ಮಡಿಕೇರಿ: ಜೋಡುಪಾಲ ಬಳಿ ಕಳೆದ ಬಾರಿ ಗುಡ್ಡ ಕುಸಿದ ಜಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಮತ್ತೆ ಗುಡ್ಡ ಕುಸಿದಿದೆ.
ಗುಡ್ಡ ಕುಸಿತದ ಪರಿಣಾಮ ನಿರ್ಮಾಣ ಹಂತದ ಮನೆ ಜಖಂಗೊಂಡಿದೆ. ಆದರೆ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಕಳೆದ ಬಾರಿ ಗುಡ್ಡಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಅಲ್ಲಿನ ಜಾಗದ ವಾಸ್ತವ ಸ್ಥಿತಿ ಬಗ್ಗೆ ಭೂವಿಜ್ಞಾನಿಗಳು ಅಧ್ಯಯನ ನಡೆಸಿದ್ದರು. ಬಳಿಕ ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಎನ್ನುವ ಎಚ್ಚರಿಕೆಯನ್ನು ನೀಡಿದ್ದರು. ಆದರೆ ಈ ಬಾರಿ ಅಷ್ಟೊಂದು ಮಳೆ ಬಾರದಿದ್ದರೂ ಗುಡ್ಡ ಕುಸಿದಿರುವುದು ಅಲ್ಲಿನ ನಿವಾಸಿಗಳಿಗೆ ಮತ್ತಷ್ಟು ಆತಂಕ ಸೃಷ್ಟಿಸಿದೆ
ಹವಾಮಾನ ಇಲಾಖೆ ಶನಿವಾರ ಜಿಲ್ಲೆಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುವ ಸೂಚನೆಯನ್ನ ನೀಡಿತ್ತು. ಹೀಗಾಗಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿತ್ತು. ಆದರೆ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯನ್ನ ವಾಪಸ್ ಪಡೆದು ಆರೆಂಜ್ ಅಲರ್ಟ್ ಜಾರಿ ಮಾಡಿದೆ. ಅದರೆ ಬೆಳಿಗ್ಗೆಯಿಂದಲೂ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಮುರಿದು ಬಿದ್ದ ಮರ: ಮೈಸೂರು ವಿರಾಜಪೇಟೆ ಅಂತರಾಜ್ಯ ಹೆದ್ದಾರಿ ಮಧ್ಯದಲ್ಲಿ ರೋ ಮಜ್ಜಿಗೆ ಹಳ್ಳದ ಬಳಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಮೇಲೆ ಮರ ಮುರಿದು ಬಿದ್ದು ಮೂರು ವಾಹನಗಳು ಜಖಂಗೊಂಡಿದೆ. ಒಂದು ಜೀಪು,ಕಾರು, ಗೂಡ್ಸ್ ಆಟೋ ಜಖಂಗೊಂಡಿದೆ.