– ಚಿಕ್ಕಮಗಳೂರಿಗೆ ಇಂದು ಆರೆಂಜ್ ಅಲರ್ಟ್
ಕಾರವಾರ: ಕರಾವಳಿ ಭಾಗದಲ್ಲಿ ಮಳೆಯ (Rain) ಆರ್ಭಟ ಮುಂದುವರಿದ ಹಿನ್ನೆಲೆ ಉತ್ತರ ಕನ್ನಡದಲ್ಲಿ ಇಂದು (ಜೂ.12) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅಲ್ಲದೇ ಮಳೆಯ ಅಬ್ಬರ ಜೋರಾಗಿದ್ದು, ಕಾರವಾರದ (Karwar) ಆಸ್ನೋಟಿಯಲ್ಲಿ 137.5 ಎಂಎಂ ಮಳೆಯಾಗಿದೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ
ಮನೆಗಳಿಗೆ ನುಗ್ಗಿದ ನೀರು
ಇನ್ನೂ ಕಾರವಾರದಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ, ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಲ್ಲಿನ ರಾಘವೇಂದ್ರ ಸ್ವಾಮಿ ಮಠ, ಕೋಣೆನಾಲ ಸೇರಿದಂತೆ ಹಲವು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ: ದಿನೇಶ್ ಗುಂಡೂರಾವ್
ನಗರಸಭೆ ನಿರ್ಲಕ್ಷದಿಂದ ತ್ಯಾಜ್ಯ ವಿಲೇವಾರಿ ಮಾಡದೇ ಕಸ ಚರಂಡಿ, ನಾಲೆಗಳಲ್ಲಿ ಕಟ್ಟಿಕೊಂಡಿದೆ. ಇದರಿಂದ ನೀರು ತುಂಬಿಕೊಂಡು ಮನೆಗಳಿಗೆ ನುಗ್ಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಭಾರೀ ಮಳೆಯ ಕಾಋಣ ನಗರದ ಹಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದನ್ನೂ ಓದಿ: ಜನ್ಮದಿನದಂದು ಬೈಕ್ ಸವಾರರಿಗೆ ಹೆಲ್ಮೆಟ್ – ಗಿಫ್ಟ್ ನೀಡಿದ ಗ್ರಾ.ಪಂ ಉಪಾಧ್ಯಕ್ಷ
ಕಾಫಿನಾಡಿಗೆ ಇಂದು ಆರೆಂಜ್ ಅಲರ್ಟ್:
ಮತ್ತೊಂದೆಡೆ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಎರಡು ದಿನಗಳ ಕಾಲ (ಇಂದು ಮತ್ತು ನಾಳೆ) ಆರೆಂಜ್ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
+
ಸಾರ್ವಜನಿಕರಿಗೆ ಸಹ ಹಳ್ಳ, ನದಿ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಹಾಗೂ ಜಾನುವಾರು, ಬಟ್ಟೆ ತೊಳೆಯಲು ಹಳ್ಳ-ಕೆರೆಕಟ್ಟೆ ಬಳಿ ಹೋಗದಂತೆ ಸೂಚನೆ ನೀಡಿದೆ. ಧರೆ, ಗುಡ್ಡ ಕುಸಿಯುವ ಸಾಧ್ಯತೆಯಿದ್ದು ಜನ ಎಚ್ಚರಿಕೆಯಿಂದಿರುವಂತೆ ತಿಳಿಸಿದೆ.