ಕೊಪ್ಪಳ: ಧಾರಾಕಾರ ಮಳೆಯಿಂದಾಗಿ ಭತ್ತದ ಬೆಳೆ ನಾಶವಾದ ಹಿನ್ನೆಲೆ ರೈತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ನಡೆದಿದೆ.
ಕೊಪ್ಪಳ (Koppal) ತಾಲೂಕಿನ ಬಸಾಪುರ (Basapur) ಗ್ರಾಮದ ರೈತ ಲಕ್ಷ್ಮಣ ರಾಜರಾಮಪೇಟೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಇದನ್ನೂ ಓದಿ:ಬೆಂಗಳೂರು-ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ
ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಸರ್ವೇ ನಂ. 24 ಮತ್ತು 25ರಲ್ಲಿ ಒಟ್ಟು 8 ಎಕರೆಯಲ್ಲಿ ಭತ್ತ ಬೆಳೆಯಲು ರೈತ ಲಕ್ಷಂತರ ರೂ. ಖರ್ಚು ಮಾಡಿದ್ದಾರೆ. ಜೊತೆಗೆ ರೈತ ಸುಮಾರು 4 ಲಕ್ಷ ರೂ. ಸಾಲ ಮಾಡಿದ್ದಾನೆ. ಈ ನಡುವೆ ಸತತ ಮಳೆಯಿಂದ ಭತ್ತ ನೆಲಕಚ್ಚಿದ್ದು, ಕಟಾವು ಮಾಡುವುದು ಕಷ್ಟ ಸಾಧ್ಯವಾಗಿದೆ. ಇದರಿಂದ ನೊಂದ ರೈತ ಲಕ್ಷ್ಮಣ ಅವರು ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಲು ಮುಂದಾಗಿದ್ದಾರೆ. ವಿಷಯ ತಿಳಿದ ಪಕ್ಕದ ಜಮೀನಿನವರು ರೈತನಿಗೆ ಬುದ್ಧಿವಾದ ಹೇಳಿ, ಅವಘಡ ತಪ್ಪಿಸಿದ್ದಾರೆ.
ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ತಾಲೂಕಿನಲ್ಲಿ ಭತ್ತ ಬೆಳೆದ ರೈತರು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದರು. ಆದರೆ, ತೆನೆ ಬಂದ ವೇಳೆ ಮಳೆಯಾಗಿದ್ದರಿಂದ ಭತ್ತದ ಬೆಳೆ ಕಟಾವು ಮಾಡಲು ಸಮಸ್ಯೆಯಾಗಿದೆ. ನಾಲ್ಕೈದು ದಿನದಿಂದ ಗಾಳಿ ಸಹಿತ ಮಳೆ ಸುರಿದು, ಭತ್ತದ ಬೆಳೆ ನೆಲಕಚ್ಚಿದೆ. ಕೆಲವೆಡೆ ಅರ್ಧದಷ್ಟು ನೆಲ ಕಚ್ಚಿದ್ದರೆ ಮತ್ತಷ್ಟು ಕಡೆ ಸಂಪೂರ್ಣ ಬೆಳೆ ನೆಲಕ್ಕುರುಳಿದೆ. ತಾಲೂಕಾದ್ಯಂತ ಭತ್ತದ ಬೆಳೆ ನೆಲಕಚ್ಚಿದ್ದು, ರೈತರು ಸಮಸ್ಯೆ ಎದುರಿಸುವಂತಾಗಿದೆ. ದೀಪಾವಳಿ ನಂತರ ಭತ್ತದ ಬೆಳೆ ಕಟಾವು ಮಾಡಬೇಕು ಎಂದುಕೊಂಡಿದ್ದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಸತತ ಮಳೆಯಾದ ಹಿನ್ನೆಲೆ ಕೊಪ್ಪಳ ತಾಲೂಕಿನ ಹಿಟ್ನಾಳ, ಹುಲಿಗಿ, ಅಗಳಕೇರಾ, ಬಂಡಿ ಹರ್ಲಾಪುರ, ಬಸಾಪುರ, ರಾಜರಾಮಪೇಟೆ, ಮಹ್ಮದ್ ನಗರ, ನಾರಾಯಣ ಪೇಟೆ, ಅಯೋಧ್ಯ ಗ್ರಾಮದಲ್ಲಿ ಸುಮಾರು ನೂರಕ್ಕೂ ಅಧಿಕ ರೈತರ ಜಮೀನಿನಲ್ಲಿ ಭತ್ತ ನೆಲಕಚ್ಚಿದೆ.ಇದನ್ನೂ ಓದಿ: Kurnool Bus Fire | ದುರಂತಕ್ಕೀಡಾದ ಖಾಸಗಿ ಬಸ್ ಮೇಲಿದೆ 23 ಸಾವಿರಕ್ಕೂ ಹೆಚ್ಚು ದಂಡ

