Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಡುಪಿಯ ಹಲವೆಡೆ ನೆರೆ ಪರಿಸ್ಥಿತಿ; ಹಾಸನ, ಕೊಡಗಿನನಲ್ಲಿ ಭೂಕುಸಿತದ ಅವಾಂತರ; ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಡುಪಿಯ ಹಲವೆಡೆ ನೆರೆ ಪರಿಸ್ಥಿತಿ; ಹಾಸನ, ಕೊಡಗಿನನಲ್ಲಿ ಭೂಕುಸಿತದ ಅವಾಂತರ; ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ!

Bengaluru City

ಉಡುಪಿಯ ಹಲವೆಡೆ ನೆರೆ ಪರಿಸ್ಥಿತಿ; ಹಾಸನ, ಕೊಡಗಿನನಲ್ಲಿ ಭೂಕುಸಿತದ ಅವಾಂತರ; ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ!

Public TV
Last updated: July 17, 2024 11:11 pm
Public TV
Share
3 Min Read
Rain 03 1
SHARE

ಬೆಂಗಳೂರು: ಉತ್ತರ ಕನ್ನಡ (Uttara Kannada) ಜಿಲ್ಲೆ ಮೇಲೆ ಪ್ರಕೃತಿ ಮುನಿಸಿಕೊಂಡಂತಿದೆ. ಶಿರೂರು ಭೂಕುಸಿತ ದುರಂತ ಇಡೀ ಕರಾವಳಿಯನ್ನ ಆತಂಕದ ಕಡಲಲ್ಲಿ ಮುಳುಗಿಸಿದೆ. ಶಿರೂರು ಭೂಕುಸಿತದಿಂದ ಹಲವು ದುರಂತಗಳು ಸಂಭವಿಸಿವೆ. 200 ಮೀಟರ್‌ನಷ್ಟು ಗಾತ್ರದ ಗುಡ್ಡ ಕುಸಿದ ಧಾಟಿಗೆ ಗಂಗಾವಳಿ ನದಿಯಲ್ಲಿ ಮಿನಿ ಸುನಾಮಿ ಸೃಷ್ಟಿಯಾಗಿ ನದಿ ತಟದ ಉಳುವರೆ ಗ್ರಾಮದ ನಾಲ್ಕು ಮನೆ ನೆಲಸಮವಾಗಿವೆ.

10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಸೀಥಿಗೌಡ ಎಂಬ ಮಹಿಳೆ ಗಂಗಾವಳಿ ಪಾಲಾಗಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಇನ್ನು, ನದಿಗೆ ಬಿದ್ದ ಹೆಚ್‌ಪಿ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗ್ತಿತ್ತು. ಕೂಡಲೇ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಟ್ಯಾಂಕರ್ ವಾಲ್ ಬಂದ್ ಮಾಡಿದ್ದಾರೆ. ನದಿ ತಟದ 35 ಕುಟುಂಬಗಳಿಗೆ ನದಿ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ.

Rain 01 1

ಇನ್ನೂ ಶಿರೂರು ಬಳಿ ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ. 90 ಮೀಟರ್ ಗುಡ್ಡ ಬಿರುಕುಬಿಟ್ಟಿದೆ. ಬಿರುಕಿನ ಪ್ರಮಾಣ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ. ಸಂಜೆ ಸಣ್ಣಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಹೀಗಾಗಿ ರಕ್ಷಣಾ ಕಾರ್ಯಚರಣೆ ಸ್ಥಗಿತಗೊಂಡಿದ್ದು, ಗುರುವಾರ ಮತ್ತೆ ಮುಂದುವರಿಯಲಿದೆ. ಈ ಭಾಗದ ಜನರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿಸಲಾಗಿದೆ. ಒಟ್ಟು ಏಳು ಮಂದಿ ಬಲಿ ಆಗಿದ್ದು, ಇನ್ನೂ ಮೂವರ ಶವಗಳು ಪತ್ತೆಯಾಗಬೇಕಿದೆ. ಮಣ್ಣಿನಡಿ ಕಾರೊಂದು ಹೂತುಹೋಗಿರೋದನ್ನು ಜಿಪಿಎಸ್ ಮೂಲಕ ಪತ್ತೆ ಹಚ್ಚಲಾಗಿದೆ. ಹೀಗಾಗಿ ಸಾವು ನೋವು ಇನ್ನಷ್ಟು ಹೆಚ್ಚುವ ಸಂಭವ ಇದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಅವೈಜ್ಞಾನಿಕ ಕಾಮಗಾರಿ ಸಂಬಂಧ ಕೇಂದ್ರಕ್ಕೆ ದೂರು ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Rain 02 1

