ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ – ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

Public TV
1 Min Read
Weather 1

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ (Rain) ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂ.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉಳಿದೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ಮೆಡಿಕಲ್ ವಿದ್ಯಾರ್ಥಿಗಳು – 6 ಗಂಟೆ ಬಳಿಕ ಪತ್ತೆ

ಜೂ. 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕಿಡಿ

Share This Article