Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಡುಪಿಯಲ್ಲಿ ಹೆಚ್ಚಾಗುತ್ತಿದೆ ಮಳೆರಾಯನ ಆರ್ಭಟ – ಎಲ್ಲೆಲ್ಲಿ ಏನಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉಡುಪಿಯಲ್ಲಿ ಹೆಚ್ಚಾಗುತ್ತಿದೆ ಮಳೆರಾಯನ ಆರ್ಭಟ – ಎಲ್ಲೆಲ್ಲಿ ಏನಾಗಿದೆ?

Districts

ಉಡುಪಿಯಲ್ಲಿ ಹೆಚ್ಚಾಗುತ್ತಿದೆ ಮಳೆರಾಯನ ಆರ್ಭಟ – ಎಲ್ಲೆಲ್ಲಿ ಏನಾಗಿದೆ?

Public TV
Last updated: August 14, 2018 8:14 pm
Public TV
Share
3 Min Read
UDP RAIN EFFECT
SHARE

ಉಡುಪಿ: ಜಿಲ್ಲೆಯಲ್ಲಿ ಮೂರನೇ ದಿನ ಸುರಿದ ಮಳೆ ಭಾರೀ ಅನಾಹುತವನ್ನು ಸೃಷ್ಟಿಸಿದೆ. ಮಹಾಮಳೆಗೆ ಹಲವೆಡೆ ಮನೆಗಳು ಹಾನಿಯಾಗಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. ತಗ್ಗು ಪ್ರದೇಶಗಳಿಗೆ ನೆರೆ ನೀರು ಆವರಿಸಿ ಜನ ಪರದಾಡುವಂತಾಗಿದೆ.

ಮೀನುಗಾರಿಕೆ ಸಂಪೂರ್ಣ ಸ್ತಬ್ಧಗೊಂಡಿದ್ದು, ಬೋಟುಗಳು ಮಲ್ಪೆ ಬಂದರಿನಲ್ಲಿ ಲಂಗರು ಹಾಕಿವೆ. ಇನ್ನು ಐತಿಹಾಸಿಕ ದುರ್ಗಾ ಪರಮೇಶ್ವರೀ ದೇಗುಲದ ಗರ್ಭಗುಡಿಗೆ ನೀರು ಬಂದಿದ್ದು, ಸಮೃದ್ಧಿಯ ಸಂಕೇತ ಎಂಬ ನೆಲೆಯಲ್ಲಿ ಈ ಭಾಗದ ಭಕ್ತಜನತೆ ಪುಳಕಗೊಂಡಿದ್ದಾರೆ.

ಮುಂಜಾಗೃತ ಕ್ರಮವಾಗಿ ಇವತ್ತು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕೇರಳದ ಮಹಾಮಳೆಯ ಪರಿಣಾಮ ಕರಾವಳಿಗೂ ತಟ್ಟಿದ್ದು, ಎಲ್ಲೆಡೆ ನೀರಿನ ಮಟ್ಟ ಏರತೊಡಗಿದೆ. ಜಿಲ್ಲೆಯ ಪಂಚನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಮುನ್ಸೂಚನೆಯನ್ನು ನೀಡತೊಡಗಿವೆ.

UDP RAIN EFFECT AV 3

ಮಹಾಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕುಂದಾಪುರದ ಕಮಲಶಿಲೆಯಲ್ಲಿ ಮೈದುಂಬಿ ಹರಿಯುತ್ತಿರುವ ಕುಬ್ಜಾ ನದಿಯ ನೀರು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಬಂದಿದ್ದು, ಭಕ್ತರು ಪುಳಕಗೊಂಡಿದ್ದಾರೆ. ವಾಡಿಕೆಯಂತೆ ಮಹಾಮಳೆಗೆ ಈ ದೇವಸ್ಥಾನದೊಳಗೆ ನೀರು ಬಂದು ಕುಬ್ಜಾ ನದಿಯೆ ದೇವಿಗೆ ನೈಸರ್ಗಿಕ ಅಭಿಷೇಕವನ್ನು ಸಲ್ಲಿಸುತ್ತದೆ. ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದರಿಂದ ಇಂದು ಗರ್ಭ ಗುಡಿಗೆ ನೀರು ಆವರಿಸಿದೆ. ಗರ್ಭಗುಡಿ ಜಲಾವೃತ ಆಗುತ್ತಿದ್ದಂತೆ ಅರ್ಚಕರು ದೇವಿಗೆ ಆರತಿ ಬೆಳಗಿದರು. ನೀರು ಬಂದ ಹಿನ್ನೆಲೆಯಲ್ಲಿ ಭಕ್ತರು ಪುಳಕಗೊಂಡರು.

UDP RAIN EFFECT AV 2

ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ 100ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ತಡರಾತ್ರಿ ಬೀಸಿದ ಸುಂಟರಗಾಳಿಗೆ ಕಾರ್ಕಳದ ಜನತೆ ನಲುಗಿ ಹೋಗಿದ್ದಾರೆ. ಸುಂಟರಗಾಳಿಗೆ ಬಹುತೇಕ ಮನೆಗಳ ಛಾವಣಿ ಹಾರಿಹೋಗಿದ್ದು, ಕೆಲ ಮನೆಗಳ ಗೋಡೆ ಕುಸಿದಿವೆ. 50ಕ್ಕೂ ಹೆಚ್ಚು ವಿದ್ಯುತ್ ಕಂಬ ನೆಲಕ್ಕೆ ಉರುಳಿವೆ. ಮಕ್ಕುಬುಲ್ ಎಂಬವರ ಮನೆ ಮೇಲೆ ಮರಬಿದ್ದು ಮನೆ ಜಖಂ ಗೊಂಡಿದ್ದು, 18 ಲಕ್ಷ ರೂ. ನಷ್ಟವಾಗಿದೆ.