ಕರಾವಳಿ ತತ್ತರ:
ಭಾರೀ ಮಳೆಗೆ ಕರಾವಳಿ ಜಿಲ್ಲೆಗಳು ತತ್ತರಿಸಿವೆ. ಉಡುಪಿ ಜಿಲ್ಲೆಯಲ್ಲಿ ದಾಖಲೆಯ 148 ಮಿಮೀ ಮಳೆಯಾಗಿದೆ. ಹೆಬ್ರಿಯಲ್ಲಿ ಅತ್ಯಧಿಕ ಅಂದ್ರೆ 203 ಮಿ.ಮೀ, ಕುಂದಾಪುರ 186, ಬ್ರಹ್ಮಾವರ 164, ಬೈಂದೂರು 151 ಮಿಲಿಮೀಟರ್‌ ಮಳೆಯಾಗಿದೆ. ಸ್ವರ್ಣಾ, ಸೀತಾ ನದಿಗಳ ರೌದ್ರನರ್ತನಕ್ಕೆ ಬೈಂದೂರಿನ ಹಲವು ಗ್ರಾಮಗಳು ಜಲಾವೃತವಾಗಿವೆ. ಗದ್ದೆ, ರಸ್ತೆಯಲ್ಲಿ ಜನ ದೋಣಿಯಲ್ಲಿ ಸಂಚರಿಸುವಂತಾಗಿದೆ. ನೀಲಾವರದ ನಾಗದೇವರ ಗುಡಿ ಜಲಾವೃತವಾಗಿದೆ. ಬ್ರಹ್ಮಾವರದ ಅಚ್ಲಾಡಿಯಲ್ಲಿ ಅನಾರೋಗ್ಯದಿಂದ ಬಳಲ್ತಿದ್ದ ವೃದ್ಧೆಯನ್ನು ದೋಣಿ ನೆರವಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಮಡಿಸಾಲು ಹೊಳೆ ಉಕ್ಕಿ ಹರಿದ ಪರಿಣಾಮ ನೂರಾರು ಎಕರೆ ಕೃಷಿ ಭೂಮಿ ಮುಳುಗಿದೆ. ಕಾಪು ತಾಲೂಕಿನ ಕುರ್ಕಾಲು ಕಿಂಡಿ ಅಣೆಕಟ್ಟಿಗೆ ನಾಡದೋಣಿಯೊಂದು ಸಿಲುಕಿದ್ದು, ನೀರಿನ ಹರಿವಿಗೆ ತಡೆಯಾಗಿದೆ. ದಕ್ಷಿಣ ಕನ್ನಡದ ನದಿಗಳು ಉಕ್ಕೇರಿವೆ. ಮಂಗಳೂರು ಹೊರವಲಯದ ಅಡ್ಯಾರ್ – ಪಾವೂರು ಬಳಿಯ ತಗ್ಗುಪ್ರದೇಶದ ಕೃಷಿಭೂಮಿಗೆ ನೀರು ನುಗ್ಗಿದೆ. ನೇತ್ರಾವತಿ ನದಿಗೆ ಪಾವೂರು ಬಳಿ ಅಡ್ಡಲಾಗಿ ಕಟ್ಟಿರುವ ಡ್ಯಾಂ ಭರ್ತಿಯಾಗಿದ್ದು, ಎಲ್ಲಾ 36 ಗೇಟ್‌ಗಳಿಂದ ನೀರನ್ನು ಸಮುದ್ರಕ್ಕೆ ಹೊರಬಿಡಲಾಗ್ತಿದೆ. ನದಿ ಪಾತ್ರದ ಜನರಿಗೂ ಎಚ್ಚರಿಕೆ ನೀಡಲಾಗಿದೆ.

