ಜೈಪುರ: ಶಾಲೆಯ ಬಸ್ಸೊಂದು ಅಂಡರ್ ಪಾಸ್ನಲ್ಲಿ ಸಿಲುಕಿಕೊಂಡು, ಅದರಲ್ಲಿದ್ದ 70 ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ರಾಜಸ್ಥಾನದ ಸಿಕರ್ ನಲ್ಲಿ ನಡೆದಿದೆ.
ರೈಲ್ವೇ ಮಾರ್ಗದ ಕೆಳಗೆ ವಾಹನ ಸಂಚಾರಕ್ಕೆ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. ಈ ಮಾರ್ಗವಾಗಿ ಬಸ್ಸು ಚಾಲನೆ ಮಾಡಿದ ಪರಿಣಾಮ, 3 ರಿಂದ 4 ಅಡಿ ಕೆಸರು ಮಿಶ್ರಿತ ನೀರಿನಲ್ಲಿ ಬಸ್ಸು ಸಿಲುಕಿಕೊಂಡಿತ್ತು.
- Advertisement 2
ಕೊನೆಗೆ ಸ್ಥಳೀಯರು ಬಸ್ಸಿನ ಮೇಲೆ ಏಣಿ ಇಟ್ಟು, ಮಕ್ಕಳನ್ನು ಒಬ್ಬರಂತೆ ಸೇತುವೆ ಮೇಲೆ ಹತ್ತಿಸಲಾಯಿತು. ಮಕ್ಕಳ ರಕ್ಷಣಾ ಕಾರ್ಯಾಚರಣೆ ನೋಡಲು ಅನೇಕರು ಸೇರಿದ್ದರು.
- Advertisement 3
#Rajasthan: Locals rescue students from a school bus stuck in a flooded underpass in Sikar pic.twitter.com/xD5O8FvTJT
— ANI (@ANI) September 6, 2018
- Advertisement 4
ಇಂತಹದ್ದೇ ಘಟನೆ ಉತ್ತರ ಪ್ರದೇಶದ ಖಾರ್ಕೊಡ್ನಲ್ಲಿ ನಡೆದಿತ್ತು. ಶಾಲೆಯಿಂದ ಮನೆಗೆ ಹೊರಟಿದ್ದ ಬಸ್ಸು ಅಂಡರ್ ಪಾಸ್ ಮೂಲಕ ಹೋಗುವಾಗ ಮಳೆ ನೀರಿನಲ್ಲಿ ಸಿಲುಕಿತ್ತು. ಅದೃಷ್ವಶಾತ್ ಚಾಲಕ, ನಿರ್ವಾಹಕ ಹಾಗೂ ಸ್ಥಳೀಯರ ಸಹಾಯದಿಂದ ಬಸ್ಸಿನಲ್ಲಿದ್ದ 21 ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು.
#Rajasthan : #Schoolbus stuck in #floddedunderpass in #Sikar 80 children rescued. pic.twitter.com/z3gOpFomeT
— Aadi (@aadi_dev) September 6, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv