Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಉಡುಪಿಯಲ್ಲಿ ಹೆಚ್ಚಾಗುತ್ತಿದೆ ಮಳೆರಾಯನ ಆರ್ಭಟ – ಎಲ್ಲೆಲ್ಲಿ ಏನಾಗಿದೆ?

Public TV
Last updated: August 14, 2018 8:14 pm
Public TV
Share
3 Min Read
UDP RAIN EFFECT
SHARE

ಉಡುಪಿ: ಜಿಲ್ಲೆಯಲ್ಲಿ ಮೂರನೇ ದಿನ ಸುರಿದ ಮಳೆ ಭಾರೀ ಅನಾಹುತವನ್ನು ಸೃಷ್ಟಿಸಿದೆ. ಮಹಾಮಳೆಗೆ ಹಲವೆಡೆ ಮನೆಗಳು ಹಾನಿಯಾಗಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. ತಗ್ಗು ಪ್ರದೇಶಗಳಿಗೆ ನೆರೆ ನೀರು ಆವರಿಸಿ ಜನ ಪರದಾಡುವಂತಾಗಿದೆ.

ಮೀನುಗಾರಿಕೆ ಸಂಪೂರ್ಣ ಸ್ತಬ್ಧಗೊಂಡಿದ್ದು, ಬೋಟುಗಳು ಮಲ್ಪೆ ಬಂದರಿನಲ್ಲಿ ಲಂಗರು ಹಾಕಿವೆ. ಇನ್ನು ಐತಿಹಾಸಿಕ ದುರ್ಗಾ ಪರಮೇಶ್ವರೀ ದೇಗುಲದ ಗರ್ಭಗುಡಿಗೆ ನೀರು ಬಂದಿದ್ದು, ಸಮೃದ್ಧಿಯ ಸಂಕೇತ ಎಂಬ ನೆಲೆಯಲ್ಲಿ ಈ ಭಾಗದ ಭಕ್ತಜನತೆ ಪುಳಕಗೊಂಡಿದ್ದಾರೆ.

ಮುಂಜಾಗೃತ ಕ್ರಮವಾಗಿ ಇವತ್ತು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕೇರಳದ ಮಹಾಮಳೆಯ ಪರಿಣಾಮ ಕರಾವಳಿಗೂ ತಟ್ಟಿದ್ದು, ಎಲ್ಲೆಡೆ ನೀರಿನ ಮಟ್ಟ ಏರತೊಡಗಿದೆ. ಜಿಲ್ಲೆಯ ಪಂಚನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಮುನ್ಸೂಚನೆಯನ್ನು ನೀಡತೊಡಗಿವೆ.

UDP RAIN EFFECT AV 3

ಮಹಾಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕುಂದಾಪುರದ ಕಮಲಶಿಲೆಯಲ್ಲಿ ಮೈದುಂಬಿ ಹರಿಯುತ್ತಿರುವ ಕುಬ್ಜಾ ನದಿಯ ನೀರು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಬಂದಿದ್ದು, ಭಕ್ತರು ಪುಳಕಗೊಂಡಿದ್ದಾರೆ. ವಾಡಿಕೆಯಂತೆ ಮಹಾಮಳೆಗೆ ಈ ದೇವಸ್ಥಾನದೊಳಗೆ ನೀರು ಬಂದು ಕುಬ್ಜಾ ನದಿಯೆ ದೇವಿಗೆ ನೈಸರ್ಗಿಕ ಅಭಿಷೇಕವನ್ನು ಸಲ್ಲಿಸುತ್ತದೆ. ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದರಿಂದ ಇಂದು ಗರ್ಭ ಗುಡಿಗೆ ನೀರು ಆವರಿಸಿದೆ. ಗರ್ಭಗುಡಿ ಜಲಾವೃತ ಆಗುತ್ತಿದ್ದಂತೆ ಅರ್ಚಕರು ದೇವಿಗೆ ಆರತಿ ಬೆಳಗಿದರು. ನೀರು ಬಂದ ಹಿನ್ನೆಲೆಯಲ್ಲಿ ಭಕ್ತರು ಪುಳಕಗೊಂಡರು.

UDP RAIN EFFECT AV 2

ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ 100ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ತಡರಾತ್ರಿ ಬೀಸಿದ ಸುಂಟರಗಾಳಿಗೆ ಕಾರ್ಕಳದ ಜನತೆ ನಲುಗಿ ಹೋಗಿದ್ದಾರೆ. ಸುಂಟರಗಾಳಿಗೆ ಬಹುತೇಕ ಮನೆಗಳ ಛಾವಣಿ ಹಾರಿಹೋಗಿದ್ದು, ಕೆಲ ಮನೆಗಳ ಗೋಡೆ ಕುಸಿದಿವೆ. 50ಕ್ಕೂ ಹೆಚ್ಚು ವಿದ್ಯುತ್ ಕಂಬ ನೆಲಕ್ಕೆ ಉರುಳಿವೆ. ಮಕ್ಕುಬುಲ್ ಎಂಬವರ ಮನೆ ಮೇಲೆ ಮರಬಿದ್ದು ಮನೆ ಜಖಂ ಗೊಂಡಿದ್ದು, 18 ಲಕ್ಷ ರೂ. ನಷ್ಟವಾಗಿದೆ.

ಕುಕ್ಕುಂದೂರು ಗ್ರಾಮಪಂಚಾಯತ್ ಕಟ್ಟಡವೂ ಭಾಗಶಃ ಹಾನಿಯಾಗಿದ್ದು, ಜಯಂತಿನಗರದ ಶಾಲೆ ಕಟ್ಟಡ ಕುಸಿದಿದೆ. ಇನ್ನು ಕಾರ್ಕಳ ತಾಲೂಕು ಕಚೇರಿ ಮೇಲೆ ಮರ ಉರುಳುವ ಜೊತೆಗೆ ಸಮೀಪದಲ್ಲಿದ್ದ ಸರ್ಕಾರಿ ವಾಹನದ ಮೇಲೂ ಮರದ ಕೊಂಬೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.

UDP RAIN EFFECT AV 1

ಬ್ರಹ್ಮಾವರದ ಉಪ್ಪೂರು ಸ್ವರ್ಣ ನದಿ, ಸೀತಾ ನದಿ, ಸೌಪರ್ಣಿಕ ನದಿಗಳು ಮೈದುಂಬಿ ಹರಿಯುತ್ತಿವೆ. ಪರಿಣಾಮ ನದಿತಟದ ಅಕ್ಕಪಕ್ಕದ ಮನೆಗಳಿಗೆ ನೆರೆ ನೀರು ನುಗ್ಗಿದೆ. ನಿರಂತರವಾಗಿ ಸುರಿದ ಭಾರೀ ಮಳೆಗೆ ಬ್ರಹ್ಮಾವರ ತಾಲೂಕಿನ ಬೈಕಾಡಿ, ಉಪ್ಪೂರು, ಕಲ್ಯಾಣಪುರದಲ್ಲಿ ನೆರೆ ನೀರು ಆವರಿಸಿದೆ. ಕುಂದಾಪುರ ತಾಲೂಕಿನ ಬಡಾಕೆರೆ, ನಾವುಂದ, ಬಾಗು, ಮರವಂತೆ, ಅರೆಹೊಳೆ, ಕೋಣ್ಕಿ, ನಾಡ, ಪಡುಕೋಣೆ, ಚಿಕ್ಕಳಿ, ಸೇನಾಪುರ ಗ್ರಾಮಗಳಲ್ಲಿ ನೆರೆ ನೀರು ಗದ್ದೆ, ಮನೆಗಳಿಗೆ ನುಗ್ಗಿದೆ. ನದಿ ತೀರಗಳಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದ್ದು, ದೋಣಿ ಮೂಲಕ ಸಂಚಾರ ಮಾಡುವ ಪರಿಸ್ಥಿತಿ ಎದರುರಾಗಿದೆ.

