Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕದ ಬಿಸಿಲ ಜಿಲ್ಲೆಗಳಲ್ಲಿ ವರ್ಷಧಾರೆ – ಉಕ್ಕಿಹರಿದ ತೊರೆಹಳ್ಳಗಳು, ಅಲ್ಲಲ್ಲಿ ಅವಾಂತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಉತ್ತರ ಕರ್ನಾಟಕದ ಬಿಸಿಲ ಜಿಲ್ಲೆಗಳಲ್ಲಿ ವರ್ಷಧಾರೆ – ಉಕ್ಕಿಹರಿದ ತೊರೆಹಳ್ಳಗಳು, ಅಲ್ಲಲ್ಲಿ ಅವಾಂತರ

Bagalkot

ಉತ್ತರ ಕರ್ನಾಟಕದ ಬಿಸಿಲ ಜಿಲ್ಲೆಗಳಲ್ಲಿ ವರ್ಷಧಾರೆ – ಉಕ್ಕಿಹರಿದ ತೊರೆಹಳ್ಳಗಳು, ಅಲ್ಲಲ್ಲಿ ಅವಾಂತರ

Public TV
Last updated: June 24, 2019 10:19 pm
Public TV
Share
4 Min Read
RAIN copy
SHARE

ಬೆಂಗಳೂರು: ಮುಂಗಾರು ಮಳೆ ಕೊನೆಗೂ ಕಾಡಿ, ಸತಾಯಿಸಿ ಬಂದಿದ್ದು, ಕೇವಲ ನಾಲ್ಕು ದಿನಗಳ ಅವಧಿಯಲ್ಲೇ ದೇಶದ 10ಕ್ಕೂ ಹೆಚ್ಚು ರಾಜ್ಯಗಳನ್ನು ಆವರಿಸಿದೆ.

ರಾಜ್ಯದ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ 20 ದಿನಗಳಿಂದ 40-45 ಡಿಗ್ರಿಯಷ್ಟು ಬಿಸಿಲಿನ ತಾಪ ದಾಖಲಾಗಿತ್ತು. ಭಾನುವಾರ ಮಧ್ಯಾಹ್ನ, ರಾತ್ರಿಯಿಂದ ಬಿಟ್ಟು ಬಿಡದೆ ಒಂದೇ ದಿನ ಮಳೆ ಸುರಿದಿದ್ದರಿಂದ ಹಲವು ಕಡೆ ಅನಾಹುತಗಳನ್ನೂ ಸೃಷ್ಟಿಸಿದ್ದು, ಸಿಡಿಲು-ಗುಡುಗು ಸಹಿತ ಸುರಿದ ಮಳೆಗೆ ಐವರು ಬಲಿಯಾಗಿದ್ದಾರೆ. ಆದರೆ, ಅಂತೂ ಮಳೆ ಬಂತು ಎಂದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ನಿನ್ನೆ ಹಾಗೂ ಇಂದು ಬೆಳಗ್ಗೆ ಸುರಿದ ಮಳೆ ಎಲ್ಲೆಲ್ಲಿ ಏನೇನು ಮಾಡಿದೆ ಎಂಬುದರ ಸಂಪೂರ್ಣ ವರದಿ ಇಲ್ಲಿದೆ.

ಬಳ್ಳಾರಿ – ಆಂಧ್ರ ಸೇರಿದಂತೆ ಬಳ್ಳಾರಿ ಗಡಿಭಾಗದಲ್ಲಿ ಸುರಿದ ಮಳೆಗೆ ಸಿರಗುಪ್ಪ ತಾಲೂಕಿನ ರಾರಾವಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ ತಡೆಗೋಡೆ ಇಲ್ಲದ ಕಾರಣ ರಸ್ತೆ ಕಾಣದೆ 2 ಲಾರಿ, 1 ಬಸ್ ಪಲ್ಟಿ ಹೊಡೆದಿದೆ. ಬಸ್ ಬೀಳುತ್ತಿದ್ದಂತೆ ಪ್ರಯಾಣಿಕರನ್ನು ಸ್ಥಳೀಯರು ಪಾರು ಮಾಡಿ ಭಾರೀ ಅನಾಹುತ ತಪ್ಪಿಸಿದ್ದಾರೆ. ಲಾರಿಯಲ್ಲಿದ್ದವರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ. ಪ್ರತಿ ವರ್ಷ ಮಳೆಯಿಂದ ಈ ರಾರಾವಿ ಸೇತುವೆ ಮಳೆಯಿಂದ ಅನಾಹುತಗಳಿಗೆ ಕಾರಣವಾಗುತ್ತಿದ್ದು, ಅನೇಕ ವರ್ಷಗಳಿಂದ ಸೇತುವೆ ತಡೆಗೋಡೆ ನಿರ್ಮಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ.

