ಆರ್.ಚಂದ್ರು (R. Chandru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕಬ್ಜ’ (Kabzaa) ಸಿನಿಮಾದ ಲಿರಿಕಲ್ ಸಾಂಗ್ ಅನ್ನು ಫೆ.4ರಂದು ಹೈದರಾಬಾದ್ ನಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಒಂಬತ್ತಕ್ಕೂ ಹೆಚ್ಚು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ದೇಶದ ನಾನಾ ಕಡೆ ಸಿನಿಮಾದ ಕಾರ್ಯಕ್ರಮವನ್ನು ಮಾಡಲು ನಿರ್ದೇಶಕರು ಹೊರಟಿದ್ದಾರೆ. ಅದರ ಮೊದಲ ಭಾಗವಾಗಿ ಹೈದರಾಬಾದ್ ನಲ್ಲಿ ಲಿರಿಕಲ್ ಸಾಂಗ್ ಬಿಡುಗಡೆ ಆಗುತ್ತಿದೆ. ಈ ಕಾರ್ಯಕ್ರಮಕ್ಕೆ ತೆಲುಗು ಸಿನಿಮಾ ರಂಗದ ದಿಗ್ಗಜರೇ ಬರುವ ಸಾಧ್ಯತೆ ಇದೆ.
ಬಲ್ಲ ಮೂಲಗಳ ಪ್ರಕಾರ ಭಾರತೀಯ ಸಿನಿಮಾ ರಂಗದ ಹೆಸರಾಂತ ನಿರ್ದೇಶಕ, ತೆಲುಗಿನ ರಾಜಮೌಳಿ (Rajamouli), ನಟ ಚಿರಂಜೀವಿ ಸೇರಿದಂತೆ ತೆಲುಗಿನ ಹೆಸರಾಂತ ಕಲಾವಿದರು ಮತ್ತು ತಂತ್ರಜ್ಞರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ. ತೆಲುಗು ಚಿತ್ರೋದ್ಯಮದಲ್ಲಿ ಉಪೇಂದ್ರ ಮತ್ತು ಸುದೀಪ್ ಅವರಿಗೆ ಅಪಾರ ಅಭಿಮಾನಿ ಬಳಗ ಇರುವುದರಿಂದ ಮೊದಲ ಇವೆಂಟ್ ಅನ್ನು ಅಲ್ಲಿ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಚಂದ್ರಮುಖಿ – 2 ಡ್ಯಾನ್ಸ್ ಪ್ರಾಕ್ಟಿಸ್ ಶುರು ಮಾಡಿದ ಕಂಗನಾ ರಣಾವತ್
ಹೈದರಾಬಾದ್ ನಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾತನಾಡಲು ನಿರ್ದೇಶಕ ಆರ್.ಚಂದ್ರು ಪತ್ರಿಕಾಗೋಷ್ಠಿಯನ್ನು ಕರೆದಿದ್ದರು. ಅಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡರು. ಈ ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಾದ್ಯಂತ ಬೇರೆ ಬೇರೆ ದೇಶಗಳಲ್ಲೂ ಬಿಡುಗಡೆ ಆಗುತ್ತಿದೆ. ಅಲ್ಲದೇ, ಒಳ್ಳೆಯ ಹಣಕ್ಕೆ ರೈಟ್ಸ್ ಕೂಡ ಸೇಲ್ ಆಗಿದೆಯಂತೆ. ಟೀಸರ್ ಸೂಪರ್ ಹಿಟ್ ಆದ ಕಾರಣದಿಂದಾಗಿಯೇ ಕಬ್ಜ ಸಿನಿಮಾಗೆ ಬೇಡಿಕೆಯಂತೂ ಹೆಚ್ಚಾಗಿದೆ. ಕನ್ನಡದ ಮತ್ತೊಂದು ಸಿನಿಮಾ ಜಗತ್ತಿನಾದ್ಯಂತ ಸುದ್ದಿ ಆಗಿದ್ದು ಸಹಜವಾಗಿಯೇ ಸಂಭ್ರಮ ತಂದಿದೆ.
ಸುದೀಪ್ (Sudeep), ಉಪೇಂದ್ರ(Upendra) ಮತ್ತು ಆರ್.ಚಂದ್ರು ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಈಗಾಗಲೇ ಸಾಕಷ್ಟು ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಕೆಜಿಎಫ್ 2 ಚಿತ್ರಕ್ಕೆ ಹೋಲಿಸಲಾಗುತ್ತಿದೆ. ಕನ್ನಡದ ಮತ್ತೊಂದು ಸಿನಿಮಾ ಭಾರತೀಯ ಚಿತ್ರರಂಗವನ್ನು ಕಾಯುವಂತೆ ಮಾಡಿದ್ದು ಚಿತ್ರರಂಗದ ಹೆಗ್ಗಳಿಕೆ ಕೂಡ. ಹೆಸರಾಂತ ಕಲಾವಿದರೇ ಈ ಸಿನಿಮಾದಲ್ಲಿದ್ದು ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದಂದು ಸಿನಿಮಾವನ್ನು ರಿಲೀಸ್ ಮಾಡುತ್ತಿದ್ದಾರೆ ನಿರ್ದೇಶಕರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k