Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಪಶ್ಚಿಮಘಟ್ಟಗಳಲ್ಲಿ ಮುಂದುವರಿದ ಭಾರೀ ಮಳೆ – ಚಾರ್ಮಾಡಿ ಘಾಟ್ ರಸ್ತೆ ಮತ್ತೆ ಕುಸಿಯುವ ಭೀತಿ

Public TV
Last updated: September 27, 2019 7:06 am
Public TV
Share
2 Min Read
rain 5
SHARE

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಮತ್ತೆ ವರುಣ ಎಂಟ್ರಿ ಕೊಟ್ಟಿದೆ. ಒಂದು ತಿಂಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ ಈಗ ಮತ್ತೆ ಅಬ್ಬರಿಸುತ್ತಿದ್ದಾನೆ.

ಹೌದು. ಆಗಸ್ಟ್ ಮೊದಲ ವಾರದ ಮಳೆಗೆ ಮಲೆನಾಡು ಅಲ್ಲೋಲ ಕಲ್ಲೋಲವಾಗಿತ್ತು. ತಿಂಗಳಿಂದ ಬಿಡುವು ಕೊಟ್ಟಿದ್ದರಿಂದ ಇನ್ನೇನು ಮಳೆ ನಿಂತೆಂದು ಜನ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮೂಡಿಗೆರೆಯ ಚಾರ್ಮಾಡಿ ಘಾಟ್, ಆಲೇಖಾನ್ ಹೊರಟ್ಟಿ, ಜಾವಳಿ, ಕೆಳಗೂರು, ಮಧುಗುಂಡಿ, ಸುಂಕಸಾಲೆ, ಕಳಸ, ಕುದುರೆಮುಖ ಸೇರಿದಂತೆ ಹಲವೆಡೆ ಸುರಿದ ಮಳೆ ಅಬ್ಬರಕ್ಕೆ ಜನ ಮತ್ತೆ ಕಂಗಾಲಾಗಿದ್ದಾರೆ.

rain e1569547896594

ಚಾರ್ಮಾಡಿ ಘಾಟಿನ ರಣಭೀಕರ ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿದಿದ್ದರೆ, ರಸ್ತೆ ಮಧ್ಯೆ ಅರ್ಧ ಅಡಿ ನೀರು ನಿಂತು ಆತಂಕ ಸೃಷ್ಠಿಸಿತ್ತು. ಸದ್ಯ ಲಘು ವಾಹನಗಳಿಗಷ್ಟೇ ಅವಕಾಶ ಕಲ್ಪಿಸಿದ್ದು, ಮತ್ತೆ ಗುಡ್ಡ ಕುಸಿಯೋ ಭೀತಿ ಎದುರಾಗಿದೆ. ಹಾಗಾಗಿ ಮಳೆ ನಿಲ್ಲೋವರೆಗೂ ಚಿಕ್ಕಮಗಳೂರು-ದಕ್ಷಿಣ ಕನ್ನಡದ ಸಂಪರ್ಕ ಸೇತುವೆಯಾಗಿರೋ ಚಾರ್ಮಾಡಿ ಘಾಟ್ ಮಾರ್ಗವನ್ನ ಬಂದ್ ಮಾಡಿದರೆ ಒಳ್ಳೆಯದು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ckm rain 2 e1569547943930