Rain 04

ಹಾಸನದಲ್ಲೂ ಭೂಕುಸಿತ:
ಅಲ್ಲದೇ ಮಲೆನಾಡು ಭಾಗದಲ್ಲೂ ಉತ್ತಮ ಮಳೆ ಆಗ್ತಿದೆ. ಆಗುಂಬೆಯಲ್ಲಿ 210, ಭಾಗಮಂಡಲದಲ್ಲಿ 150, ಶೃಂಗೇರಿ, ಕೊಟ್ಟಿಗೆಹಾರ, ಕಮ್ಮರಡಿಯಲ್ಲಿ 140 ಮಿಲಿಮೀಟರ್ ಮಳೆಯಾಗಿದೆ. ಸಕಲೇಶಪುರದ ದೊಡ್ಡತಪ್ಪಲು ಬಳಿ ರಸ್ತೆ ಮೇಲೆ ಗುಡ್ಡ ಕುಸಿದಿದೆ. ಕೊಲ್ಲಹಳ್ಳಿ ಬಳಿ ಹೈವೇಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. 500 ಮೀಟರ್ ಉದ್ದಕ್ಕೂ ಕುಸಿತವಾಗ್ತಿದೆ. ಸೂಕ್ತ ತಡೆಗೋಡೆ ನಿರ್ಮಿಸದ ಕಾರಣ ಮಣ್ಣು ಕೊಚ್ಚಿ ಹೋಗ್ತಿದೆ. ಹೇಮಾವತಿ ನದಿ ಉಕ್ಕಿಹರಿದ ಪರಿಣಾಮ ಹೊಳೆಮಲ್ಲೇಶ್ವರ ದೇಗುಲದ ಮೆಟ್ಟಿಲು ಜಲಾವೃವಾಗಿವೆ. ಜಂಬರಡಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಕೊಡಗಿನ ಕರ್ತೋಜಿ ಮುಖ್ಯರಸ್ತೆ ಬಿರುಕುಬಿಟ್ಟಿದ್ದು, ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಹೆದ್ದಾರಿ ಪ್ರಾಧಿಕಾರ ಕಾಮಗಾರಿಗೆ ಮುಂದಾಗಿದೆ. ಕೊಪ್ಪ ತಾಲೂಕಿನ ಗುಡ್ಡೆತೋಟದಲ್ಲಿ 2 ಮನೆಗಳ ಮೇಲೆ ಗುಡ್ಡ ಕುಸಿದಿದೆ. ಭದ್ರಾನದಿ ಅಪಾಯದ ಮಟ್ಟ ಮೀರಿದ್ದು, ಕಳಸ ಸಮೀಪದ ಹೆಬ್ಬಾಳೆ ಸೇತುವೆ ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಶೃಂಗೇರಿ ಜಲಾವೃತವಾಗಿದ್ದು, ತುಂಗೆ ಶಾಂತಿಸಲೆಂದು ಶೃಂಗೇರಿಮಠದ ಕಿರಿಯ ಶ್ರೀಗಳು ಪೂಜೆ ಸಲ್ಲಿಸಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರಿನ ಪ್ರವಾಸಿತಾಣಗಳಿಗೆ ಸದ್ಯಕ್ಕೆ ಯಾರು ಬರಬೇಡಿ ಎಂದು ಡಿಸಿ ಮನವಿ ಮಾಡಿದ್ದಾರೆ.

Rain 05

ದಕ್ಷಿಣ ಒಳನಾಡಿಗೂ ಜಲದಿಗ್ಭಂದನ:
ರಣಮಳೆಯ ಆರ್ಭಟದಿಂದಾಗಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವೆಡೆ ಮಳೆ ಅಬ್ಬರವಿದೆ. ಕಾವೇರಿಕೊಳ್ಳದ ಜಲಾಶಯಗಳಿಗೆ ನೀರಿನ ಒಳಹರಿವು-ಹೊರಹರಿವು ಹೆಚ್ಚಿದೆ. 24 ಗಂಟೆಯಲ್ಲಿ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಸೇರಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಅಧಿಕ ನೀರು ಬಿಟ್ಟಿರುವ ಕಾರಣ ನಂಜನಗೂಡಿನ ಹಳ್ಳದಕೇರಿಗೆ ನೀರು ನುಗ್ಗಿದ್ದು, ಬಡಾವಣೆ ಮುಳುಗಡೆ ಭೀತಿ ಎದುರಿಸ್ತಿದೆ. ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ ಎದುರಾಗಿದೆ. ಬಿದಿರಹಳ್ಳಿ ಸೇತುವೆ ಮುಳುಗಡೆಯಾಗಿದೆ. ಸರಗೂರು ತಾಲೂಕಿನ ಹಲವು ಗ್ರಾಮಗಳ ಸಂಪರ್ಕಕ್ಕೆ ತೊಂದರೆಯಾಗಿದೆ.

TAGGED:bengalurudakshina kannadaIMDkabini damKarnataka RainskrsUttara Kannadaಕಬಿನಿಕರ್ನಾಟಕಕರ್ನಾಟಕ ಸರ್ಕಾರಕೆಆರ್‍ಎಸ್ ಡ್ಯಾಂಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
35 minutes ago
POCSO Special Court
Bengaluru City

ಬೆಂಗಳೂರು | ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಅರೆಸ್ಟ್‌

Public TV
By Public TV
42 minutes ago
TIRUPATI LADDU
Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
By Public TV
1 hour ago
KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
1 hour ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
1 hour ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?