Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ರಾಜ್ಯದ ಕರಾವಳಿಯಲ್ಲಿ ಮಳೆಯಬ್ಬರ- ಮೈದುಂಬಿದ ನದಿಗಳು, ಜಮೀನು ಜಲಾವೃತ

Public TV
Last updated: July 8, 2023 3:21 pm
Public TV
Share
2 Min Read
KATEEL 1
SHARE

– ಕೃಷ್ಣನಗರಿಯಲ್ಲಿ ಆರೆಂಜ್ ಅಲರ್ಟ್

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ನದಿಗಳು ಮೈದುಂಬಿ ಹರಿಯುತ್ತದೆ. ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ಇತ್ತ ಕೃಷ್ಣ ನಗರಿ ಉಡುಪಿಯಲ್ಲಿ ಆರೆಂಜ್ ಅಲರ್ಟ್ (Orange Alert In Udupi) ಘೋಷಿಸಲಾಗಿದೆ.

ದಕ್ಷಿಣ ಕನ್ನಡ (Rain In Dakshina Kannada) ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜಿಲ್ಲೆಯ ನದಿಗಳು ಜೀವಕಳೆ ಪಡೆದಿವೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು (Kateel Shri Durgaparameshwari Temple)  ನಂದಿನಿ ನದಿ ಆವರಿಸಿದ ದೃಶ್ಯ ಮನಮೋಹಕವಾಗಿದೆ. ನಂದಿನಿ ನದಿಯ ಅಬ್ಬರದ ಹರಿವಿನ ದೃಶ್ಯವು ಛಾಯಾಗ್ರಾಹಕ ನವೀನ್ ಕಟೀಲ್ ಅವರ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

KATEEL

ಈ ನಂದಿನಿ ನದಿ (nandini River) ಜೂನ್ ತಿಂಗಳಿನಲ್ಲಿ ಸಂಪೂರ್ಣ ಬರಿದಾಗಿತ್ತು. ಜುಲೈ ತಿಂಗಳ ಮಳೆಗೆ ಮೈ ತುಂಬಿ ಹರಿದಿದೆ. ನಂದಿನಿ ನದಿಗೂ ಕಟೀಲು ಕ್ಷೇತ್ರಕ್ಕೂ ಪೌರಾಣಿಕ ನಂಟು ಇದೆ. ನಂದಿನಿ ನದಿ ಮಧ್ಯೆಯೇ ಶ್ರೀ ದುರ್ಗೆ ಉದ್ಭವಿಸಿದ್ದಾಳೆ. ಹೀಗಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಂದಿನಿ ನದಿಯ ಮಧ್ಯದಲ್ಲಿ ಇದ್ದು, ಇದೀಗ ಈ ನಂದಿನಿ ನದಿ ಭಕ್ತರ ಕಣ್ಮನ ಸೆಳೆಯುತ್ತಿದೆ.

ಮಂಗಳೂರಿನಲ್ಲಿ ಮಳೆಯ ಅಬ್ಬರ ಕಡಿಮೆಯಾದ ಬೆನ್ನಲ್ಲೇ ಕಡಲ ತೀರಗಳಲ್ಲಿ ಕಡಲ್ಕೊರೆತ ತಡೆಗೆ ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ. ಮಂಗಳೂರಿನ ಬೈಕಂಪಾಡಿ, ಮೀನಕಳಿಯ, ಪಣಂಬೂರು ಬೀಚ್ ಗಳಲ್ಲಿ ಮರಳು ಚೀಲಗಳ ಅಳವಡಿಕೆಯ ತುರ್ತು ಕಾಮಗಾರಿ ಆರಂಭಗೊಂಡಿದೆ. ಮೀನಕಳಿಯ ಕಡಲ ತೀರದಲ್ಲಿ ಹತ್ತಕ್ಕೂ ಅಧಿಕ ಮನೆಗಳು ಸಮುದ್ರ ಪಾಲಾಗುವ ಅಪಾಯದಲ್ಲಿದ್ದು, ಸದ್ಯ ಜೆಸಿಬಿ ಮೂಲಕ ಜಂಬೋ ಬ್ಯಾಗ್ ಗಳಿಗೆ ಮರಳು ತುಂಬಿಸಿ ದಡದಲ್ಲಿ ಇರಿಸಲಾಗುತ್ತಿದೆ. ಇದರಿಂದಾಗಿ ತಾತ್ಕಾಲಿಕವಾಗಿ ಕಡಲ್ಕೊರೆತ ತಡೆಯಬಹುದಾಗಿದೆ. ಇದನ್ನೂ ಓದಿ: ಕಿಕ್‍ಪ್ರಿಯರಿಗೆ ಶಾಕ್ ಕೊಟ್ಟ ಸರ್ಕಾರ- 170 ಇದ್ದ ಕಿಂಗ್‍ಫಿಷರ್ ಬೆಲೆ 190 ರೂ.ಗೆ ಏರಿಕೆ!