ಶಿರೂರು ಅಳ್ವೆಗದ್ದೆ ಬಂದರಿನಲ್ಲಿ ಲಂಗರು ಹಾಕಿದ 6 ದೋಣಿ ಹಾಗೂ 2 ಪರ್ಷಿಯನ್ ಬೋಟ್ ನೀರಿನಲ್ಲಿ ಕೊಚ್ಚಿ ಹೋಗಿ ಸಮುದ್ರ ಪಾಲಾಗಿದೆ. ಒಂದು ಕೋಟಿ ರೂ.ಗೂ ಅಧಿಕ ನಷ್ಟ ಸಂಭವಿಸಿದೆ. ಉಪ್ಪುಂದದ 3 ಸಾಗರ ದೀಪ ಹೆಸರಿನ ದೋಣಿ, 3 ಬಬ್ರಿಹಿಂಡ್ ಪ್ರಸಾದ ಹೆಸರಿನ ದೋಣಿ ಹಾಗೂ ಶಿರೂರಿನ ಸ್ಥಳೀಯರ 1 ಬೋಟ್, ಸೋಡಿಗದ್ದೆ ಸಮೀಪದ 1 ಬೋಟ್‍ಗೆ ಹಾನಿಯಾಗಿದೆ. ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರ ಹರಸಾಹಸದಿಂದ ದೋಣಿಗಳನ್ನು ಹಗ್ಗ ಕಟ್ಟಿ ರಕ್ಷಿಸಿದ್ದಾರೆ. ಆದರೆ ದೋಣಿ, ಬೋಟ್‍ನ ಎಂಜಿನ್‍ಗೆ ಸಂಪೂರ್ಣ ಹಾನಿಯಾಗಿದೆ. ತೂಫಾನಿನ ರಭಸಕ್ಕೆ ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟೊಂದು ಮುಳುಗಡೆಯಾಗಿದೆ.

UDP RAIN EFFECT AV 3 1

ಮೀನುಗಾರರನ್ನು ರಕ್ಷಣೆ ಮಾಡಲಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಉಪ್ಪೂರು ಹೊಳೆ, ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದ್ದು ಈ ಭಾಗದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಂದು ಮೋಡಕವಿದ ವಾತಾವರಣವಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:fishingPublic TVRain Effectudupiಅವಘಡಉಡುಪಿಪಬ್ಲಿಕ್ ಟಿವಿಮಳೆಮೀನುಗಾರಿಕೆ
Share This Article
Facebook Whatsapp Whatsapp Telegram

Cinema Updates

dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
33 minutes ago
rachita ram kamal haasan
ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ
60 minutes ago
vasishta simha kamal haasan
ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ
59 minutes ago
Ravi Ganiga
ಕನ್ನಡಕ್ಕೆ ಅಪಮಾನ ಮಾಡಿದಾಗ ಶಿವರಾಜ್ ಕುಮಾರ್ ಮಾತಾಡಬೇಕು – ರವಿ ಗಣಿಗ
3 hours ago

You Might Also Like

kea
Bengaluru City

ಮೇ 31ಕ್ಕೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ – ಕೆಇಎ

Public TV
By Public TV
6 minutes ago
Guest Lecturer 1
Bengaluru City

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

Public TV
By Public TV
30 minutes ago
Shobha Karandlaje 2
Bengaluru City

ಎಲ್ಲ ಗ್ಯಾರಂಟಿ ಕೊಟ್ಟರು, ಪ್ರಾಣದ ಗ್ಯಾರಂಟಿ ಕೊಡ್ತಿಲ್ಲ: ಶೋಭಾ ಕರಂದ್ಲಾಜೆ ಕೆಂಡಾಮಂಡಲ

Public TV
By Public TV
30 minutes ago
Shobha Karandlaje 1
Bengaluru City

ಕಮಲ್ ಹಾಸನ್ ಚಾಲ್ತಿಯಲ್ಲಿಲ್ಲದ ನಾಣ್ಯ, ವ್ಯಾಲ್ಯೂ ಇಲ್ಲ: ಶೋಭಾ ಕರಂದ್ಲಾಜೆ ವ್ಯಂಗ್ಯ

Public TV
By Public TV
43 minutes ago
Car overturns in Agumbe Ghat Locals rescue mother and child
Districts

ಭಾರೀ ಮಳೆಗೆ ಆಗುಂಬೆ ಘಾಟಿಯಲ್ಲಿ ಕಾರು ಪಲ್ಟಿ – ತಾಯಿ, ಮಗುವನ್ನು ರಕ್ಷಿಸಿದ ಸ್ಥಳೀಯರು

Public TV
By Public TV
55 minutes ago
Shiradi Ghat
Districts

ಮಲೆನಾಡು ಭಾಗದಲ್ಲಿ ಭಾರೀ ಮಳೆ – ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?