ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ 3 ದಿನ ಚಂಡಮಾರುತ ಮಳೆ ಆಗುವ ಎಚ್ಚರಿಕೆ ನೀಡಲಾಗಿದೆ. ಇವತ್ತು ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸಲಿದೆ. ಇವತ್ತು, ನಾಳೆ, ನಾಡಿದ್ದು ಮೂರು ದಿನ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ ಆಗುವ ಆಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಕಂದಾಯ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚಿಸಿದೆ. ಈಗಾಗಲೇ ತಮಿಳುನಾಡಿನ ತೀರ ಪ್ರದೇಶದ ಜಿಲ್ಲೆಗಳಲ್ಲಿ ಮಳೆಯಾಗ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಯಾವುದೇ ಧರ್ಮ, ಸಮಾಜ ಜಾತಿಯನ್ನು ನಿಂದಿಸೋ ಉದ್ದೇಶ ನನ್ನದಲ್ಲ ತಪ್ಪಾಗಿದೆ: ಹಂಸಲೇಖ
ಕೆಲವು ದಿನಗಳಿಂದ ಸತತವಾಗಿ ಸುರಿದ ಮಳೆಯಿಂದಾಗಿ ಜನ ಜೀವನ ತತ್ತರಿಸಿ ಹೋಗಿತ್ತು. ಆದರೆ ಮೂರ್ನಾಲ್ಕು ದಿನಗಳಿಂದ ಜನರಿಗೆ ರಿಲೀಫ್ ಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ಜನರಲ್ಲಿ ಮತ್ತೆ ಮಳೆ ಆತಂಕ ಶುರುವಾಗಿದೆ. ಇದನ್ನೂ ಓದಿ: ಮಂಜು ಪಾವಗಡ ಜೊತೆ ಶುಭಾ ಮತ್ತೊಮ್ಮೆ ಟ್ರಿಪ್