ಕುಕ್ಕುಂದೂರು ಗ್ರಾಮಪಂಚಾಯತ್ ಕಟ್ಟಡವೂ ಭಾಗಶಃ ಹಾನಿಯಾಗಿದ್ದು, ಜಯಂತಿನಗರದ ಶಾಲೆ ಕಟ್ಟಡ ಕುಸಿದಿದೆ. ಇನ್ನು ಕಾರ್ಕಳ ತಾಲೂಕು ಕಚೇರಿ ಮೇಲೆ ಮರ ಉರುಳುವ ಜೊತೆಗೆ ಸಮೀಪದಲ್ಲಿದ್ದ ಸರ್ಕಾರಿ ವಾಹನದ ಮೇಲೂ ಮರದ ಕೊಂಬೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.

UDP RAIN EFFECT AV 1

ಬ್ರಹ್ಮಾವರದ ಉಪ್ಪೂರು ಸ್ವರ್ಣ ನದಿ, ಸೀತಾ ನದಿ, ಸೌಪರ್ಣಿಕ ನದಿಗಳು ಮೈದುಂಬಿ ಹರಿಯುತ್ತಿವೆ. ಪರಿಣಾಮ ನದಿತಟದ ಅಕ್ಕಪಕ್ಕದ ಮನೆಗಳಿಗೆ ನೆರೆ ನೀರು ನುಗ್ಗಿದೆ. ನಿರಂತರವಾಗಿ ಸುರಿದ ಭಾರೀ ಮಳೆಗೆ ಬ್ರಹ್ಮಾವರ ತಾಲೂಕಿನ ಬೈಕಾಡಿ, ಉಪ್ಪೂರು, ಕಲ್ಯಾಣಪುರದಲ್ಲಿ ನೆರೆ ನೀರು ಆವರಿಸಿದೆ. ಕುಂದಾಪುರ ತಾಲೂಕಿನ ಬಡಾಕೆರೆ, ನಾವುಂದ, ಬಾಗು, ಮರವಂತೆ, ಅರೆಹೊಳೆ, ಕೋಣ್ಕಿ, ನಾಡ, ಪಡುಕೋಣೆ, ಚಿಕ್ಕಳಿ, ಸೇನಾಪುರ ಗ್ರಾಮಗಳಲ್ಲಿ ನೆರೆ ನೀರು ಗದ್ದೆ, ಮನೆಗಳಿಗೆ ನುಗ್ಗಿದೆ. ನದಿ ತೀರಗಳಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದ್ದು, ದೋಣಿ ಮೂಲಕ ಸಂಚಾರ ಮಾಡುವ ಪರಿಸ್ಥಿತಿ ಎದರುರಾಗಿದೆ.

ಶಿರೂರು ಅಳ್ವೆಗದ್ದೆ ಬಂದರಿನಲ್ಲಿ ಲಂಗರು ಹಾಕಿದ 6 ದೋಣಿ ಹಾಗೂ 2 ಪರ್ಷಿಯನ್ ಬೋಟ್ ನೀರಿನಲ್ಲಿ ಕೊಚ್ಚಿ ಹೋಗಿ ಸಮುದ್ರ ಪಾಲಾಗಿದೆ. ಒಂದು ಕೋಟಿ ರೂ.ಗೂ ಅಧಿಕ ನಷ್ಟ ಸಂಭವಿಸಿದೆ. ಉಪ್ಪುಂದದ 3 ಸಾಗರ ದೀಪ ಹೆಸರಿನ ದೋಣಿ, 3 ಬಬ್ರಿಹಿಂಡ್ ಪ್ರಸಾದ ಹೆಸರಿನ ದೋಣಿ ಹಾಗೂ ಶಿರೂರಿನ ಸ್ಥಳೀಯರ 1 ಬೋಟ್, ಸೋಡಿಗದ್ದೆ ಸಮೀಪದ 1 ಬೋಟ್‍ಗೆ ಹಾನಿಯಾಗಿದೆ. ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರ ಹರಸಾಹಸದಿಂದ ದೋಣಿಗಳನ್ನು ಹಗ್ಗ ಕಟ್ಟಿ ರಕ್ಷಿಸಿದ್ದಾರೆ. ಆದರೆ ದೋಣಿ, ಬೋಟ್‍ನ ಎಂಜಿನ್‍ಗೆ ಸಂಪೂರ್ಣ ಹಾನಿಯಾಗಿದೆ. ತೂಫಾನಿನ ರಭಸಕ್ಕೆ ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟೊಂದು ಮುಳುಗಡೆಯಾಗಿದೆ.

UDP RAIN EFFECT AV 3 1

ಮೀನುಗಾರರನ್ನು ರಕ್ಷಣೆ ಮಾಡಲಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಉಪ್ಪೂರು ಹೊಳೆ, ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದ್ದು ಈ ಭಾಗದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಂದು ಮೋಡಕವಿದ ವಾತಾವರಣವಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:fishingPublic TVRain Effectudupiಅವಘಡಉಡುಪಿಪಬ್ಲಿಕ್ ಟಿವಿಮಳೆಮೀನುಗಾರಿಕೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
5 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
5 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
5 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
5 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?