ತಮಿಳಿನ ಸೂಪರ್ ಸ್ಟಾರ್ ನಟ ರಜನಿಕಾಂತ್ (Rajanikanth) ಸದ್ಯ ‘ಜೈ ಭೀಮ್’ (Jai Bhim) ನಿರ್ದೇಶಕನ ಜೊತೆಗಿನ ಸಿನಿಮಾ ಪೂರ್ಣಗೊಳಿಸಿದ ಬೆನ್ನಲ್ಲೇ ಅಬುಧಾಬಿಗೆ ಹಾರಿದ್ದಾರೆ. ಅಲ್ಲಿ ದೇವಸ್ಥಾನವೊಂದರಲ್ಲಿ ತಲೈವಾ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಕಾನ್ ಫೆಸ್ಟಿವಲ್ನಲ್ಲಿ ಮೊದಲ ಬಹುಮಾನ ಗೆದ್ದ ಕನ್ನಡಿಗನ ಸಾಧನೆಯನ್ನು ಹಾಡಿ ಹೊಗಳಿದ ಯಶ್
ಸಿನಿಮಾಗಳ ಶೂಟಿಂಗ್ಗೆ ಬ್ರೇಕ್ ಕೊಟ್ಟು ಅಬುಧಾಬಿ ಹಿಂದೂ ಮಂದಿರಕ್ಕೆ ಭೇಟಿ ನೀಡಿ ರಜನಿಕಾಂತ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ಕೆಲ ಸಮಯ ಕಳೆದಿದ್ದಾರೆ. ದೇವಸ್ಥಾನದ ವಿಶೇಷತೆಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಸದ್ಯ ರಜನಿಕಾಂತ್ ಭೇಟಿ ನೀಡಿರುವ ಸುಂದರ ವಿಡಿಯೋವೊಂದು ಇದೀಗ ಸಾಮಾಹಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಅಂದಹಾಗೆ, ‘ಜೈಲರ್’ ಸೀಕ್ವೆಲ್ ಮತ್ತು ‘ಕೂಲಿ’ ಸಿನಿಮಾವನ್ನು ರಜನಿಕಾಂತ್ ಕೈಗೆತ್ತಿಕೊಳ್ಳಲಿದ್ದಾರೆ. ಸದ್ಯದಲ್ಲೇ ಶೂಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ. ಅದಕ್ಕಾಗಿ ತಯಾರಿ ಕೂಡ ಮಾಡುತ್ತಿದ್ದಾರೆ.