Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

Belgaum

39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

Public TV
Last updated: November 14, 2024 4:27 pm
Public TV
Share
3 Min Read
v somanna
SHARE

– ಸಿದ್ದರಾಮಯ್ಯರನ್ನು ಯಾರಾದ್ರೂ ಮುಟ್ಟೋಕೆ ಆಗುತ್ತಾ?

ಬೆಳಗಾವಿ: ಬೆಂಗಳೂರಿಗೆ ನೀಡಿದಷ್ಟು ಬೆಳಗಾವಿಗೂ (Belagavi) ಹೆಚ್ಚಿನ ಆದ್ಯತೆ ಕೊಡುತ್ತೇವೆ. ಬೆಳಗಾವಿ ಸೇರಿ ರಾಜ್ಯಾದ್ಯಂತ 39 ಸಾವಿರ ಕೋಟಿ ರೂ. ಅನುದಾನದಲ್ಲಿ ರೈಲ್ವೆ ಕಾಮಗಾರಿಗಳ (Railway Works) ಕೆಲಸ ಆರಂಭಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ (Somanna) ತಿಳಿಸಿದರು.

ಬೆಳಗಾವಿ-ಧಾರವಾಡ (Belagavi-Dharawada) ನೇರ ರೈಲ್ವೆ ಮಾರ್ಗ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ದಿ. ಸುರೇಶ್‌ ಅಂಗಡಿ (Suresh Angadi) ಅವರ ಕನಸಾಗಿದೆ. ರೈಲು ಹಳಿ ನಿರ್ಮಾಣಕ್ಕೆ ಒಟ್ಟು 888 ಎಕರೆ ಜಮೀನು ಬೇಕಾಗುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 660 ಎಕರೆ, ಧಾರವಾಡದಲ್ಲಿ 228 ಎಕರೆ ಜಮೀನು ಬೇಕು. 446 ಎಕರೆ ಜಮೀನನ್ನು ಮುಂದಿನ ತಿಂಗಳು ಹಸ್ತಾಂತರ ಮಾಡುವ ಬಗ್ಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ‌ ಮಾರ್ಗ ಸುಮಾರು 73 ಕಿ.ಮೀ. ವ್ಯಾಪ್ತಿ ಹೊಂದಿದ್ದು, ಧಾರವಾಡದ ಕ್ಯಾರಕೊಪ್ಪದಿಂದ ಬೆಳಗಾವಿ ದೇಸೂರದವರೆಗೆ ರೈಲು ಹಳಿ ಮಾಡುವ ಗುರಿ ಇದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಅಭಿವೃದ್ಧಿ ಮಾಡಬಹುದು. ಜಿಲ್ಲಾಧಿಕಾರಿಗಳು ಒಂದು ವರ್ಷದ ಕೆಲಸವನ್ನು ಒಂದು ತಿಂಗಳಲ್ಲಿ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡ್ರಾ ಯೋಗೇಶ್ವರ್‌?

indian railways southern railway 2

ಜನವರಿ, ಫೆಬ್ರುವರಿಯಲ್ಲಿ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸುತ್ತೇವೆ. ಬೆಳಗಾವಿ ಧಾರವಾಡ ರೈಲು ಮಾರ್ಗವನ್ನು 18 ರಿಂದ 20 ತಿಂಗಳಲ್ಲಿ ಕೆಲಸ ಮುಗಿಸಲಾಗುವುದು. ಜಿಲ್ಲಾಧಿಕಾರಿಗಳು ಜೊತೆ ಸೇರಿಕೊಂಡು ಕೆಲಸ ಮಾಡುವಂತೆ ನಮ್ಮ ಅಧಿಕಾರಿಗಳಿಗೆ ತಿಳಿಸುತ್ತೇನೆ. ಇನ್ನು ರಾಜ್ಯದಲ್ಲಿ 11 ಯೋಜನೆಗಳು ಬಾಕಿ ಇದ್ದವು. ಅದರಲ್ಲಿ 9 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. 39 ಸಾವಿರ ಕೋಟಿ ಅನುದಾನ ಒದಗಿಸಿದ್ದೇವೆ. ಐವತ್ತು ವರ್ಷದಲ್ಲಿ ಆಗದೇ ಇರುವ ಕೆಲಸಗಳು ಈ ಹತ್ತು ವರ್ಷದಲ್ಲಿ ಮಾಡಿದ್ದೇವೆ ಎಂದು ಸೋಮಣ್ಣ ಸ್ಪಷ್ಟಪಡಿಸಿದರು.

ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜೊತೆಗೂ ಮಾತಾಡಿದ್ದೇನೆ. 950 ಕೋಟಿ ರೂ. ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ಜಂಟಿ ಸರ್ವೇ, ಗಡಿ ನಿಗದಿಯಾಗಿದೆ. ಸ್ಟೇಶನ್ ಗಳನ್ನು ಎಲ್ಲೆಲ್ಲಿ ನಿರ್ಮಿಸಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ. ಬೆಳಗಾವಿಯ ತಾಲೂಕಿನ ಕೆಕೆಕೊಪ್ಪ, ಬಡಾಲ ಅಂಕಲಗಿ, ನಾಗೇನಟ್ಟಿ, ನಂದಿಹಳ್ಳಿ, ಗರ್ಲಗುಂಜಿ ಸೇರಿ ಮತ್ತಿತರ ಗ್ರಾಮಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಮೀನು ತೆಗೆದುಕೊಳ್ಳುವ ಕೆಲಸ‌ ಡಿಸಿ ಮಾಡಿದ್ದಾರೆ. ಅಲ್ಲದೇ ಬೆಳಗಾವಿ ಹೃದಯ ಭಾಗದಲ್ಲಿ 11ನೇ ಕ್ರಾಸ್ ನಲ್ಲಿ‌ 6 ಆರ್‌.ಒ.ಬಿ ಮತ್ತು ಆರ್.ಯು.ಬಿ. ತೆರೆಯಲು ನಿರ್ಧರಿಸಲಾಗಿದ್ದು, ಒಟ್ಟಾರೆ ಬೆಳಗಾವಿಗೆ ಪ್ರಧಾನಿ ಮೋದಿ ದೊಡ್ಡ ಕೊಡುಗೆ ಕೊಟ್ಟಿದ್ದಾರೆ ಎಂದು ಸೋಮಣ್ಣ ಹೇಳಿದರು.

 

ರಾಯಚೂರು, ಯಾದಗಿರಿ, ಕುಡಚಿ ಸೇರಿ ಹಲವು ಕಡೆ ಕೆಲಸ ಆರಂಭಿಸಿದ್ದೇವೆ‌. ಯೋಜನೆಗಳನ್ನು ರೂಪಿಸಲು ಜಾಗ ಬೇಕು. ನೀವು ಜಾಗ ಕೊಟ್ಟರೆ ನಾವು ಕೆಲಸ ಮಾಡುತ್ತೇವೆ. ಜಾಗ ಸಿಗಲಿಲ್ಲ ಎಂದರೆ ಯೋಜನೆ ಯೋಜನಗೆಳಾಗಿ ಉಳಿಯುತ್ತವೆ. ಅವಶ್ಯಕತೆ ಇರುವ ಕೆಲಸಗಳಿಗೆ ಆದ್ಯತೆ ಕೊಡುತ್ತೇನೆ. ಲೋಕಾಪೂರ ರಾಮದುರ್ಗ ರೈಲು, ಸವದತ್ತಿ ಯಲ್ಲಮ್ಮಗುಡ್ಡ ರೈಲು ಯೋಜನೆ ಕುರಿತು ಪರಿಶೀಲಿಸುತ್ತೇವೆ ಎಂದರು.

ಮುಟ್ಟೋಕೆ ಆಗುತ್ತಾ?
ಸಿದ್ದರಾಮಯ್ಯರನ್ನು (Siddaramaiah) ಯಾರಾದ್ರೂ ಮುಟ್ಟೋಕೆ ಆಗುತ್ತಾ? ಯಾರಾದ್ರು ಸಿಎಂ ಅವರನ್ನು ಮುಟ್ಟಿದ್ರೆ ಪೊಲೀಸರು ಕೇಸ್ ಹಾಕುತ್ತಾರೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ (Somanna) ವ್ಯಂಗ್ಯವಾಡಿದರು. ನನನ್ನು ಮುಟ್ಟಿದ್ರೆ ರಾಜ್ಯದ ಜನ ಸುಮ್ನೆ ಬಿಡಲ್ಲ ಎಂಬ ಸಿಎಂ ಹೇಳಿಕೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಏನ್ ಮಾತಾಡ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಅವರನ್ನು ಯಾರು ಮುಟ್ಟುವುದು ಬೇಡ. ಸಾಮಾನ್ಯ ಜನರ ಭಾವನೆಗೆ ತದ್ವಿರುದ್ಧವಾಗಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರದ ಕಾರ್ಯ ವೈಖರಿ ಸರಿಯಿಲ್ಲ ಎಂದು ದೂರಿದರು.

 

TAGGED:Belagavi-DharawadakarnatakaSomannasuresh angadiಕರ್ನಾಟಕಧಾರವಾಡಬೆಳಗಾವಿಸುರೇಶ್ ಅಂಗಡಿಸೋಮಣ್ಣ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
2 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
3 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
3 hours ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
4 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
5 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?