ಮಳೆ ಕೇವಲ ಚಾರ್ಮಾಡಿ ಘಾಟಿಗಷ್ಟೆ ಹೊಡೆತ ಕೊಟ್ಟಿಲ್ಲ. ಬದಲಾಗಿ ಚಾರ್ಮಾಡಿ ಘಾಟ್ ತಪ್ಪಲಲ್ಲಿರೋ ಜಿಲ್ಲೆಯ ಗಡಿಗ್ರಾಮ ಆಲೇಖಾನ್ ಹೊರಟ್ಟಿಗೂ ಕೊಟ್ಟಿದೆ. ಆಗಸ್ಟ್ ಮಳೆಗೆ ಗ್ರಾಮದ ರಸ್ತೆಯೇ ಸಂಪೂರ್ಣ ಕೊಚ್ಚಿ ಹೋಗಿತ್ತು. ಇದೇ ಗ್ರಾಮದಲ್ಲಿ ದಾರಿ ಕಾಣದೆ ಕಂಗಾಲಾಗಿದ್ದ ಜನರನ್ನ ಯೋಧರು ರಕ್ಷಿಸಿದ್ದರು. ತಿಂಗಳುಗಳ ಕಾಲ ನಿರಾಶ್ರಿತರ ಕೇಂದ್ರದಲ್ಲಿದ್ದ ಗ್ರಾಮಸ್ಥರು 20 ದಿನಗಳ ಹಿಂದಷ್ಟೇ ಗ್ರಾಮಕ್ಕೆ ತೆರಳಿದ್ದರು. ಕೊಚ್ಚಿ ಹೋಗಿದ್ದ ರಸ್ತೆಯನ್ನ ಇತ್ತೀಚೆಗಷ್ಟೇ ದುರಸ್ತಿ ಮಾಡಿದರು. ಆದರೆ ಇದೀಗ ಮತ್ತೆ ಸುರಿದ ಮಳೆಗೆ ಆಲೇಖಾನ್ ಹೊರಟ್ಟಿ ಗ್ರಾಮದ ರಸ್ತೆ ಪುನಃ ಕೊಚ್ಚಿಕೊಂಡು ಹೋಗಿದೆ. ಇಲ್ಲಿನ ನಿವಾಸಿಗಳಿಗೆ ನಾವು ಇಲ್ಲೇ ಇದ್ದರೆ ಮುಂದೊಂದು ದಿನ ನಾವು ಕೊಚ್ಚಿ ಹೋಗುತ್ತೇವಾ ಎಂಬ ಆತಂಕ ಶುರುವಾಗಿದೆ. ಹಾಗಾಗಿ ಇಲ್ಲಿನ ಜನ ಸರ್ಕಾರ ಕೂಡಲೇ ನಮ್ಮನ್ನ ಸ್ಥಳಾಂತರ ಮಾಡುವಂತೆ ಆಗ್ರಹಿಸಿದ್ದಾರೆ.

ckm rain 1 e1569547966102

ಒಟ್ಟಾರೆ, ಭಾರೀ ಮಳೆಯಿಂದ ನೀರು ಎಲ್ಲೆಂದರಲ್ಲಿ ನುಗ್ಗಿರೋದರಿಂದ ಘಟ್ಟಪ್ರದೇಶದ ಆಸುಪಾಸಿನ ಗ್ರಾಮಗಳಲ್ಲಿ ಮತ್ತೆ ಆತಂಕ ಎದುರಾಗಿದೆ. ಮಧುಗುಂಡಿ, ಮಲೆಮನೆ, ದುರ್ಗದಹಳ್ಳಿ ಜನ ಭಯ ಇಮ್ಮಡಿಗೊಂಡಿದೆ. ಮಧುಗುಂಡಿ ಗ್ರಾಮದ ನೂರಕ್ಕೂ ಹೆಚ್ಚು ಜನ ಇಂದಿಗೂ ನಿರಾಶ್ರಿತ ಕೇಂದ್ರದಲ್ಲಿದ್ದಾರೆ. ಮಳೆ ಹೀಗೆ ಮುಂದುವರಿದರೆ ಮಲೆನಾಡಿನ ಕಥೆ ಏನೋ ಎಂಬ ಆತಂಕ ಮಲೆನಾಡಿಗರಲ್ಲಿ ದಟ್ಟವಾಗಿದೆ.

ckm rain 3 e1569547992709

TAGGED:charmadi ghatChikkamagaluruPublic TVrainಚಾರ್ಮಾಡಿ ಘಾಟ್ಚಿಕ್ಕಮಗಳೂರುಪಬ್ಲಿಕ್ ಟಿವಿಮಳೆ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
2 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
5 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
6 minutes ago
train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
25 minutes ago
Ahmedabad Plane Crash Capt Sumeet Sabharwal is a LTC with 8200 Hrs of experience
Latest

ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

Public TV
By Public TV
30 minutes ago
Ahmedabad Plane Crash Nikhil Kumaraswamy
Bengaluru City

ಅಹಮದಾಬಾದ್‌ನಲ್ಲಿ ವಿಮಾನ ದುರಂತ – ನಿಖಿಲ್ ಕುಮಾರಸ್ವಾಮಿ ಸಂತಾಪ

Public TV
By Public TV
31 minutes ago
Maharashtra Murder
Crime

ಮಹಾರಾಷ್ಟ್ರ| ಮದುವೆಯಾದ ಮೂರೇ ವಾರಕ್ಕೆ ಕೊಡಲಿಯಿಂದ ಪತಿಯ ಹತ್ಯೆಗ್ಯದ ಪತ್ನಿ!

Public TV
By Public TV
37 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?