ್ಕೆ ಕೇವಲ 5 ಲಕ್ಷ ರೂಪಾಯಿ ಪರಿಹಾರ ಎಂದರೆ ಜೀವನ ಮಣ್ಣು ಸೇರಿದಂತೆ ಎಂದು ಅಧಿಕಾರಿಗಳ ಮುಂದೆ ರೈತರ ತನ್ನ ಅಳಲು ತೋಡಿಕೊಂಡಿದ್ದ. ಇದನ್ನೂ ಓದಿ: ವಿದ್ಯಾರ್ಥಿನಿಗೆ ಶರ್ಟ್ ಬಿಚ್ಚಿಕೊಡಲು ಮುಂದಾದ ಕಾಫಿನಾಡಿನ ಸರ್ಕಲ್ ಇನ್ಸ್ಪೆಕ್ಟರ್
ಆದರೆ ಈ ಬಗ್ಗೆ ಅಧಿಕಾರಿಗಳಿಂದ ನಿರೀಕ್ಷಿತ ಉತ್ತರ ದೊರೆಯದ ಕಾರಣ ಮನನೊಂದು ತನ್ನದೇ ಅಡಿಕೆ ತೋಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್ಗೆ ಮಧ್ಯಂತರ ಅರ್ಜಿ