ಜೈಪುರ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ.
ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.
ಈ ನಡುವೆ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಈಗ ಇರುವ ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ಹೇಳಿದೆ.
ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು. ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶ ಬೇಡ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.
Rajasthan HC recommends declaring cow the 'national animal' ; appoints chief secy, AG to take it up with centre @IndianExpress pic.twitter.com/atraMy9OS3
— Mahim Pratap Singh (@mayhempsingh) May 31, 2017