ಬೆಂಗಳೂರು: ಮಂಗಳವಾರ ರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆ ಬಂದಿದ್ದರಿಂದ ವಾಹನ ಸವಾರರು ಪರದಾಡಿದರು. ರಾಮನಗರದಲ್ಲೂ ಭಾರಿ ಮಳೆಯಾಗಿದ್ದು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡುವಂತಾಯಿತು.
ಮೈಸೂರಿನಲ್ಲೂ ಮಳೆಯಾಗಿದ್ದು, ನಗರದ ಹೊರವಲಯದ ಕೆಂಪಯ್ಯನಹುಂಡಿಯಲ್ಲಿ ಸಿಡಲು ಬಡಿದು ನಾಡನಹಳ್ಳಿ ಗ್ರಾಮದ ನಿವಾಸಿ ನಾಗರಾಜು (42) ಎಂಬವರು ಸಾವನ್ನಪ್ಪಿದ್ದಾರೆ. ಕೆಂಪಯ್ಯನಹುಂಡಿಗೆ ಕೂಲಿ ಕೆಲಸಕ್ಕೆ ನಾಗರಾಜು ಬಂದಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
- Advertisement -
ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಪಿ.ಗಂಗಾಪುರದಲ್ಲಿ ಒನಮ್ಮ ಎಂಬುವರಿಗೆ ಸೇರಿದ ಸೀಮೆಹಸುವೊಂದು ಸಿಡಿಲು ಬಡಿತಕ್ಕೆ ಸಿಲುಕಿ ಸಾವನ್ನಪ್ಪಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಿತ್ತಲಪುರಗ್ರಾಮದಲ್ಲಿ ಗ್ರಾಮದ ನಂಜುಂಡಯ್ಯ ಎಂಬುವರಿಗೆ ಸೇರಿದ ಹಸು ಸಾವನ್ನಪ್ಪಿದೆ. ಈ ವೇಳೆ ಅದೃಷ್ಟವಶಾತ್ ಸ್ಥಳದಲ್ಲಿದ್ದ ನಂಜುಡಯ್ಯ ಪಾರಾಗಿದ್ದಾರೆ.
- Advertisement -