– ಚರಂಡಿಯಲ್ಲಿ ಕೊಚ್ಚಿ ಹೋದ 13 ವರ್ಷದ ಬಾಲಕ
ಮುಂಬೈ: ಕಳೆದ ಮೂರು ದಿನಗಳಿಂದ ಮುಂಬೈ (Mumbai Rain) ಸೇರಿದಂತೆ ಮಹಾರಾಷ್ಟ್ರದ (Maharashtra) ಹಲವು ಭಾಗಗಳಲ್ಲಿ ಭಾರೀ ಮಳೆ (Heavy Rain) ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಮತ್ತು ದೈನಂದಿನ ಬದುಕಿನ ಮೇಲೆ ಮಳೆಯ ಪರಿಣಾಮ ತೀವ್ರವಾಗಿದೆ.
ಈ ದುರ್ಘಟನೆಗಳ ನಡುವೆ ಭಿವಂಡಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ 13 ವರ್ಷದ ಬಾಲಕ ಮುಹಮ್ಮದ್ ಅಬೂಝರ್ ಕೊಚ್ಚಿಹೋಗಿದ್ದಾನೆ. ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದರೂ ನೀರಿನ ರಭಸಕ್ಕೆ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ.
ಕಳೆದ ಆರು ದಿನಗಳಲ್ಲಿ ಮುಂಬೈ ನಗರದಲ್ಲಿ ಮಳೆಯ ಅವಾಂತರಕ್ಕೆ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಾರಿ ಮಳೆಯ ಕಾರಣ ಹಲವೆಡೆ ಭೂಕುಸಿತ, ನೀರು ನಿಲ್ಲುವುದು ಮತ್ತು ಅಪಘಾತಗಳು ಹೆಚ್ಚಾಗಿವೆ.
ಮಳೆಯ ಹೊಡೆತಕ್ಕೆ ರೈಲು ಸಂಚಾರ ತೀವ್ರವಾಗಿ ಹದಗೆಟ್ಟಿದೆ. ಇಂದು ಕೂಡ ಸೆಂಟ್ರಲ್ ಮತ್ತು ವೆಸ್ಟರ್ನ್ ರೈಲ್ವೆ ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಕೂಡ 43 ರೈಲುಗಳ ಸಂಚಾರವನ್ನ ರದ್ದುಗೊಳಿಸಲಾಗಿದೆ. ಇದರಲ್ಲಿ ಸೆಂಟ್ರಲ್ ರೈಲ್ವೆಯ 27 ಮತ್ತು ವೆಸ್ಟರ್ನ್ ರೈಲ್ವೆಯ 16 ರೈಲುಗಳು ಸೇರಿವೆ.ಇದನ್ನೂ ಓದಿ: ಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನ
ಲೋನಾವಾಲಾ-ಕರ್ಜತ್ ಘಾಟ್ ವಿಭಾಗದಲ್ಲಿ ಭೂಕುಸಿತ ಸಂಭವಿಸಿರುವುದರಿಂದ ರೈಲು ಸಂಚಾರಕ್ಕೆ ಮತ್ತಷ್ಟು ತೊಂದರೆಯಾಗಿದೆ. ಪಾಲ್ಘರ್ ಜಿಲ್ಲೆಯಲ್ಲಿ 300 ಮಿಲಿ ಮೀಟರ್ಗೂ ಹೆಚ್ಚು ಮಳೆಯಾಗಿದ್ದು, ನಲಸೋಪಾರಾ ಭಾಗದಲ್ಲಿ ಭಾರಿ ಜಲಾವೃತ ಉಂಟಾಗಿದೆ. ಇದರ ಪರಿಣಾಮವಾಗಿ ವಸಾಯಿ ಮತ್ತು ವಿರಾರ್ ನಡುವಿನ ಉಪನಗರ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ಇದನ್ನೂ ಓದಿ: ಹಿಟ್ & ರನ್ಗೆ 28 ವರ್ಷದ ಯುವಕ ಬಲಿ; ಬೈಕ್ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್