ಅಪಾಯದಲ್ಲಿರುವ ಮನೆಗಳ ತುರ್ತು ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ಸಮುದ್ರದ ಅಲೆಗಳ ಅಬ್ಬರ ಏರಿಳಿತ ಗಮನಿಸಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಸುಮಾರು ಹತ್ತಕ್ಕೂ ಅಧಿಕ ಮನೆಗಳಿಗೆ ಸಮುದ್ರ ಪಾಲಾಗುವ ಭೀತಿ ಎದುರಾಗಿದೆ. ತಾತ್ಕಾಲಿಕವಾಗಿ ಅಳವಡಿಸಿದ್ದ ಸಣ್ಣ ಸ್ಯಾಂಡ್ ಬ್ಯಾಗ್ ಗಳು ಸಮುದ್ರ ಪಾಲಾಗುತ್ತಿವೆ. ಹೀಗಾಗಿ ಮತ್ತಷ್ಟು ಬಲಿಷ್ಠವಾದ ಜಂಬೋ ಸ್ಯಾಂಡ್ ಬ್ಯಾಗ್ ಗಳ ಜೋಡಣೆ ಕಾರ್ಯ ನಡೆಯುತ್ತಿದೆ.

ಇತ್ತ ಉಡುಪಿ (Rain In Udupi) ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬಿದ್ದಿರುವುದು ಕಾಪು ತಾಲೂಕಿನಲ್ಲಿ. ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಕಡಲು ಕೊರೆತ ವಿಪರೀತವಾಗಿದೆ. ಒಂದು ಕಡೆ ನದಿ ಒಂದು ಕಡೆ ಕಡಲ್ಕೊರೆತದ ನಡುವೆ ಜನ ಸಿಲುಕಿದ್ದಾರೆ. ಪಡುಹಿತ್ಲು ಜಾರಂದಾಯ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದು ನೂರಾರು ಎಕ್ರೆ ಗದ್ದೆ ಜಲಾವೃತವಾಗಿದೆ. ಸುತ್ತಮುತ್ತಲ ಹತ್ತಾರು ಮನೆಗಳಿಗೆ ಜಲದಿಗ್ಬಂಧನವಾಗಿದೆ. ಜಿಲ್ಲೆಯಾದ್ಯಂತ ಮುಂಜಾನೆಯಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಸಂಪೂರ್ಣ ಕಾರ್ಮೋಡ ಮುಸುಕಿದ ವಾತಾವರಣವಿದೆ. ಮುಂದಿನ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Mangalururainudupiಉಡುಪಿಮಂಗಳೂರುಮಳೆ
Share This Article
Facebook Whatsapp Whatsapp Telegram

You Might Also Like

Uttara Kannada Russian Woman Rescue
Bengaluru City

ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

Public TV
By Public TV
12 minutes ago
tesla model y
Automobile

ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

Public TV
By Public TV
1 hour ago
Umashree Saroja devi
Cinema

ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ – ಭಾವುಕರಾದ ಉಮಾಶ್ರೀ

Public TV
By Public TV
1 hour ago
Kolar KSRTC Employee Heart Attack
Districts

ಕೋಲಾರ | KSRTC ನೌಕರ ಹೃದಯಾಘಾತದಿಂದ ಸಾವು

Public TV
By Public TV
2 hours ago
Mumbai Airport
Crime

ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್

Public TV
By Public TV
2 hours ago
liquor alcohol
Latest

ಕರ್ನಾಟಕಕ್ಕಿಂತ ಕಡಿಮೆ – ಆಂಧ್ರದಲ್ಲಿ ಮದ್ಯದ ದರ ಭಾರೀ ಇಳಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?