ballary

ವಿಜಯಪುರ – ಜಿಲ್ಲೆಯ ಕೋಲ್ಹಾರ ತಾಲೂಕಿನ ಹೊನಗನಹಳ್ಳಿ-ಸವನಳ್ಳಿ ಮಧ್ಯೆ ಹರಿಯುವ ಡೋಣಿ ನದಿ ಹತ್ತಿರ ಇಟ್ಟಿಗೆ ತಯಾರಿಸುತ್ತಿದ್ದ ಐವರನ್ನು ರಕ್ಷಿಸಲಾಗಿದೆ. ಮಹಾರಾಷ್ಟ್ರದ ರಾಯಗಢದ ಮಾಲಗಾಂವ ನಿವಾಸಿಗಳಾದ ರಾಕೇಶ್(3), ಕಮಲು(16), ಕಿರಣ(19), ಸವಿತಾ(27), ಅಮೂಲ ಗೋಪಿನಾಥ ಜಾಧವರ ಎಂಬುವರನ್ನು ವಿಜಯಪುರ ಉಪವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ನೇತೃತ್ವದಲ್ಲಿ ರಕ್ಷಿಸಿ, ಆಹಾರ ನೀಡಿ ಮಹಾರಾಷ್ಟ್ರಕ್ಕೆ ಕಳುಹಿಸಲಾಗಿದೆ.

vijayapur rain

ಬಾಗಲಕೋಟೆ – ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬದಾಮಿ ತಾಲೂಕಿನ ಬನಶಂಕರಿ ದೇವಸ್ಥಾನ ಜಲಾವೃತಗೊಂಡಿದೆ. ದೇವಿ ದರ್ಶನಕ್ಕಾಗಿ ಆಗಮಿಸಿದ ಭಕ್ತರು, ಪರದಾಡಿದ್ದು, ಬದಾಮಿ ಬೆಟ್ಟದ ಅಕ್ಕ-ತಂಗಿ ಜಲಾಪಾತ ಧುಮ್ಮಿಕ್ಕುತ್ತಿದೆ. ಹೀಗಾಗಿ, ಆಗಸ್ಥ್ಯ ತೀರ್ಥ ಹೊಂಡ ಮೈದುಂಬಿಕೊಳ್ಳುತ್ತಿದೆ. ಜಲಪಾತದಿಂದ ಸುರಿಯುವ ನೀರಿನ ಝರಿ ನಯನ ಮನೋಹರವಾಗಿದೆ. ಬೀಳಗಿ ಪಟ್ಟಣದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣಕ್ಕೂ ನೀರು ನುಗ್ಗಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ ಸಂಗಮನಾಥ ಹಳ್ಳ ತುಂಬಿ ಹರಿಯುತ್ತಿದೆ. ಮೂರ್ನಾಲ್ಕು ವರ್ಷದಿಂದ ಮಳೆ ಬಾರದ ಕಾರಣ ಹಳ್ಳದಲ್ಲಿ ನೀರು ಇರಲಿಲ್ಲ. ರಾತ್ರಿ ಸುರಿದ ಮಳೆಯಿಂದಾಗಿ ಹಳ್ಳದ ಪಕ್ಕದಲ್ಲಿರುವ ಸಂಗಮನಾಥ ದೇವಸ್ಥಾನ ಜಲಾವೃತವಾಗಿದ್ದು, ಗರ್ಭಗುಡಿಯಲ್ಲೂ ಮೊಣಕಾಲಿನವರೆಗೆ ನೀರು ನಿಂತಿತ್ತು. ಹೀಗಾಗಿ, ಹೊರಗಡೆಯಿಂದಲೇ ಪೂಜೆ ನಡೆಸಲಾಯಿತು.

bagalakote rain

ಬೆಳಗಾವಿ – ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮೂರು ಕಾರು, ಟ್ರಾಕ್ಟರ್‍ನ ಟ್ರೈಲರ್ ಕೊಚ್ಚಿ ಹೋಗಿದ್ದವು. ಪಟ್ಟಣದ ಭೀಮಾನಗರ ಬಡಾವಣೆಯಲ್ಲಿ ಮನೆಗೆ ನೀರು ನುಗ್ಗಿದ್ದರಿಂದ ಹುಷಾರಿಲ್ಲದೆ ಹಾಸಿಗೆ ಹಿಡಿದಿದ್ದ 82 ವರ್ಷದ ಅಜ್ಜಿ ಭಯದಿಂದ ಪ್ರಾಣಬಿಟ್ಟಿದ್ದಾರೆ. 50 ಹಾಸಿಗೆಯುಳ್ಳ ಆರೋಗ್ಯ ಕೇಂದ್ರ ಸಂಪೂರ್ಣ ಜಲಮಯವಾಗಿದೆ. ಎಲ್ಲ ವಾರ್ಡ್‍ಗಳಿಗೆ ಕೊಳಚೆ ನೀರು ನುಗ್ಗಿ, ದುರ್ವಾಸನೆ ಬರುತ್ತಿದೆ. ಬೆಳಗ್ಗೆ ಬಂದ ಸಿಬ್ಬಂದಿ ಮಳೆಯ ನೀರಿನ ಜೊತೆ ಕೆಸರನ್ನು ಸ್ವಚ್ಛ ಮಾಡಿದ್ದಾರೆ. ವಿದ್ಯುತ್ ಇಲ್ಲದೆ ರೋಗಿಗಳು ಪರದಾಡಿದರು. ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ನೀಡಿ ಪರಿಶೀಲಿಸಿದರು. ಗೆಳೆಯರ ಬಳಗ ಪ್ರಾಥಮಿಕ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಸಂಪೂರ್ಣವಾಗಿ ಜಲಾವೃತವಾಗಿದೆ.

belagavi rain

ಧಾರವಾಡ – ಭಾಗದಲ್ಲಿ ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ನವಲಗುಂದ ತಾಲೂಕಿನ ಬೆಣ್ಣಿಹಳ್ಳಕ್ಕೆ ಏಕಾಏಕಿ ನೀರು ಬಂದಿದೆ. ಮತ್ತಷ್ಟು ಮಳೆಯಾದರೆ ಪಕ್ಕದ ಜಮೀನಿಗೆ ನೀರು ನುಗ್ಗುವ ಸಾಧ್ಯತೆಯಿದೆ.

dharwad rain

ಹುಬ್ಬಳ್ಳಿ – ಧಾಜೀಭಾನ್ ಪೇಟೆಯಲ್ಲಿ ಬೈಕ್ ಸವಾರ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಅಶೋಕ್ ನಗರದ ರೈಲ್ವೆ ಸೇತುವೆ ಬಳಿ ಆಟೋ ಮುಳುಗಿದೆ.

hubballi rain

ಕೊಪ್ಪಳ – ಜಿಲ್ಲೆಯಾದ್ಯಂತ ಮಳೆ ಜೋರಾಗಿದೆ. ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಬೇವಿನ ಬೀಜ ತುಂಬಲು ಹೊಲಕ್ಕೆ ತೆರಳಿದ್ದ ಅಜ್ಜಿ-ಮೊಮ್ಮಗಳು ವರುಣನ ಆರ್ಭಟದಿಂದ ಹಳ್ಳದಲ್ಲಿ ಸಿಲುಕಿದ್ದರು. ನೀರು ಹೆಚ್ಚಾಗಿ ಭೀತಿಗೊಂಡ ಇಬ್ಬರೂ ಸಹಾಯಕ್ಕೆ ಕೂಗಾಡಿದ್ದಾರೆ. ದಾರಿಹೋಕರು ಧ್ವನಿ ಕೇಳಿಸಿಕೊಂಡು ಅಜ್ಜಿ-ಮೊಮ್ಮಗಳನ್ನು ರಕ್ಷಿಸಿದ್ದಾರೆ. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಬಳಿ ಹಿರೇಹಳ್ಳ ತುಂಬಿದೆ. ನೀರಿನ ರಭಸಕ್ಕೆ ನಿರ್ಮಾಣ ಹಂತದ ಚೆಕ್ ಡ್ಯಾಂ ಕೊಚ್ಚಿಹೋಗಿದೆ.

koppala rain 2

ಕಲಬುರಗಿ – ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಧಾರಾಕಾರ ಮಳೆಯಿಂದ ಕಲ್ಲೂರ ಗ್ರಾಮದ ನಾಲೆಯಲ್ಲಿ ಭಾರಿ ಪ್ರಮಾಣದ ನೀರು ಶೇಖರಣೆಯಾಗಿದೆ. ನೀರನ್ನು ನೋಡೋಕೆ ಜನ ಮುಗಿಬಿದ್ದಿದ್ದಾರೆ.

kalaburgi

ಬೀದರ್ – ಬಸವ ಕಲ್ಯಾಣ ತಾಲೂಕಿನ ಯಲದಗುಂಡಿ ಗ್ರಾಮದಲ್ಲಿ ನಿನ್ನೆ ದಿಢೀರ್ ಮಳೆಯಾದ ಕಾರಣ ಹೊಲದಿಂದ ಮನೆಗೆ ವಾಪಸಾಗುವಾಗ ಹಳ್ಳದಾಟಲು ಹೋಗಿ ತಾಯಿ ಮಗ ಕೊಚ್ಚಿ ಹೋಗಿದ್ದರು. 15 ವರ್ಷದ ಮಗ ಭಾಗ್ಯವಂತನ ದೇಹ ನಿನ್ನೆಯೇ ಪತ್ತೆಯಾಗಿತ್ತು. 35 ವರ್ಷದ ತಾಯಿ ಅನಿತಾ ಅವರ ದೇಹ ಸುಮಾರು 2 ಕಿ.ಮೀ. ದೂರದಲ್ಲಿ ಇಂದು ಪತ್ತೆಯಾಗಿದೆ. ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ರಾತ್ರಿಯಿಡೀ ಶೋಧಕಾರ್ಯ ನಡೆಸಿದ್ದರು.

bidar rain

ಗದಗ – ಜಿಲ್ಲೆಯಲ್ಲಿ ಇಂದೂ ಮಳೆ ಅಬ್ಬರಿಸಿದ್ದು, ಗದಗ, ಗಜೇಂದ್ರಗಡ, ರೋಣ ತಾಲೂಕಿನಲ್ಲಿ ವರ್ಷಧಾರೆಯಾಗಿದೆ. ಗಜೇಂದ್ರಗಡ ತಾಲೂಕಿನ ಕಳಕಾಪುರದಲ್ಲಿ ಶಾಲೆ, ಅಂಗನವಾಡಿ ಸೇರಿದಂತೆ ಮನೆಗಳಿಗೆ ನೀರು ನುಗ್ಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ಸಂಜೆ ಹೊತ್ತಿಗೆ ದಟ್ಟ ಮೋಡ ಆವರಿಸಿತ್ತು.

gadag rain

TAGGED:Department of MeteorologykarnatakaLossnorth karnatakaPublic TVrainಅವಾಂತರಉತ್ತರ ಕರ್ನಾಟಕಕರ್ನಾಟಕಪಬ್ಲಿಕ್ ಟಿವಿಮಳೆಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

5 6 Small Pieces Of Bones Coin Like Item Found During Excavation In Lakkundi Village
Districts

ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ

Public TV
By Public TV
15 minutes ago
Donald Trump 2
Latest

ಗ್ರೀನ್‌ಲ್ಯಾಂಡ್‌ ನಮಗೆ ಬೇಕು, ತಕ್ಷಣವೇ ಡೆನ್ಮಾರ್ಕ್‌ ಮಾತುಕತೆ ನಡೆಸಬೇಕು: ಟ್ರಂಪ್‌ ಅಬ್ಬರ

Public TV
By Public TV
41 minutes ago
Congress MLA Sivaganga Basavaraj
Davanagere

ತಾಳ್ಮೆಗೂ ಒಂದು ಮಿತಿ ಇದೆ – ಅಧಿಕಾರ ಹಸ್ತಾಂತರ ವಿಚಾರ ವರಿಷ್ಠರು ಸ್ಪಷ್ಟಪಡಿಸಬೇಕು: ಶಿವಗಂಗಾ ಬಸವರಾಜ್‌

Public TV
By Public TV
1 hour ago
T20 World Cup ICC votes to replace Bangladesh if it doesnt play in India
Cricket

ಭಾರತಕ್ಕೆ ಬರದಿದ್ದರೆ ವಿಶ್ವಕಪ್‌ನಿಂದ ಔಟ್‌ – ಬಾಂಗ್ಲಾಗೆ ಐಸಿಸಿ ವೋಟು ಏಟು

Public TV
By Public TV
2 hours ago
Man killed by Bihari laborers in Chikkamagaluru 1
Chikkamagaluru

ಚಿಕ್ಕಮಗಳೂರು | ಬಾರ್‌ನಲ್ಲಿ ಗಲಾಟೆ – ವ್ಯಕ್ತಿಯನ್ನು ಕೊಂದು ಬಯಲಲ್ಲಿ ಎಸೆದ ಬಿಹಾರಿ ಕಾರ್ಮಿಕರು

Public TV
By Public TV
2 hours ago
Deepak Shimjitha Mustafa
Crime

ರೀಲ್ಸ್‌ಗೆ ವ್ಯಕ್ತಿ ಬಲಿ ಪಡೆದ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?